<p><strong>ದೊಡ್ಡಬಳ್ಳಾಪುರ: </strong> ಕಳೆದ ಬಾರಿಯ ಫಲಿತಾಂಶಕ್ಕಿಂತಲೂ ಈ ಬಾರಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಹಾಗೂ ಚಿಕ್ಕಾಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ಹೇಳಿದರು.<br /> <br /> ಸೋಮವಾರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಭಾರತ್ ನಿರ್ಮಾಣ್ ಸಭೆ ಹಾಗೂ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> ಐದು ವರ್ಷಗಳ ಸತತ ಪ್ರಯತ್ನ ಹಾಗೂ ಸಂಶೋಧನೆಯ ಫಲವಾಗಿ ಎತ್ತಿನ ಹೊಳೆ ಯೋಜನೆಯನ್ನು ರೂಪಿಸಲಾಗಿದೆ. ಪಕ್ಷದ ಕಾರ್ಯಕರ್ತರು ಕಳೆದ ಐದು ವರ್ಷಗಳಿಂದ ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳನ್ನು ಮತದಾರರಿಗೆ ತಿಳಿಸಬೇಕು ಎಂದರು.<br /> <br /> ಇದೇ ಸಂದರ್ಭದಲ್ಲಿ ಮಧುರೆ ಹೋಬಳಿಯ ಜೆಡಿಎಸ್ ಮುಖಂಡರಾದ ಚುಂಚೇಗೌಡ, ಆರ್.ಸಿ.ರಾಮಲಿಂಗಯ್ಯ, ಕನ್ನಮಂಗಲ ಸಿದ್ದರಾಮಣ್ಣ, ಸಿ.ರಾಮಕೃಷ್ಣ, ಮಾಜಿ ನಗರಸಭೆ ಸದಸ್ಯ ಎಸ್.ದಯಾನಂದ್, ಗಂಟಿಗಾನಹಳ್ಳಿ ಗ್ರಾ.ಪಂ.ಸದಸ್ಯ ಆರ್.ರಂಗಪ್ಪ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.<br /> <br /> ಶಾಸಕ ಟಿ.ವೆಂಕಟರಮಣಯ್ಯ, ಮುಖಂಡರಾದ ಆರ್.ಜಿ.ವೆಂಕಟಾಚಲಯ್ಯ,<br /> ಸಿ.ಡಿ.ಸತ್ಯನಾರಾಯಣಗೌಡ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಜಿ.ಎ.ಭಾವಾ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್, ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ತಿ.ರಂಗರಾಜ್, ಉಪಾಧ್ಯಕ್ಷ ಕೆ.ಎಸ್.ರವಿ, ಜಿ.ಎಂ.ಚನ್ನಪ್ಪ, ಜಿ.ಲಕ್ಷ್ಮೀಪತಿ, ಡಿ.ವಿ.ಅಶ್ವತ್ಥಪ್ಪ, ಕಾಂಗ್ರೆಸ್ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಆದಿತ್ಯ ನಾಗೇಶ್, ಕಾಂಗ್ರೆಸ್ ಎಸ್ಸಿ,ಎಸ್ಟಿ ನಗರ ಅಧ್ಯಕ್ಷ ಆಂಜನಮೂರ್ತಿ, ಕಾಂಗ್ರೆಸ್ ಯುವಘಟಕದ ತಾಲ್ಲೂಕು ಅಧ್ಯಕ್ಷ ಸಿದ್ದಬೈರೇಗೌಡ, ಎಂ.ವೆಂಕಟೇಶ್, ಕಾಂಗ್ರೆಸ್ ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಅಶ್ವಿನಿ, ನಗರ ಅಧ್ಯಕ್ಷೆ ಎಚ್.ಎಸ್.ರೇವತಿ, ಜಯಲಕ್ಷ್ಮಮ್ಮ, ನರಸಪ್ಪ, ನಾರಾಯಣಗೌಡ, ಡಿ.ಜಿ.ರಾಜಗೋಪಾಲ್ ಮತ್ತಿತರರು ಹಾಜರಿದ್ದರು.<br /> <br /> ಇದಕ್ಕೂ ಮೊದಲು ತಾಲ್ಲೂಕಿನ ರಾಜಘಟ್ಟ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ ಪೂಜೆ ಸಲ್ಲಿಸುವ ಮೂಲಕ ವಿವಿಧ ಗ್ರಾಮಗಳಲ್ಲಿ ರೋಡ್ ಷೋ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong> ಕಳೆದ ಬಾರಿಯ ಫಲಿತಾಂಶಕ್ಕಿಂತಲೂ ಈ ಬಾರಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಹಾಗೂ ಚಿಕ್ಕಾಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ಹೇಳಿದರು.<br /> <br /> ಸೋಮವಾರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಭಾರತ್ ನಿರ್ಮಾಣ್ ಸಭೆ ಹಾಗೂ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> ಐದು ವರ್ಷಗಳ ಸತತ ಪ್ರಯತ್ನ ಹಾಗೂ ಸಂಶೋಧನೆಯ ಫಲವಾಗಿ ಎತ್ತಿನ ಹೊಳೆ ಯೋಜನೆಯನ್ನು ರೂಪಿಸಲಾಗಿದೆ. ಪಕ್ಷದ ಕಾರ್ಯಕರ್ತರು ಕಳೆದ ಐದು ವರ್ಷಗಳಿಂದ ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳನ್ನು ಮತದಾರರಿಗೆ ತಿಳಿಸಬೇಕು ಎಂದರು.<br /> <br /> ಇದೇ ಸಂದರ್ಭದಲ್ಲಿ ಮಧುರೆ ಹೋಬಳಿಯ ಜೆಡಿಎಸ್ ಮುಖಂಡರಾದ ಚುಂಚೇಗೌಡ, ಆರ್.ಸಿ.ರಾಮಲಿಂಗಯ್ಯ, ಕನ್ನಮಂಗಲ ಸಿದ್ದರಾಮಣ್ಣ, ಸಿ.ರಾಮಕೃಷ್ಣ, ಮಾಜಿ ನಗರಸಭೆ ಸದಸ್ಯ ಎಸ್.ದಯಾನಂದ್, ಗಂಟಿಗಾನಹಳ್ಳಿ ಗ್ರಾ.ಪಂ.ಸದಸ್ಯ ಆರ್.ರಂಗಪ್ಪ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.<br /> <br /> ಶಾಸಕ ಟಿ.ವೆಂಕಟರಮಣಯ್ಯ, ಮುಖಂಡರಾದ ಆರ್.ಜಿ.ವೆಂಕಟಾಚಲಯ್ಯ,<br /> ಸಿ.ಡಿ.ಸತ್ಯನಾರಾಯಣಗೌಡ, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಜಿ.ಎ.ಭಾವಾ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್, ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ತಿ.ರಂಗರಾಜ್, ಉಪಾಧ್ಯಕ್ಷ ಕೆ.ಎಸ್.ರವಿ, ಜಿ.ಎಂ.ಚನ್ನಪ್ಪ, ಜಿ.ಲಕ್ಷ್ಮೀಪತಿ, ಡಿ.ವಿ.ಅಶ್ವತ್ಥಪ್ಪ, ಕಾಂಗ್ರೆಸ್ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಆದಿತ್ಯ ನಾಗೇಶ್, ಕಾಂಗ್ರೆಸ್ ಎಸ್ಸಿ,ಎಸ್ಟಿ ನಗರ ಅಧ್ಯಕ್ಷ ಆಂಜನಮೂರ್ತಿ, ಕಾಂಗ್ರೆಸ್ ಯುವಘಟಕದ ತಾಲ್ಲೂಕು ಅಧ್ಯಕ್ಷ ಸಿದ್ದಬೈರೇಗೌಡ, ಎಂ.ವೆಂಕಟೇಶ್, ಕಾಂಗ್ರೆಸ್ ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಅಶ್ವಿನಿ, ನಗರ ಅಧ್ಯಕ್ಷೆ ಎಚ್.ಎಸ್.ರೇವತಿ, ಜಯಲಕ್ಷ್ಮಮ್ಮ, ನರಸಪ್ಪ, ನಾರಾಯಣಗೌಡ, ಡಿ.ಜಿ.ರಾಜಗೋಪಾಲ್ ಮತ್ತಿತರರು ಹಾಜರಿದ್ದರು.<br /> <br /> ಇದಕ್ಕೂ ಮೊದಲು ತಾಲ್ಲೂಕಿನ ರಾಜಘಟ್ಟ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ ಪೂಜೆ ಸಲ್ಲಿಸುವ ಮೂಲಕ ವಿವಿಧ ಗ್ರಾಮಗಳಲ್ಲಿ ರೋಡ್ ಷೋ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>