<p>ಲಿಂಗಸುಗೂರ: ಹೈದರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತರುವಂತೆ ಒತ್ತಾಯಿಸಿ ಹೈ.ಕ. ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಬಂದ್ಗೆ ಲಿಂಗಸುಗೂರಿನ ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿದ್ದವು. <br /> <br /> ಪ್ರವಾಸಿ ಮಂದಿರದಲ್ಲಿದ್ದ ಸಂಸತ್ ಸದಸ್ಯ ಸಣ್ಣಫಕೀರಪ್ಪ, ಶಾಸಕ ಮಾನಪ್ಪ ವಜ್ಜಲ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆಯೂ ನಡೆಯಿತು.<br /> <br /> ಕರವೇ ಮುಖಂಡರೊಂದಿಗೆ ಚರ್ಚೆ ನಡೆಸಿದ ಸಣ್ಣಫಕೀರಪ್ಪ, ಹೈಕ ಪ್ರದೇಶ ವ್ಯಾಪ್ತಿಯ ಸಂಸದರ ನಿಯೋಗದಲ್ಲಿ ಪ್ರಧಾನಮಂತ್ರಿಯನ್ನು ಭೇಟಿ ಮಾಡಿ ನಿಲುವು ಸ್ಪಷ್ಟಪಡಿಸಿದ್ದಾಗಿ ವಿವರಿಸಿದರು. ಈ ಭಾಗದ ಶಾಸಕರು ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದಿದ್ದಾರೆ. ಕನಸು ಸಾಕಾರಗೊಳ್ಳಲಿದೆ ಎಂದರು. <br /> <br /> ನಿಯೋಗ ಸಾಕು ತಾವು ರಾಜೀನಾಮೆ ನೀಡುವ ಜೊತೆಗೆ ಹೋರಾಟಗಳಲ್ಲಿ ಪಾಲ್ಗೊಳ್ಳುವಂತೆ ಒತ್ತಡ ಹೇರಿದರು. ಆಗ ಸಮಾಧಾನಪಡಿಸಿದ ಸಂಸದ ಮತ್ತು ಶಾಸಕರು ಅಗತ್ಯ ಬಿದ್ದರೆ ರಾಜೀನಾಮೆಗೂ ಸಿದ್ದ. ತಾವು ಕೂಡ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ಘೋಷಿಸಿದಾಗ ಜಯಕಾರ ಮೊಳಗಿತು.<br /> <br /> ಕರವೇ ಮುಖಂಡರಾದ ಜಿಲಾನಿಪಾಷ, ಎಂ.ಎಂ. ಶಾಲಿ, ರಾಜೇಶ ಮಾಣಿಕ್, ಹನುಮೇಶ ನೆಲೊಗಿ, ಮಲ್ಲಿಕಾರ್ಜುನ ನಾಡಗೌಡ್ರ ಮತ್ತಿತರರು ಮುತ್ತಿಗೆ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರ: ಹೈದರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತರುವಂತೆ ಒತ್ತಾಯಿಸಿ ಹೈ.ಕ. ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಬಂದ್ಗೆ ಲಿಂಗಸುಗೂರಿನ ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿದ್ದವು. <br /> <br /> ಪ್ರವಾಸಿ ಮಂದಿರದಲ್ಲಿದ್ದ ಸಂಸತ್ ಸದಸ್ಯ ಸಣ್ಣಫಕೀರಪ್ಪ, ಶಾಸಕ ಮಾನಪ್ಪ ವಜ್ಜಲ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆಯೂ ನಡೆಯಿತು.<br /> <br /> ಕರವೇ ಮುಖಂಡರೊಂದಿಗೆ ಚರ್ಚೆ ನಡೆಸಿದ ಸಣ್ಣಫಕೀರಪ್ಪ, ಹೈಕ ಪ್ರದೇಶ ವ್ಯಾಪ್ತಿಯ ಸಂಸದರ ನಿಯೋಗದಲ್ಲಿ ಪ್ರಧಾನಮಂತ್ರಿಯನ್ನು ಭೇಟಿ ಮಾಡಿ ನಿಲುವು ಸ್ಪಷ್ಟಪಡಿಸಿದ್ದಾಗಿ ವಿವರಿಸಿದರು. ಈ ಭಾಗದ ಶಾಸಕರು ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದಿದ್ದಾರೆ. ಕನಸು ಸಾಕಾರಗೊಳ್ಳಲಿದೆ ಎಂದರು. <br /> <br /> ನಿಯೋಗ ಸಾಕು ತಾವು ರಾಜೀನಾಮೆ ನೀಡುವ ಜೊತೆಗೆ ಹೋರಾಟಗಳಲ್ಲಿ ಪಾಲ್ಗೊಳ್ಳುವಂತೆ ಒತ್ತಡ ಹೇರಿದರು. ಆಗ ಸಮಾಧಾನಪಡಿಸಿದ ಸಂಸದ ಮತ್ತು ಶಾಸಕರು ಅಗತ್ಯ ಬಿದ್ದರೆ ರಾಜೀನಾಮೆಗೂ ಸಿದ್ದ. ತಾವು ಕೂಡ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ಘೋಷಿಸಿದಾಗ ಜಯಕಾರ ಮೊಳಗಿತು.<br /> <br /> ಕರವೇ ಮುಖಂಡರಾದ ಜಿಲಾನಿಪಾಷ, ಎಂ.ಎಂ. ಶಾಲಿ, ರಾಜೇಶ ಮಾಣಿಕ್, ಹನುಮೇಶ ನೆಲೊಗಿ, ಮಲ್ಲಿಕಾರ್ಜುನ ನಾಡಗೌಡ್ರ ಮತ್ತಿತರರು ಮುತ್ತಿಗೆ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>