<p>ಬಾಗಲಕೋಟೆ: ಭಾರತೀಯ ಸನಾತನ ಸಂಸ್ಕೃತಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಪಸರಿಸುವ ಅಗತ್ಯವಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿದ್ಧರಾಮ ಮನಹಳ್ಳಿ ಪ್ರತಿಪಾದಿಸಿದರು.<br /> <br /> ನಗರದ ಸಿದ್ಧರಾಮೇಶ್ವರ ಕಲ್ಯಾಣಮಂಟಪದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಕಿಡ್ಝಿ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮಗುವನ್ನು ಸಮಾಜಮುಖಿ ವ್ಯಕ್ತಿಯನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದ್ದು, ಸಂಸ್ಕಾರ ನೀಡುವುದು ಶಿಕ್ಷಣದ ಮೂಲ ಗುರಿಯಾಗಬೇಕು ಎಂದರು. ಪ್ರಾಚಾರ್ಯೆ ದರ್ಶನಾ ಬರಾಣಪೂರ, ಅನ್ನಪೂರ್ಣ ಸರದೇಸಾಯಿ, ಅಶೋಕ ಸರದೇಸಾಯಿ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು. ಇದಾದ ಬಳಿಕ ಶಾಲಾ ಮಕ್ಕಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಭಾರತೀಯ ಸನಾತನ ಸಂಸ್ಕೃತಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಪಸರಿಸುವ ಅಗತ್ಯವಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿದ್ಧರಾಮ ಮನಹಳ್ಳಿ ಪ್ರತಿಪಾದಿಸಿದರು.<br /> <br /> ನಗರದ ಸಿದ್ಧರಾಮೇಶ್ವರ ಕಲ್ಯಾಣಮಂಟಪದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಕಿಡ್ಝಿ ಪೂರ್ವ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮಗುವನ್ನು ಸಮಾಜಮುಖಿ ವ್ಯಕ್ತಿಯನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದ್ದು, ಸಂಸ್ಕಾರ ನೀಡುವುದು ಶಿಕ್ಷಣದ ಮೂಲ ಗುರಿಯಾಗಬೇಕು ಎಂದರು. ಪ್ರಾಚಾರ್ಯೆ ದರ್ಶನಾ ಬರಾಣಪೂರ, ಅನ್ನಪೂರ್ಣ ಸರದೇಸಾಯಿ, ಅಶೋಕ ಸರದೇಸಾಯಿ ಮತ್ತಿತರರು ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು. ಇದಾದ ಬಳಿಕ ಶಾಲಾ ಮಕ್ಕಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>