<p><strong>ಬ್ಯಾಡಗಿ:</strong> `ಪೊಲೀಸರು ಎಂತಹ ಒತ್ತಡದ ಪರಿಸ್ಥಿತಿಯಲ್ಲಿಯೂ ಸಂಯಮ ಹಾಗೂ ಸಕಾರಾತ್ಮಕವಾಗಿ ವರ್ತಿಸಬೇಕು' ಎಂದು ಸಿಪಿಐ ಎಂ.ಎಚ್.ಚಿಕ್ಕರೆಡ್ಡಿ ಕಿವಿಮಾತು ಹೇಳಿದರು.<br /> <br /> ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಪಿಎಸ್ಐ ನರಸಿಂಹಮೂರ್ತಿ ಬೇಲೂರ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> `ಸಮಸ್ಯೆ ಪರಿಹರಿಸಿಕೊಳ್ಳಲು ಪೊಲೀಸ್ ಠಾಣೆಗೆ ಬರುವ ಜನರೊಂದಿಗೆ ಗೌರವ ಹಾಗೂ ಸೌಜನ್ಯದಿಂದ ನಡೆದುಕೊಂಡಲ್ಲಿ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗುತ್ತಾರೆ. ಇದರಿಂದ ಇಲಾಖೆಗೆ ಒಳ್ಳೆಯ ಹೆಸರು ಬರುವುದಲ್ಲದೆ ಪೊಲೀಸರ ಕುರಿತು ಸಾರ್ವಜನಿಕರಲ್ಲಿನ ಭಯ ಮಾಯವಾಗುತ್ತದೆ' ಎಂದರು.<br /> <br /> ಪಿಎಸ್ಐ ಬೇಲೂರ ಮಾತನಾಡಿ, `ಸಿಬ್ಬಂದಿ ಸಹಕಾರದಿಂದ ಅಲ್ಪಾವಧಿಯಲ್ಲಿಯೇ ಉತ್ತಮವಾಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ' ಎಂದರು.<br /> ಅಪರಾಧ ವಿಭಾಗದ ಪಿಎಸ್ಐ ಮಹಾಂತೇಶ ಮಾತನಾಡಿ, `ಪೊಲೀಸರು ಕರ್ತವ್ಯ ಹಾಗೂ ಪ್ರಾಮಾಣಿಕತೆಯಿಂದ ನಡೆದುಕೊಂಡರೆ ಸಾರ್ವಜನಿಕರ ಗೌರವಕ್ಕೆ ಪಾತ್ರರಾಗುತ್ತೇವೆ. ಹೀಗಾಗಿ ಇಲಾಖೆಯಲ್ಲಿ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು' ಎಂದು ಮನವಿ ಮಾಡಿದರು.<br /> <br /> ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಯಾದ ಎಎಸ್ಐ ಕಡೂರ ಹಾಗೂ ನಿಂಗಪ್ಪ ಮಾತನಾಡಿದರು. ಬಸವರಾಜ ಅಂಜುಟಗಿ ಸ್ವಾಗತಿಸಿದರು. ಅಗಸಿಮನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> `ಪೊಲೀಸರು ಎಂತಹ ಒತ್ತಡದ ಪರಿಸ್ಥಿತಿಯಲ್ಲಿಯೂ ಸಂಯಮ ಹಾಗೂ ಸಕಾರಾತ್ಮಕವಾಗಿ ವರ್ತಿಸಬೇಕು' ಎಂದು ಸಿಪಿಐ ಎಂ.ಎಚ್.ಚಿಕ್ಕರೆಡ್ಡಿ ಕಿವಿಮಾತು ಹೇಳಿದರು.<br /> <br /> ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಪಿಎಸ್ಐ ನರಸಿಂಹಮೂರ್ತಿ ಬೇಲೂರ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> `ಸಮಸ್ಯೆ ಪರಿಹರಿಸಿಕೊಳ್ಳಲು ಪೊಲೀಸ್ ಠಾಣೆಗೆ ಬರುವ ಜನರೊಂದಿಗೆ ಗೌರವ ಹಾಗೂ ಸೌಜನ್ಯದಿಂದ ನಡೆದುಕೊಂಡಲ್ಲಿ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗುತ್ತಾರೆ. ಇದರಿಂದ ಇಲಾಖೆಗೆ ಒಳ್ಳೆಯ ಹೆಸರು ಬರುವುದಲ್ಲದೆ ಪೊಲೀಸರ ಕುರಿತು ಸಾರ್ವಜನಿಕರಲ್ಲಿನ ಭಯ ಮಾಯವಾಗುತ್ತದೆ' ಎಂದರು.<br /> <br /> ಪಿಎಸ್ಐ ಬೇಲೂರ ಮಾತನಾಡಿ, `ಸಿಬ್ಬಂದಿ ಸಹಕಾರದಿಂದ ಅಲ್ಪಾವಧಿಯಲ್ಲಿಯೇ ಉತ್ತಮವಾಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ' ಎಂದರು.<br /> ಅಪರಾಧ ವಿಭಾಗದ ಪಿಎಸ್ಐ ಮಹಾಂತೇಶ ಮಾತನಾಡಿ, `ಪೊಲೀಸರು ಕರ್ತವ್ಯ ಹಾಗೂ ಪ್ರಾಮಾಣಿಕತೆಯಿಂದ ನಡೆದುಕೊಂಡರೆ ಸಾರ್ವಜನಿಕರ ಗೌರವಕ್ಕೆ ಪಾತ್ರರಾಗುತ್ತೇವೆ. ಹೀಗಾಗಿ ಇಲಾಖೆಯಲ್ಲಿ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು' ಎಂದು ಮನವಿ ಮಾಡಿದರು.<br /> <br /> ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಯಾದ ಎಎಸ್ಐ ಕಡೂರ ಹಾಗೂ ನಿಂಗಪ್ಪ ಮಾತನಾಡಿದರು. ಬಸವರಾಜ ಅಂಜುಟಗಿ ಸ್ವಾಗತಿಸಿದರು. ಅಗಸಿಮನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>