<p> ಹೊನ್ನಾಳಿ: ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಇನ್ನು ಮುಂದೆ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆಯಬೇಕಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಬಿ. ಹೇಮಚಂದ್ರ ಹೇಳಿದರು. <br /> <br /> ಪಟ್ಟಣದ ಪ್ರವಾಸಿ ಮಂದಿರದಲ್ಲಿ `ಸಕಾಲ~ ಯೋಜನೆಯ ಬಗ್ಗೆ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಸರ್ಕಾರದ 11 ಇಲಾಖೆಗಳ 151 ಯೋಜನೆಗಳನ್ನು ಸದ್ಯಕ್ಕೆ ಸಕಾಲ ವ್ಯಾಪ್ತಿಗೆ ಸೇರಿಸಲಾಗಿದೆ. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು. ನಿಗದಿತ ಅವಧಿಯಲ್ಲಿ ಕಾರ್ಯಗಳನ್ನು ಮಾಡಿಕೊಡಬೇಕು. ಇಲ್ಲವಾದಲ್ಲಿ, ವಿಳಂಬ ಮಾಡುವ ಅಧಿಕಾರಿಯ ಸಂಬಳದಲ್ಲಿ ದಿನಕ್ಕೆ ್ಙ 20ರಂತೆ ಕಡಿತಗೊಳಿಸಲಾಗುವುದು ಎಂದು ಎಚ್ಚರಿಸಿದರು. <br /> <br /> ಕಲಾ ಜಾಥಾದ ಕಲಾವಿದರು `ಸಕಾಲ~ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ತಾಲ್ಲೂಕಿನ 10 ಗ್ರಾಮ ಪಂಚಾಯ್ತಿಗಳನ್ನು ಆಯ್ಕೆ ಮಾಡಲಾಗಿದೆ. ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿನಂತಿಸಿದರು. <br /> <br /> ತಾಲ್ಲೂಕು ಪಂಚಾಯ್ತಿ ಇಒ ಎಚ್. ಹುಲಿರಾಜ್ ಮಾತನಾಡಿ, ಬೀದಿ ನಾಟಕ, ಜಾಗೃತಿ ಗೀತೆಗಳು ಮತ್ತು ಅಭಿನಯದ ಮುಖಾಂತರ ಜನರಿಗೆ `ಸಕಾಲ~ದ ಬಗ್ಗೆ ಅರಿವು ಮೂಡಿಸುವುದು ಈ ಜಾಥಾದ ಉದ್ದೇಶವಾಗಿದೆ ಎಂದು ತಿಳಿಸಿದರು. <br /> <br /> ಬಿಇಒ ಕೆ.ಸಿ. ಮಲ್ಲಿಕಾರ್ಜುನ್ ಮಾತನಾಡಿದರು. ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ, ತಾಲ್ಲೂಕು ಪಂಚಾಯ್ತಿಗಳ ಆಶ್ರಯದಲ್ಲಿ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರದ ಕಲಾ ತಂಡದ ಕಲಾವಿದರು ಜನ ಜಾಗೃತಿ ಗೀತೆ ಗಾಯನ ಮತ್ತು ಬೀದಿನಾಟಕ ಪ್ರದರ್ಶಿಸಿದರು. <br /> <br /> ಮಹಾಂತೇಶ್, ಹಾಲೇಶ್ ರಾಂಪುರ, ರುದ್ರೇಶ್, ರಂಗಸ್ವಾಮಿ, ಮಂಜುಳಾ, ರೇಣುಕಾ, ಜಾಫರ್, ನಾಗರಾಜು, ಹನುಮಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> ಹೊನ್ನಾಳಿ: ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಇನ್ನು ಮುಂದೆ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆಯಬೇಕಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಬಿ. ಹೇಮಚಂದ್ರ ಹೇಳಿದರು. <br /> <br /> ಪಟ್ಟಣದ ಪ್ರವಾಸಿ ಮಂದಿರದಲ್ಲಿ `ಸಕಾಲ~ ಯೋಜನೆಯ ಬಗ್ಗೆ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ಸರ್ಕಾರದ 11 ಇಲಾಖೆಗಳ 151 ಯೋಜನೆಗಳನ್ನು ಸದ್ಯಕ್ಕೆ ಸಕಾಲ ವ್ಯಾಪ್ತಿಗೆ ಸೇರಿಸಲಾಗಿದೆ. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು. ನಿಗದಿತ ಅವಧಿಯಲ್ಲಿ ಕಾರ್ಯಗಳನ್ನು ಮಾಡಿಕೊಡಬೇಕು. ಇಲ್ಲವಾದಲ್ಲಿ, ವಿಳಂಬ ಮಾಡುವ ಅಧಿಕಾರಿಯ ಸಂಬಳದಲ್ಲಿ ದಿನಕ್ಕೆ ್ಙ 20ರಂತೆ ಕಡಿತಗೊಳಿಸಲಾಗುವುದು ಎಂದು ಎಚ್ಚರಿಸಿದರು. <br /> <br /> ಕಲಾ ಜಾಥಾದ ಕಲಾವಿದರು `ಸಕಾಲ~ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ತಾಲ್ಲೂಕಿನ 10 ಗ್ರಾಮ ಪಂಚಾಯ್ತಿಗಳನ್ನು ಆಯ್ಕೆ ಮಾಡಲಾಗಿದೆ. ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿನಂತಿಸಿದರು. <br /> <br /> ತಾಲ್ಲೂಕು ಪಂಚಾಯ್ತಿ ಇಒ ಎಚ್. ಹುಲಿರಾಜ್ ಮಾತನಾಡಿ, ಬೀದಿ ನಾಟಕ, ಜಾಗೃತಿ ಗೀತೆಗಳು ಮತ್ತು ಅಭಿನಯದ ಮುಖಾಂತರ ಜನರಿಗೆ `ಸಕಾಲ~ದ ಬಗ್ಗೆ ಅರಿವು ಮೂಡಿಸುವುದು ಈ ಜಾಥಾದ ಉದ್ದೇಶವಾಗಿದೆ ಎಂದು ತಿಳಿಸಿದರು. <br /> <br /> ಬಿಇಒ ಕೆ.ಸಿ. ಮಲ್ಲಿಕಾರ್ಜುನ್ ಮಾತನಾಡಿದರು. ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ, ತಾಲ್ಲೂಕು ಪಂಚಾಯ್ತಿಗಳ ಆಶ್ರಯದಲ್ಲಿ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರದ ಕಲಾ ತಂಡದ ಕಲಾವಿದರು ಜನ ಜಾಗೃತಿ ಗೀತೆ ಗಾಯನ ಮತ್ತು ಬೀದಿನಾಟಕ ಪ್ರದರ್ಶಿಸಿದರು. <br /> <br /> ಮಹಾಂತೇಶ್, ಹಾಲೇಶ್ ರಾಂಪುರ, ರುದ್ರೇಶ್, ರಂಗಸ್ವಾಮಿ, ಮಂಜುಳಾ, ರೇಣುಕಾ, ಜಾಫರ್, ನಾಗರಾಜು, ಹನುಮಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>