<p><strong>ಬೆಂಗಳೂರು:</strong> ಸಕಾಲ ವೆಬ್ಸೈಟ್ ಮೂಲಕ ಅರ್ಜಿ ಹಾಗೂ ದೂರುಗಳ ವಿಲೇವಾರಿಗೆ ಜಿಲ್ಲಾಧಿಕಾರಿಗಳಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿಯವರ ಸಚಿವಾಲಯದ ನೇರ ಉಸ್ತುವಾರಿಯಲ್ಲಿ ಈ ವೆಬ್ಸೈಟ್ ಮೂಲಕ ಅರ್ಜಿ, ದೂರುಗಳ ವಿಲೇವಾರಿ ನಡೆಯಲಿದೆ.<br /> <br /> ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ಉಮೇಶ್ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಈ ವಿಷಯ ತಿಳಿಸಿದರು.<br /> <br /> ಸಕಾಲಕ್ಕೆ ಸಂಬಂಧಿಸಿದ ದೂರುಗಳ ವಿಲೇವಾರಿಗಾಗಿ www.sakala.kar.nic.in ಎಂಬ ವೆಬ್ಸೈಟ್ ರೂಪಿಸಲಾಗಿದೆ. ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಗೂ ವೆಬ್ಸೈಟ್ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.<br /> ಮುಖ್ಯಮಂತ್ರಿ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ನಿಗದಿ ಮಾಡಿದ್ದರು.</p>.<p>ಆದರೆ, ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಅವರ ನಿಧನದ ಕಾರಣದಿಂದ ಅವರು ಸಭೆಯಲ್ಲಿ ಭಾಗಿಯಾಗಲಿಲ್ಲ. ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಕೂಡ ಸಭೆಯಲ್ಲಿ ಹಾಜರಿರಲಿಲ್ಲ. ಮುಖ್ಯಮಂತ್ರಿಯವರ ಸೂಚನೆಯಂತೆ ಉಮೇಶ್ ಅವರೇ ಸಭೆ ನಡೆಸಿದರು.</p>.<p> <strong>ಶ್ರದ್ಧಾಂಜಲಿ ಮರೆತಿದ್ದರು:</strong> ಸಭೆ ಆರಂಭಕ್ಕೆ ಕೆಲ ಗಂಟೆಗಳ ಮೊದಲೇ ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ ಇಹಲೋಕ ತ್ಯಜಿಸಿದ್ದರು. ಈ ವಿಷಯ ಸಭೆಯಲ್ಲಿದ್ದ ಎಲ್ಲರಿಗೂ ಗೊತ್ತಿತ್ತು. ಆದರೂ, ಆರಂಭದಲ್ಲಿ ಶ್ರದ್ಧಾಂಜಲಿ ಸಲ್ಲಿಸುವುದನ್ನು ಮರೆತೇಬಿಟ್ಟರು.<br /> <br /> ಸ್ವಲ್ಪ ಸಮಯದ ಬಳಿಕ ಉಮೇಶ್ ಅವರ ಬಳಿ ತೆರಳಿದ ಕಿರಿಯ ಅಧಿಕಾರಿಯೊಬ್ಬರು ಪಿಸುದನಿಯಲ್ಲಿ ಏನನ್ನೋ ಹೇಳಿದರು. ನಂತರ ಜಿ.ಎಸ್.ಎಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಒಂದು ನಿಮಿಷ ಮೌನ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಕಾಲ ವೆಬ್ಸೈಟ್ ಮೂಲಕ ಅರ್ಜಿ ಹಾಗೂ ದೂರುಗಳ ವಿಲೇವಾರಿಗೆ ಜಿಲ್ಲಾಧಿಕಾರಿಗಳಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿಯವರ ಸಚಿವಾಲಯದ ನೇರ ಉಸ್ತುವಾರಿಯಲ್ಲಿ ಈ ವೆಬ್ಸೈಟ್ ಮೂಲಕ ಅರ್ಜಿ, ದೂರುಗಳ ವಿಲೇವಾರಿ ನಡೆಯಲಿದೆ.<br /> <br /> ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ಉಮೇಶ್ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಈ ವಿಷಯ ತಿಳಿಸಿದರು.<br /> <br /> ಸಕಾಲಕ್ಕೆ ಸಂಬಂಧಿಸಿದ ದೂರುಗಳ ವಿಲೇವಾರಿಗಾಗಿ www.sakala.kar.nic.in ಎಂಬ ವೆಬ್ಸೈಟ್ ರೂಪಿಸಲಾಗಿದೆ. ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಗೂ ವೆಬ್ಸೈಟ್ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.<br /> ಮುಖ್ಯಮಂತ್ರಿ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ನಿಗದಿ ಮಾಡಿದ್ದರು.</p>.<p>ಆದರೆ, ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಅವರ ನಿಧನದ ಕಾರಣದಿಂದ ಅವರು ಸಭೆಯಲ್ಲಿ ಭಾಗಿಯಾಗಲಿಲ್ಲ. ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಕೂಡ ಸಭೆಯಲ್ಲಿ ಹಾಜರಿರಲಿಲ್ಲ. ಮುಖ್ಯಮಂತ್ರಿಯವರ ಸೂಚನೆಯಂತೆ ಉಮೇಶ್ ಅವರೇ ಸಭೆ ನಡೆಸಿದರು.</p>.<p> <strong>ಶ್ರದ್ಧಾಂಜಲಿ ಮರೆತಿದ್ದರು:</strong> ಸಭೆ ಆರಂಭಕ್ಕೆ ಕೆಲ ಗಂಟೆಗಳ ಮೊದಲೇ ರಾಷ್ಟ್ರಕವಿ ಡಾ. ಜಿ.ಎಸ್.ಶಿವರುದ್ರಪ್ಪ ಇಹಲೋಕ ತ್ಯಜಿಸಿದ್ದರು. ಈ ವಿಷಯ ಸಭೆಯಲ್ಲಿದ್ದ ಎಲ್ಲರಿಗೂ ಗೊತ್ತಿತ್ತು. ಆದರೂ, ಆರಂಭದಲ್ಲಿ ಶ್ರದ್ಧಾಂಜಲಿ ಸಲ್ಲಿಸುವುದನ್ನು ಮರೆತೇಬಿಟ್ಟರು.<br /> <br /> ಸ್ವಲ್ಪ ಸಮಯದ ಬಳಿಕ ಉಮೇಶ್ ಅವರ ಬಳಿ ತೆರಳಿದ ಕಿರಿಯ ಅಧಿಕಾರಿಯೊಬ್ಬರು ಪಿಸುದನಿಯಲ್ಲಿ ಏನನ್ನೋ ಹೇಳಿದರು. ನಂತರ ಜಿ.ಎಸ್.ಎಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಒಂದು ನಿಮಿಷ ಮೌನ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>