<p><strong>ನವದೆಹಲಿ (ಐಎಎನ್ಎಸ್):</strong> ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಮಾಜಿ ಗವರ್ನರ್ ಸಿ. ರಂಗರಾಜನ್ ನೇತೃತ್ವದಲ್ಲಿ ಸಕ್ಕರೆ ಉದ್ದಿಮೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿಯೊಂದನ್ನು ಪ್ರಧಾನಿ ಮನಮೋಹನ್ ಸಿಂಗ್ ರಚಿಸಿದ್ದಾರೆ. <br /> <br /> ಹಿರಿಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು, ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ ಸೇರಿದಂತೆ ಆಹಾರ, ಕೃಷಿ,ನಾಗರಿಕ ಸರಬರಾಜು ಖಾತೆಗಳ ಸಚಿವರು ಕೂಡ ಈ ಸಮಿತಿಯ ಸದಸ್ಯರಾಗಿದ್ದಾರೆ. ಪ್ರಧಾನಿ ಆರ್ಥಿಕ ಸಲಹಾ ಸಮಿತಿಯ ಕಾರ್ಯದರ್ಶಿ ಕೆ.ಪಿ ಕೃಷ್ಣನ್ ಸಮಿತಿಯ ಸಂಚಾಲಕರಾಗಿದ್ದಾರೆ.<br /> <br /> ಸಕ್ಕರೆ ಉದ್ಯಮವನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವುದಕ್ಕೆ ಸಂಬಂಧಿಸಿದಂತೆ ಇರುವ ಎಲ್ಲ ಸಮಸ್ಯೆಗಳನ್ನು ಈ ಸಮಿತಿ ಪರಿಶೀಲಿಸಲಿದ್ದು, ಸಾಧ್ಯವಾದಷ್ಟು ಶೀಘ್ರದಲ್ಲೇ ವರದಿ ಸಲ್ಲಿಸಲಿದೆ. ಸಕ್ಕರೆ ಉದ್ಯಮ ಪ್ರತಿನಿಧಿಗಳು ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನು ಭೇಟಿಯಾಗಿ ಈ ವಲಯವನ್ನು ನಿಯಂತ್ರಣಮುಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಮಾಜಿ ಗವರ್ನರ್ ಸಿ. ರಂಗರಾಜನ್ ನೇತೃತ್ವದಲ್ಲಿ ಸಕ್ಕರೆ ಉದ್ದಿಮೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿಯೊಂದನ್ನು ಪ್ರಧಾನಿ ಮನಮೋಹನ್ ಸಿಂಗ್ ರಚಿಸಿದ್ದಾರೆ. <br /> <br /> ಹಿರಿಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು, ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ ಸೇರಿದಂತೆ ಆಹಾರ, ಕೃಷಿ,ನಾಗರಿಕ ಸರಬರಾಜು ಖಾತೆಗಳ ಸಚಿವರು ಕೂಡ ಈ ಸಮಿತಿಯ ಸದಸ್ಯರಾಗಿದ್ದಾರೆ. ಪ್ರಧಾನಿ ಆರ್ಥಿಕ ಸಲಹಾ ಸಮಿತಿಯ ಕಾರ್ಯದರ್ಶಿ ಕೆ.ಪಿ ಕೃಷ್ಣನ್ ಸಮಿತಿಯ ಸಂಚಾಲಕರಾಗಿದ್ದಾರೆ.<br /> <br /> ಸಕ್ಕರೆ ಉದ್ಯಮವನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವುದಕ್ಕೆ ಸಂಬಂಧಿಸಿದಂತೆ ಇರುವ ಎಲ್ಲ ಸಮಸ್ಯೆಗಳನ್ನು ಈ ಸಮಿತಿ ಪರಿಶೀಲಿಸಲಿದ್ದು, ಸಾಧ್ಯವಾದಷ್ಟು ಶೀಘ್ರದಲ್ಲೇ ವರದಿ ಸಲ್ಲಿಸಲಿದೆ. ಸಕ್ಕರೆ ಉದ್ಯಮ ಪ್ರತಿನಿಧಿಗಳು ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನು ಭೇಟಿಯಾಗಿ ಈ ವಲಯವನ್ನು ನಿಯಂತ್ರಣಮುಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>