<p><strong>ನವದೆಹಲಿ (ಪಿಟಿಐ):</strong> ಆಹಾರ ಪದಾರ್ಥಗಳು ತುಟ್ಟಿಯಾಗಿರುವುದರಿಂದ, ಸಗಟು ಹಣದುಬ್ಬರವು ಜುಲೈ ತಿಂಗಳಿನಲ್ಲಿ ಶೇ 3.55ಕ್ಕೆ ಏರಿಕೆಯಾಗಿದೆ. ಇದು 23 ತಿಂಗಳ ಗರಿಷ್ಠ ಮಟ್ಟವಾಗಿದೆ. ಈ ಹಿಂದೆ 2014ರ ಆಗಸ್ಟ್ ತಿಂಗಳಿನಲ್ಲಿ ಸಗಟು ಹಣದುಬ್ಬರ ಶೇ 3.74ರಷ್ಟು ಗರಿಷ್ಠ ಮಟ್ಟದಲ್ಲಿತ್ತು.<br /> <br /> ಸಗಟು ದರ ಸೂಚ್ಯಂಕ (ಡಬ್ಲ್ಯೂಪಿಐ) ಆಧರಿಸಿದ ಹಣದುಬ್ಬರವು 2016ರ ಜೂನ್ ತಿಂಗಳಿನಲ್ಲಿ ಶೇ 1.62ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಈಗ ಶೇ ₹1.93ರಷ್ಟು ಹೆಚ್ಚಾಗಿದೆ. 2015ರ ಜುಲೈನಲ್ಲಿ ಸಗಟು ಹಣದುಬ್ಬರವು ಶೇ (–) 4 ರಷ್ಟಿತ್ತು.<br /> <br /> ಸಗಟು ಹಣದುಬ್ಬರ ಏರಿಕೆ ಆಗಿರುವುದರಿಂದ ಆಹಾರ ಪದಾರ್ಥಗಳ ಚಿಲ್ಲರೆ ದರದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಇದರಿಂದ ಆರ್ಬಿಐ ಮತ್ತು ಸರ್ಕಾರಕ್ಕೆ ಚಿಲ್ಲರೆ ಹಣದುಬ್ಬರವನ್ನು ಶೇ 6ರ ಮಿತಿಯಲ್ಲಿ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ ಎಂದು ಉದ್ಯಮ ವಲಯ ಹೇಳಿದೆ.<br /> <br /> ಒಟ್ಟಾರೆ, ಆಹಾರ ಹಣದುಬ್ಬರವು ಜುಲೈನಲ್ಲಿ ಎರಡಂಕಿ ಮಟ್ಟವಾದ ಶೇ 12ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ. ಆಲೂಗೆಡ್ಡೆ ದರ ಶೇ 59, ಬೇಳೆಕಾಳು ಶೇ 36, ತರಕಾರಿ ಶೇ 28, ಏಕದಳಧಾನ್ಯಗಳು ಶೇ 7ರಷ್ಟು ತುಟ್ಟಿಯಾಗಿವೆ.</p>.<p>ಸಕ್ಕರೆ ಧಾರಣೆಯು ಶೇ 32, ಹಣ್ಣಿನ ಬೆಲೆ ಶೇ 17ರಷ್ಟು ಏರಿಕೆಯಾಗಿವೆ. 2014ರ ನವೆಂಬರ್ನಿಂದ 2016ರ ಮಾರ್ಚ್ವರೆಗೆ ಸಗಟು ಹಣದುಬ್ಬರ ಋಣಾತ್ಮಕ ಮಟ್ಟದಲ್ಲಿತ್ತು. ಏಪ್ರಿಲ್ ನಂತರ ಸಕಾರಾತ್ಮಕ ಮಟ್ಟವನ್ನು ತಲುಪಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಆಹಾರ ಪದಾರ್ಥಗಳು ತುಟ್ಟಿಯಾಗಿರುವುದರಿಂದ, ಸಗಟು ಹಣದುಬ್ಬರವು ಜುಲೈ ತಿಂಗಳಿನಲ್ಲಿ ಶೇ 3.55ಕ್ಕೆ ಏರಿಕೆಯಾಗಿದೆ. ಇದು 23 ತಿಂಗಳ ಗರಿಷ್ಠ ಮಟ್ಟವಾಗಿದೆ. ಈ ಹಿಂದೆ 2014ರ ಆಗಸ್ಟ್ ತಿಂಗಳಿನಲ್ಲಿ ಸಗಟು ಹಣದುಬ್ಬರ ಶೇ 3.74ರಷ್ಟು ಗರಿಷ್ಠ ಮಟ್ಟದಲ್ಲಿತ್ತು.<br /> <br /> ಸಗಟು ದರ ಸೂಚ್ಯಂಕ (ಡಬ್ಲ್ಯೂಪಿಐ) ಆಧರಿಸಿದ ಹಣದುಬ್ಬರವು 2016ರ ಜೂನ್ ತಿಂಗಳಿನಲ್ಲಿ ಶೇ 1.62ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಈಗ ಶೇ ₹1.93ರಷ್ಟು ಹೆಚ್ಚಾಗಿದೆ. 2015ರ ಜುಲೈನಲ್ಲಿ ಸಗಟು ಹಣದುಬ್ಬರವು ಶೇ (–) 4 ರಷ್ಟಿತ್ತು.<br /> <br /> ಸಗಟು ಹಣದುಬ್ಬರ ಏರಿಕೆ ಆಗಿರುವುದರಿಂದ ಆಹಾರ ಪದಾರ್ಥಗಳ ಚಿಲ್ಲರೆ ದರದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಇದರಿಂದ ಆರ್ಬಿಐ ಮತ್ತು ಸರ್ಕಾರಕ್ಕೆ ಚಿಲ್ಲರೆ ಹಣದುಬ್ಬರವನ್ನು ಶೇ 6ರ ಮಿತಿಯಲ್ಲಿ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ ಎಂದು ಉದ್ಯಮ ವಲಯ ಹೇಳಿದೆ.<br /> <br /> ಒಟ್ಟಾರೆ, ಆಹಾರ ಹಣದುಬ್ಬರವು ಜುಲೈನಲ್ಲಿ ಎರಡಂಕಿ ಮಟ್ಟವಾದ ಶೇ 12ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ. ಆಲೂಗೆಡ್ಡೆ ದರ ಶೇ 59, ಬೇಳೆಕಾಳು ಶೇ 36, ತರಕಾರಿ ಶೇ 28, ಏಕದಳಧಾನ್ಯಗಳು ಶೇ 7ರಷ್ಟು ತುಟ್ಟಿಯಾಗಿವೆ.</p>.<p>ಸಕ್ಕರೆ ಧಾರಣೆಯು ಶೇ 32, ಹಣ್ಣಿನ ಬೆಲೆ ಶೇ 17ರಷ್ಟು ಏರಿಕೆಯಾಗಿವೆ. 2014ರ ನವೆಂಬರ್ನಿಂದ 2016ರ ಮಾರ್ಚ್ವರೆಗೆ ಸಗಟು ಹಣದುಬ್ಬರ ಋಣಾತ್ಮಕ ಮಟ್ಟದಲ್ಲಿತ್ತು. ಏಪ್ರಿಲ್ ನಂತರ ಸಕಾರಾತ್ಮಕ ಮಟ್ಟವನ್ನು ತಲುಪಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>