<p>ಮುಂಬೈ (ಪಿಟಿಐ): ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕಗಳ ಶತಕದ ಸಾಧನೆ ಮಾಡಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ನೂರು ಚಿನ್ನದ ನಾಣ್ಯಗಳನ್ನು ನೀಡಿ ಸನ್ಮಾನಿಸಲಿದೆ.<br /> <br /> ಈ ನಾಣ್ಯಗಳ ಒಟ್ಟು ಮೌಲ್ಯ 23ರಿಂದ 25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ನಿರ್ಧಾರವನ್ನು ಎಂಸಿಎ ಅಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆಗಿರುವ ವಿಲಾಸ್ರಾವ್ ದೇಶಮುಖ್ ಅವರ ನೇತೃತ್ವದಲ್ಲಿ ನಡೆದ ವ್ಯವಸ್ಥಾಪಕ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.<br /> <br /> `ವಿಲಾಸ್ರಾವ್ ಅವರು ಬ್ಯಾಟಿಂಗ್ ಚಾಂಪಿಯನ್ ಸಚಿನ್ ಅವರಲ್ಲಿ ಇದಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ. ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲು ದಿನ ನಿಗದಿಪಡಿಸುವಂತೆ ಕೋರಿದ್ದಾರೆ. ಇದಕ್ಕೆ ತೆಂಡೂಲ್ಕರ್ ಸಮ್ಮತಿ ಸೂಚಿಸಿದ್ದಾರೆ~ ಎಂದು ಎಂಸಿಎ ಜಂಟಿ ಕಾರ್ಯದರ್ಶಿ ನಿತಿನ್ ದಲಾಲ್ ತಿಳಿಸಿದ್ದಾರೆ.<br /> ನೆನಪುಗಳು ಅಮರ: `ಸಮಯ ಮುಂದೋಡುತ್ತಿರುತ್ತದೆ. ಆದರೆ ನೆನಪುಗಳು ಅಮರ. 2011ರ ಏಪ್ರಿಲ್ 2 ಎಂಥ ಅದ್ಭುತ ದಿನ!~<br /> <br /> -ವಿಶ್ವಕಪ್ ಗೆಲುವಿನ ವರ್ಷಾಚರಣೆ ಸಂಬಂಧ ಟ್ವಿಟರ್ನಲ್ಲಿ ಈ ರೀತಿಯ ಸಂಭ್ರಮವನ್ನು ಸಚಿನ್ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. <br /> <br /> `ನಾವು ವಿಶ್ವಕಪ್ ಗೆದ್ದು ಒಂದು ವರ್ಷವಾಯಿತು. ಇದನ್ನು ನನಗೆ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ. ಆ ಕನಸು ನನಸಾಗಲು ಅಭಿಮಾನಿಗಳು ಸೇರಿದಂತೆ ಪ್ರತಿಯೊಬ್ಬರೂ ಅದ್ಭುತ ಕೊಡುಗೆ ನೀಡಿದ್ದರು~ ಎಂದು ವೀರೇಂದ್ರ ಸೆಹ್ವಾಗ್ ಕೂಡ ಟ್ವಿಟರ್ ಮೂಲಕ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕಗಳ ಶತಕದ ಸಾಧನೆ ಮಾಡಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ನೂರು ಚಿನ್ನದ ನಾಣ್ಯಗಳನ್ನು ನೀಡಿ ಸನ್ಮಾನಿಸಲಿದೆ.<br /> <br /> ಈ ನಾಣ್ಯಗಳ ಒಟ್ಟು ಮೌಲ್ಯ 23ರಿಂದ 25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ನಿರ್ಧಾರವನ್ನು ಎಂಸಿಎ ಅಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆಗಿರುವ ವಿಲಾಸ್ರಾವ್ ದೇಶಮುಖ್ ಅವರ ನೇತೃತ್ವದಲ್ಲಿ ನಡೆದ ವ್ಯವಸ್ಥಾಪಕ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.<br /> <br /> `ವಿಲಾಸ್ರಾವ್ ಅವರು ಬ್ಯಾಟಿಂಗ್ ಚಾಂಪಿಯನ್ ಸಚಿನ್ ಅವರಲ್ಲಿ ಇದಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ. ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲು ದಿನ ನಿಗದಿಪಡಿಸುವಂತೆ ಕೋರಿದ್ದಾರೆ. ಇದಕ್ಕೆ ತೆಂಡೂಲ್ಕರ್ ಸಮ್ಮತಿ ಸೂಚಿಸಿದ್ದಾರೆ~ ಎಂದು ಎಂಸಿಎ ಜಂಟಿ ಕಾರ್ಯದರ್ಶಿ ನಿತಿನ್ ದಲಾಲ್ ತಿಳಿಸಿದ್ದಾರೆ.<br /> ನೆನಪುಗಳು ಅಮರ: `ಸಮಯ ಮುಂದೋಡುತ್ತಿರುತ್ತದೆ. ಆದರೆ ನೆನಪುಗಳು ಅಮರ. 2011ರ ಏಪ್ರಿಲ್ 2 ಎಂಥ ಅದ್ಭುತ ದಿನ!~<br /> <br /> -ವಿಶ್ವಕಪ್ ಗೆಲುವಿನ ವರ್ಷಾಚರಣೆ ಸಂಬಂಧ ಟ್ವಿಟರ್ನಲ್ಲಿ ಈ ರೀತಿಯ ಸಂಭ್ರಮವನ್ನು ಸಚಿನ್ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. <br /> <br /> `ನಾವು ವಿಶ್ವಕಪ್ ಗೆದ್ದು ಒಂದು ವರ್ಷವಾಯಿತು. ಇದನ್ನು ನನಗೆ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ. ಆ ಕನಸು ನನಸಾಗಲು ಅಭಿಮಾನಿಗಳು ಸೇರಿದಂತೆ ಪ್ರತಿಯೊಬ್ಬರೂ ಅದ್ಭುತ ಕೊಡುಗೆ ನೀಡಿದ್ದರು~ ಎಂದು ವೀರೇಂದ್ರ ಸೆಹ್ವಾಗ್ ಕೂಡ ಟ್ವಿಟರ್ ಮೂಲಕ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>