<p><strong>ನವದೆಹಲಿ (ಪಿಟಿಐ):</strong> ಪ್ರತಿಷ್ಠಿತ `ಭಾರತ ರತ್ನ~ ಪ್ರಶಸ್ತಿಗೆ ಈ ವರ್ಷ ಕೇಂದ್ರ ಸರ್ಕಾರ ಯಾರನ್ನೂ ಪರಿಗಣಿಸಿಲ್ಲ. ಆದರೆ ಸಚಿನ್ ತೆಂಡೂಲ್ಕರ್ ಅವರ ಹೆಸರನ್ನು `ಭಾರತ ರತ್ನ~ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡದೇ ಇದ್ದದ್ದು ಅಚ್ಚರಿ ಮೂಡಿಸಿದೆ. <br /> <br /> ಹಾಗಾಗಿ ಕ್ರೀಡಾ ಸಚಿವಾಲಯವು ಹಾಕಿ ಮಾಂತ್ರಿಕ ಧ್ಯಾನ್ಚಂದ್, ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಹಾಗೂ ಪರ್ವತಾರೋಹಿ ತೇನ್ಸಿಂಗ್ ನೊರ್ಗೆ (ಮೌಂಟ್ ಎವರೆಸ್ಟ್ ಶಿಖರವೇರಿದ ಮೊದಲ ಭಾರತೀಯ) ಅವರ ಹೆಸರನ್ನು ಮಾತ್ರ ಗೃಹ ಸಚಿವಾಲಯದ ಮುಂದಿಟ್ಟಿದೆ. <br /> <br /> `ಕ್ರೀಡಾ ಸಚಿವಾಲಯಕ್ಕೆ ಶಿಫಾರಸು ಮಾಡಿದ ಹೆಸರನ್ನು ನಾವು ಗೃಹ ಸಚಿವಾಲಯಕ್ಕೆ ನೀಡಿದ್ದೇವೆ~ ಎಂದು ಕ್ರೀಡಾ ಸಚಿವ ಅಜಯ್ ಮಾಕನ್ ಸ್ಪಷ್ಟಪಡಿಸಿದ್ದಾರೆ. <br /> <br /> ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್, `ಈ ಪ್ರತಿಷ್ಠಿತ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಬೇಕೇ ಎಂಬುದು ನನಗೆ ಗೊತ್ತಿಲ್ಲ. ಆದರೆ ಇದು ಸರ್ಕಾರದ ಜವಾಬ್ದಾರಿ~ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪ್ರತಿಷ್ಠಿತ `ಭಾರತ ರತ್ನ~ ಪ್ರಶಸ್ತಿಗೆ ಈ ವರ್ಷ ಕೇಂದ್ರ ಸರ್ಕಾರ ಯಾರನ್ನೂ ಪರಿಗಣಿಸಿಲ್ಲ. ಆದರೆ ಸಚಿನ್ ತೆಂಡೂಲ್ಕರ್ ಅವರ ಹೆಸರನ್ನು `ಭಾರತ ರತ್ನ~ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡದೇ ಇದ್ದದ್ದು ಅಚ್ಚರಿ ಮೂಡಿಸಿದೆ. <br /> <br /> ಹಾಗಾಗಿ ಕ್ರೀಡಾ ಸಚಿವಾಲಯವು ಹಾಕಿ ಮಾಂತ್ರಿಕ ಧ್ಯಾನ್ಚಂದ್, ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಹಾಗೂ ಪರ್ವತಾರೋಹಿ ತೇನ್ಸಿಂಗ್ ನೊರ್ಗೆ (ಮೌಂಟ್ ಎವರೆಸ್ಟ್ ಶಿಖರವೇರಿದ ಮೊದಲ ಭಾರತೀಯ) ಅವರ ಹೆಸರನ್ನು ಮಾತ್ರ ಗೃಹ ಸಚಿವಾಲಯದ ಮುಂದಿಟ್ಟಿದೆ. <br /> <br /> `ಕ್ರೀಡಾ ಸಚಿವಾಲಯಕ್ಕೆ ಶಿಫಾರಸು ಮಾಡಿದ ಹೆಸರನ್ನು ನಾವು ಗೃಹ ಸಚಿವಾಲಯಕ್ಕೆ ನೀಡಿದ್ದೇವೆ~ ಎಂದು ಕ್ರೀಡಾ ಸಚಿವ ಅಜಯ್ ಮಾಕನ್ ಸ್ಪಷ್ಟಪಡಿಸಿದ್ದಾರೆ. <br /> <br /> ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್, `ಈ ಪ್ರತಿಷ್ಠಿತ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಬೇಕೇ ಎಂಬುದು ನನಗೆ ಗೊತ್ತಿಲ್ಲ. ಆದರೆ ಇದು ಸರ್ಕಾರದ ಜವಾಬ್ದಾರಿ~ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>