<p><strong>ಬೆಂಗಳೂರು: </strong>`ನನ್ನ ಬಳಿ ಒತ್ತಡ ತಂತ್ರ ನಡೆಯುದಿಲ್ಲ. ನೀವು ಪದೇ ಪದೇ ನನ್ನ ಮೇಲೆ ಒತ್ತಡ ಹೇರಿ ರಾಜೀನಾಮೆಗೆ ಆಗ್ರಹಿಸುವ ಪ್ರಯತ್ನ ಮಾಡಬೇಡಿ~ ಎಂದು ಮುಖ್ಯಮಂತ್ರಿ ಸದಾನಂದಗೌಡ ಅವರು ಯಡಿಯೂರಪ್ಪ ಆಪ್ತ ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಬಸವರಾಜ ಬೊಮ್ಮಾಯಿ, ಮುರುಗೇಶ ನಿರಾಣಿ, `ನೀವು ರಾಜೀನಾಮೆ ನೀಡುವ ಮೂಲಕ ಯಡಿಯೂರಪ್ಪ ಅವರಿಗೆ ಅವಕಾಶ ಮಾಡಿಕೊಡಬೇಕು~ ಎಂದು ಸಿ.ಎಂಗೆ ಹೇಳಿದರು. ಇದರಿಂದ ಸಿಟ್ಟಿಗೆದ್ದ ಸದಾನಂದಗೌಡ, `ನಿಮ್ಮ ಹಾಗೆ ನಾನು ಬ್ಲ್ಯಾಕ್ಮೇಲ್ ರಾಜಕಾರಣ ಮಾಡುವುದಿಲ್ಲ. ಲಾಬಿಯೂ ಮಾಡುವುದಿಲ್ಲ. ಹೈಕಮಾಂಡ್ ಹೇಳುವವರೆಗೂ ಈ ಸ್ಥಾನದಲ್ಲಿ ಇರುತ್ತೇನೆ. ಅವರು ರಾಜೀನಾಮೆ ಕೊಡಿ ಎಂದರೆ ಒಂದು ಕ್ಷಣ ಕೂಡ ಈ ಸ್ಥಾನದಲ್ಲಿ ಇರುವುದಿಲ್ಲ. ವಿಧಾನಸೌಧದತ್ತ ತಿರುಗಿಯೂ ನೋಡುವುದಿಲ್ಲ~ ಎಂದು ತಿರುಗೇಟು ನೀಡಿದರು ಎನ್ನಲಾಗಿದೆ. ಯಡಿಯೂರಪ್ಪ ವಿರುದ್ಧ ಇನ್ನೂ ಎಂಟು ಪ್ರಕರಣಗಳಿವೆ ಎಂದು ಮುಂಬೈನಲ್ಲಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಈ ಮೂವರು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ನನ್ನ ಬಳಿ ಒತ್ತಡ ತಂತ್ರ ನಡೆಯುದಿಲ್ಲ. ನೀವು ಪದೇ ಪದೇ ನನ್ನ ಮೇಲೆ ಒತ್ತಡ ಹೇರಿ ರಾಜೀನಾಮೆಗೆ ಆಗ್ರಹಿಸುವ ಪ್ರಯತ್ನ ಮಾಡಬೇಡಿ~ ಎಂದು ಮುಖ್ಯಮಂತ್ರಿ ಸದಾನಂದಗೌಡ ಅವರು ಯಡಿಯೂರಪ್ಪ ಆಪ್ತ ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> <br /> ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಬಸವರಾಜ ಬೊಮ್ಮಾಯಿ, ಮುರುಗೇಶ ನಿರಾಣಿ, `ನೀವು ರಾಜೀನಾಮೆ ನೀಡುವ ಮೂಲಕ ಯಡಿಯೂರಪ್ಪ ಅವರಿಗೆ ಅವಕಾಶ ಮಾಡಿಕೊಡಬೇಕು~ ಎಂದು ಸಿ.ಎಂಗೆ ಹೇಳಿದರು. ಇದರಿಂದ ಸಿಟ್ಟಿಗೆದ್ದ ಸದಾನಂದಗೌಡ, `ನಿಮ್ಮ ಹಾಗೆ ನಾನು ಬ್ಲ್ಯಾಕ್ಮೇಲ್ ರಾಜಕಾರಣ ಮಾಡುವುದಿಲ್ಲ. ಲಾಬಿಯೂ ಮಾಡುವುದಿಲ್ಲ. ಹೈಕಮಾಂಡ್ ಹೇಳುವವರೆಗೂ ಈ ಸ್ಥಾನದಲ್ಲಿ ಇರುತ್ತೇನೆ. ಅವರು ರಾಜೀನಾಮೆ ಕೊಡಿ ಎಂದರೆ ಒಂದು ಕ್ಷಣ ಕೂಡ ಈ ಸ್ಥಾನದಲ್ಲಿ ಇರುವುದಿಲ್ಲ. ವಿಧಾನಸೌಧದತ್ತ ತಿರುಗಿಯೂ ನೋಡುವುದಿಲ್ಲ~ ಎಂದು ತಿರುಗೇಟು ನೀಡಿದರು ಎನ್ನಲಾಗಿದೆ. ಯಡಿಯೂರಪ್ಪ ವಿರುದ್ಧ ಇನ್ನೂ ಎಂಟು ಪ್ರಕರಣಗಳಿವೆ ಎಂದು ಮುಂಬೈನಲ್ಲಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಈ ಮೂವರು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>