<p><strong>ಬೆಂಗಳೂರು: </strong>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ದಾವಣಗೆರೆ ಉಪ ನಿರ್ದೇಶಕ ಕೆ.ರಾಮೇಶ್ವರಪ್ಪ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಸಚಿವರೊಬ್ಬರು ಅಡ್ಡಗಾಲು ಹಾಕಿದರು ಎಂದು ಗೊತ್ತಾಗಿದೆ.<br /> <br /> ರಾಮೇಶ್ವರಪ್ಪ ಅವರು 1998ನೇ ಸಾಲಿನ ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕುರಿತ ಇಲಾಖೆ ವಿಚಾರಣೆ ಪೂರ್ಣಗೊಂಡಿದೆ. ತನಿಖೆ ವೇಳೆ ಅವರು ಗುರುತರವಾದ ಅಪರಾಧ ಎಸಗಿರುವುದು ಸಾಬೀತಾಗಿದ್ದು, ಅದನ್ನು ಆಧರಿಸಿ ಶಿಸ್ತುಕ್ರಮ ಕೈಗೊಳ್ಳಲು ಇಲಾಖೆಯು ಸಂಪುಟದ ಅನುಮತಿ ಕೋರಿತ್ತು.<br /> <br /> ಇಲಾಖೆಯ ಸಚಿವರು ಈ ವಿಷಯವನ್ನು ಸಂಪುಟದ ಮುಂದೆ ಪ್ರಸ್ತಾಪಿಸುತ್ತಿದ್ದಂತೆಯೇ, ಪ್ರಭಾವಿ ಸಚಿವರೊಬ್ಬರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈ ಪ್ರಕರಣ ಹೈಕೋರ್ಟ್ನಲ್ಲಿದೆ. ಅಲ್ಲಿ ಇತ್ಯರ್ಥವಾಗುವುದಕ್ಕೆ ಮೊದಲೇ ಕ್ರಮಕೈಗೊಳ್ಳುವುದು ಸರಿಯಲ್ಲ ಎಂದು ತಿಳಿಸಿದರು ಎನ್ನಲಾಗಿದೆ.<br /> <br /> ಆಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಈ ವಿಷಯವನ್ನು ಕಾನೂನು ಇಲಾಖೆಗೆ ಕಳುಹಿಸಿ, ಅಭಿಪ್ರಾಯ ಪಡೆಯಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಮುಂದಿನ ಸಚಿವ ಸಂಪುಟ ಸಭೆಯಲ್ಲೇ ಈ ವಿಷಯವನ್ನು ತರಬೇಕೆಂದು ಸೂಚಿಸಿದರು ಎಂದು ಗೊತ್ತಾಗಿದೆ.<br /> <br /> `ಪ್ರಜಾವಾಣಿ~ಗೆ ಲಭ್ಯವಾಗಿರುವ ಮಾಹಿತಿ ಇಲಾಖಾ ವಿಚಾರಣೆಯಲ್ಲಿ ರಾಮೇಶ್ವರಪ್ಪ ಅವರನ್ನು ಸೇವೆಯಿಂದ ವಜಾ ಮಾಡಲು ಶಿಫಾರಸು ಮಾಡಲಾಗಿದೆ. ರಾಮೇಶ್ವರಪ್ಪ ಸೇರಿದಂತೆ ಅವರ ಕುಟುಂಬದ ಕೆಲವರು ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಮೊದಲ ಹತ್ತು ರ್ಯಾಂಕ್ಗಳು ಒಂದೇ ಕುಟುಂದವರ ಪಾಲಾಗಿರುವುದು ಸಾಬೀತಾಗಿತ್ತು. <br /> <br /> ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅವರನ್ನು ಕಪ್ಪುಪಟ್ಟಿಗೆ ಸೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ದಾವಣಗೆರೆ ಉಪ ನಿರ್ದೇಶಕ ಕೆ.ರಾಮೇಶ್ವರಪ್ಪ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಸಚಿವರೊಬ್ಬರು ಅಡ್ಡಗಾಲು ಹಾಕಿದರು ಎಂದು ಗೊತ್ತಾಗಿದೆ.<br /> <br /> ರಾಮೇಶ್ವರಪ್ಪ ಅವರು 1998ನೇ ಸಾಲಿನ ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕುರಿತ ಇಲಾಖೆ ವಿಚಾರಣೆ ಪೂರ್ಣಗೊಂಡಿದೆ. ತನಿಖೆ ವೇಳೆ ಅವರು ಗುರುತರವಾದ ಅಪರಾಧ ಎಸಗಿರುವುದು ಸಾಬೀತಾಗಿದ್ದು, ಅದನ್ನು ಆಧರಿಸಿ ಶಿಸ್ತುಕ್ರಮ ಕೈಗೊಳ್ಳಲು ಇಲಾಖೆಯು ಸಂಪುಟದ ಅನುಮತಿ ಕೋರಿತ್ತು.<br /> <br /> ಇಲಾಖೆಯ ಸಚಿವರು ಈ ವಿಷಯವನ್ನು ಸಂಪುಟದ ಮುಂದೆ ಪ್ರಸ್ತಾಪಿಸುತ್ತಿದ್ದಂತೆಯೇ, ಪ್ರಭಾವಿ ಸಚಿವರೊಬ್ಬರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಈ ಪ್ರಕರಣ ಹೈಕೋರ್ಟ್ನಲ್ಲಿದೆ. ಅಲ್ಲಿ ಇತ್ಯರ್ಥವಾಗುವುದಕ್ಕೆ ಮೊದಲೇ ಕ್ರಮಕೈಗೊಳ್ಳುವುದು ಸರಿಯಲ್ಲ ಎಂದು ತಿಳಿಸಿದರು ಎನ್ನಲಾಗಿದೆ.<br /> <br /> ಆಗ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಈ ವಿಷಯವನ್ನು ಕಾನೂನು ಇಲಾಖೆಗೆ ಕಳುಹಿಸಿ, ಅಭಿಪ್ರಾಯ ಪಡೆಯಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಮುಂದಿನ ಸಚಿವ ಸಂಪುಟ ಸಭೆಯಲ್ಲೇ ಈ ವಿಷಯವನ್ನು ತರಬೇಕೆಂದು ಸೂಚಿಸಿದರು ಎಂದು ಗೊತ್ತಾಗಿದೆ.<br /> <br /> `ಪ್ರಜಾವಾಣಿ~ಗೆ ಲಭ್ಯವಾಗಿರುವ ಮಾಹಿತಿ ಇಲಾಖಾ ವಿಚಾರಣೆಯಲ್ಲಿ ರಾಮೇಶ್ವರಪ್ಪ ಅವರನ್ನು ಸೇವೆಯಿಂದ ವಜಾ ಮಾಡಲು ಶಿಫಾರಸು ಮಾಡಲಾಗಿದೆ. ರಾಮೇಶ್ವರಪ್ಪ ಸೇರಿದಂತೆ ಅವರ ಕುಟುಂಬದ ಕೆಲವರು ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಮೊದಲ ಹತ್ತು ರ್ಯಾಂಕ್ಗಳು ಒಂದೇ ಕುಟುಂದವರ ಪಾಲಾಗಿರುವುದು ಸಾಬೀತಾಗಿತ್ತು. <br /> <br /> ಹೀಗಾಗಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅವರನ್ನು ಕಪ್ಪುಪಟ್ಟಿಗೆ ಸೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>