<p><strong>ಬೆಂಗಳೂರು: </strong>ನಗರೋತ್ಥಾನ ಯೋಜನೆ ಸಂಬಂಧ ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಮತ್ತು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ನಡುವೆ ಸಚಿವ ಸಂಪುಟ ಸಭೆಯಲ್ಲಿ ಮಾತಿನ ಚಕಿಮಕಿ ನಡೆದ ಪ್ರಸಂಗ ಮಂಗಳವಾರ ಜರುಗಿದೆ.<br /> <br /> ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ವಾರ್ಡ್ವಾರು ಮೀಸಲಾತಿ ಕುರಿತು ಸಂಪುಟ ಸಭೆಗೆ ಜಾರಕಿಹೊಳಿ ಮಾಹಿತಿ ನೀಡಿದರು. 2011ರ ಜನಗಣತಿಯ ವರದಿ ಸಿಗದ ಕಾರಣಕ್ಕೆ ಮೀಸಲಾತಿ ನಿಗದಿಪಡಿಸುವುದು ಕಷ್ಟವಾಗಿದೆ. 2001ರ ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸಿದರೆ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗುತ್ತದೆ... ಹೀಗೆ ಅವರು ಪೂರ್ಣ ವರದಿಯನ್ನು ಸಂಪುಟ ಸಭೆ ಮುಂದೆ ಮಂಡಿಸಿದರು.<br /> <br /> ಅಷ್ಟರಲ್ಲಿ ಸಚಿವ ರೇಣುಕಾಚಾರ್ಯ ಅವರು ನಗರೋತ್ಥಾನ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಕರೆಯುವ ಬದಲು ಸ್ಥಳೀಯವಾಗಿ ಟೆಂಡರ್ ಕರೆಯಲು ಅವಕಾಶ ನೀಡಬೇಕು ಎಂದು ಧ್ವನಿ ಎತ್ತಿದರು.<br /> <br /> ಇದರಿಂದ ಸಿಟ್ಟಿಗೆದ್ದ ಜಾರಕಿಹೊಳಿ ಅವರು ನಗರೋತ್ಥಾನ ಯೋಜನೆ ಬಗ್ಗೆ ರೇಣುಕಾಚಾರ್ಯ ಅವರು ಲಘುವಾಗಿ ಮಾತನಾಡಿದ್ದಾರೆ. ಅವ್ಯವಹಾರ ನಡೆದಿದೆ ಎಂದು ಗುಲ್ಬರ್ಗದಲ್ಲೂ ದೂರಿದ್ದಾರೆ ಎಂದು ಆಕ್ಷೇಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರೋತ್ಥಾನ ಯೋಜನೆ ಸಂಬಂಧ ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಮತ್ತು ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ನಡುವೆ ಸಚಿವ ಸಂಪುಟ ಸಭೆಯಲ್ಲಿ ಮಾತಿನ ಚಕಿಮಕಿ ನಡೆದ ಪ್ರಸಂಗ ಮಂಗಳವಾರ ಜರುಗಿದೆ.<br /> <br /> ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ವಾರ್ಡ್ವಾರು ಮೀಸಲಾತಿ ಕುರಿತು ಸಂಪುಟ ಸಭೆಗೆ ಜಾರಕಿಹೊಳಿ ಮಾಹಿತಿ ನೀಡಿದರು. 2011ರ ಜನಗಣತಿಯ ವರದಿ ಸಿಗದ ಕಾರಣಕ್ಕೆ ಮೀಸಲಾತಿ ನಿಗದಿಪಡಿಸುವುದು ಕಷ್ಟವಾಗಿದೆ. 2001ರ ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸಿದರೆ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗುತ್ತದೆ... ಹೀಗೆ ಅವರು ಪೂರ್ಣ ವರದಿಯನ್ನು ಸಂಪುಟ ಸಭೆ ಮುಂದೆ ಮಂಡಿಸಿದರು.<br /> <br /> ಅಷ್ಟರಲ್ಲಿ ಸಚಿವ ರೇಣುಕಾಚಾರ್ಯ ಅವರು ನಗರೋತ್ಥಾನ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಕರೆಯುವ ಬದಲು ಸ್ಥಳೀಯವಾಗಿ ಟೆಂಡರ್ ಕರೆಯಲು ಅವಕಾಶ ನೀಡಬೇಕು ಎಂದು ಧ್ವನಿ ಎತ್ತಿದರು.<br /> <br /> ಇದರಿಂದ ಸಿಟ್ಟಿಗೆದ್ದ ಜಾರಕಿಹೊಳಿ ಅವರು ನಗರೋತ್ಥಾನ ಯೋಜನೆ ಬಗ್ಗೆ ರೇಣುಕಾಚಾರ್ಯ ಅವರು ಲಘುವಾಗಿ ಮಾತನಾಡಿದ್ದಾರೆ. ಅವ್ಯವಹಾರ ನಡೆದಿದೆ ಎಂದು ಗುಲ್ಬರ್ಗದಲ್ಲೂ ದೂರಿದ್ದಾರೆ ಎಂದು ಆಕ್ಷೇಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>