<p>ಬೆಂಗಳೂರು: `ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ಎರಡು ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದೆ~ ಎಂದು ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು.<br /> <br /> ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಸೋಮವಾರ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳಡಿ 142 ಫಲಾನುಭವಿಗಳಿಗೆ ಒಟ್ಟು 48 ಲಕ್ಷ ರೂ. ಚೆಕ್ ವಿತರಿಸಿ ಅವರು ಮಾತನಾಡಿದರು.<br /> <br /> `ಸಾಮಾಜಿಕ ವ್ಯವಸ್ಥೆಯ ಬೆನ್ನೆಲುಬಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣಕ್ಕೋಸ್ಕರವೇ ಪ್ರತ್ಯೇಕ ಸಚಿವಾಲಯವನ್ನು ರಾಜ್ಯದಲ್ಲಿ ಆರಂಭಿಸಲಾಗುತ್ತಿದೆ. ಹಿಂದುಳಿದ ವರ್ಗದವರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಕರೆ ನೀಡಿದರು.<br /> <br /> `ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಯಾಗಲು ಪ್ರಮುಖ ರೂವಾರಿ ದೇವರಾಜ ಅರಸು. ರಾಜಕೀಯ ಸೇರಿದಂತೆ ಎಲ್ಲ ವಲಯಗಳಲ್ಲೂ ಹಿಂದುಳಿದವರಿಗೆ ಪ್ರಾತಿನಿಧ್ಯ ಸಿಗಬೇಕೆಂಬ ಅವರ ಆಶಯಕ್ಕೆ ಬಿಜೆಪಿ ಸರ್ಕಾರ ಬದ್ದವಾಗಿದೆ~ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಎಚ್.ಆರ್.ಕೃಷ್ಣಪ್ಪ, ರವೀಂದ್ರನ್ ಹಾಗೂ ಮಂಜುನಾಥ್ರವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ಎರಡು ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದೆ~ ಎಂದು ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು.<br /> <br /> ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಸೋಮವಾರ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳಡಿ 142 ಫಲಾನುಭವಿಗಳಿಗೆ ಒಟ್ಟು 48 ಲಕ್ಷ ರೂ. ಚೆಕ್ ವಿತರಿಸಿ ಅವರು ಮಾತನಾಡಿದರು.<br /> <br /> `ಸಾಮಾಜಿಕ ವ್ಯವಸ್ಥೆಯ ಬೆನ್ನೆಲುಬಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣಕ್ಕೋಸ್ಕರವೇ ಪ್ರತ್ಯೇಕ ಸಚಿವಾಲಯವನ್ನು ರಾಜ್ಯದಲ್ಲಿ ಆರಂಭಿಸಲಾಗುತ್ತಿದೆ. ಹಿಂದುಳಿದ ವರ್ಗದವರು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಕರೆ ನೀಡಿದರು.<br /> <br /> `ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಯಾಗಲು ಪ್ರಮುಖ ರೂವಾರಿ ದೇವರಾಜ ಅರಸು. ರಾಜಕೀಯ ಸೇರಿದಂತೆ ಎಲ್ಲ ವಲಯಗಳಲ್ಲೂ ಹಿಂದುಳಿದವರಿಗೆ ಪ್ರಾತಿನಿಧ್ಯ ಸಿಗಬೇಕೆಂಬ ಅವರ ಆಶಯಕ್ಕೆ ಬಿಜೆಪಿ ಸರ್ಕಾರ ಬದ್ದವಾಗಿದೆ~ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಎಚ್.ಆರ್.ಕೃಷ್ಣಪ್ಪ, ರವೀಂದ್ರನ್ ಹಾಗೂ ಮಂಜುನಾಥ್ರವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>