<p>ಚಾಮರಾಜನಗರ: ತಾಲ್ಲೂಕಿನ ಹೊಮ್ಮ ಗ್ರಾಮದಲ್ಲಿ ಸೋಮವಾರ ಸಣ್ಣಈರುಳ್ಳಿಗೆ ಕೂಡಲೇ ರಾಜ್ಯ ಸರ್ಕಾರ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.<br /> <br /> ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. ಪ್ರಸ್ತುತ ಸಣ್ಣಈರುಳ್ಳಿ ಧಾರಣೆ ಕುಸಿದಿದೆ. ಇದರಿಂದ ನಷ್ಟ ಅನುಭವಿಸುವಂತಾಗಿದೆ. ಆದರೆ, ಸರ್ಕಾರ ಮಾತ್ರ ಬೆಂಬಲ ಬೆಲೆ ನಿಗದಿ ಮಾಡಲು ಮುಂದಾಗಿಲ್ಲ ಎಂದು ದೂರಿದರು.<br /> <br /> ಬೆಲೆ ಕುಸಿದಿರುವ ಪರಿಣಾಮ ಜಮೀನಿನಲ್ಲಿರುವ ಈರುಳ್ಳಿ ಕಟಾವು ಆಗಿಲ್ಲ. ಸಂಪೂರ್ಣವಾಗಿ ಕೊಳೆತು ಹೋಗುತ್ತಿದೆ. ಉತ್ಪಾದನಾ ವೆಚ್ಚವೂ ಕೈಸೇರಿಲ್ಲ. ಇದರಿಂದ ಬದುಕು ನಡೆಸುವುದು ಕಷ್ಟವಾಗಲಿದೆ. ಕೂಡಲೇ, ರೈತರಿಗೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.<br /> <br /> ಅರಿಸಿನದ ಬೆಲೆಯೂ ತೀವ್ರವಾಗಿ ಕುಸಿದಿದೆ. ಆದರೆ, ಸರ್ಕಾರ ಬೆಂಬಲ ಬೆಲೆ ನಿಗದಿಗೆ ಮುಂದಾಗಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ಬೆಂಬಲ ಬೆಲೆ ನಿಗದಿಪಡಿಸಲು ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ. ಸರ್ಕಾರ ಕೂಡ ದಿವ್ಯನಿರ್ಲಕ್ಷ್ಯವಹಿಸಿರುವ ಪರಿಣಾಮ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. <br /> <br /> ಕೂಡಲೇ, ಈ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ಹೊಮ್ಮ ಗ್ರಾಮಸ್ಥರು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ತಾಲ್ಲೂಕಿನ ಹೊಮ್ಮ ಗ್ರಾಮದಲ್ಲಿ ಸೋಮವಾರ ಸಣ್ಣಈರುಳ್ಳಿಗೆ ಕೂಡಲೇ ರಾಜ್ಯ ಸರ್ಕಾರ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.<br /> <br /> ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. ಪ್ರಸ್ತುತ ಸಣ್ಣಈರುಳ್ಳಿ ಧಾರಣೆ ಕುಸಿದಿದೆ. ಇದರಿಂದ ನಷ್ಟ ಅನುಭವಿಸುವಂತಾಗಿದೆ. ಆದರೆ, ಸರ್ಕಾರ ಮಾತ್ರ ಬೆಂಬಲ ಬೆಲೆ ನಿಗದಿ ಮಾಡಲು ಮುಂದಾಗಿಲ್ಲ ಎಂದು ದೂರಿದರು.<br /> <br /> ಬೆಲೆ ಕುಸಿದಿರುವ ಪರಿಣಾಮ ಜಮೀನಿನಲ್ಲಿರುವ ಈರುಳ್ಳಿ ಕಟಾವು ಆಗಿಲ್ಲ. ಸಂಪೂರ್ಣವಾಗಿ ಕೊಳೆತು ಹೋಗುತ್ತಿದೆ. ಉತ್ಪಾದನಾ ವೆಚ್ಚವೂ ಕೈಸೇರಿಲ್ಲ. ಇದರಿಂದ ಬದುಕು ನಡೆಸುವುದು ಕಷ್ಟವಾಗಲಿದೆ. ಕೂಡಲೇ, ರೈತರಿಗೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.<br /> <br /> ಅರಿಸಿನದ ಬೆಲೆಯೂ ತೀವ್ರವಾಗಿ ಕುಸಿದಿದೆ. ಆದರೆ, ಸರ್ಕಾರ ಬೆಂಬಲ ಬೆಲೆ ನಿಗದಿಗೆ ಮುಂದಾಗಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು ಬೆಂಬಲ ಬೆಲೆ ನಿಗದಿಪಡಿಸಲು ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ. ಸರ್ಕಾರ ಕೂಡ ದಿವ್ಯನಿರ್ಲಕ್ಷ್ಯವಹಿಸಿರುವ ಪರಿಣಾಮ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ. <br /> <br /> ಕೂಡಲೇ, ಈ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ಹೊಮ್ಮ ಗ್ರಾಮಸ್ಥರು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>