<p>ಬೆಂಗಳೂರು: ಪ್ರಸ್ತುತ ಸಣ್ಣ ಕೈಗಾರಿಕೆಗಳನ್ನು ಆರಂಭಿಸಲು ಹಲವು ಇಲಾಖೆಗಳಿಂದ ಅನುಮತಿ ಪಡೆಯುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಸಣ್ಣ ಕೈಗಾರಿಕೆಗಳ ಇಲಾಖೆ ಮುಂದಾಗಿದ್ದು, ಉದ್ಯಮ ಆರಂಭಕ್ಕೆ ಅಗತ್ಯವಾದ ವಿವಿಧ ಅನುಮತಿಗಳನ್ನು ಏಕಗವಾಕ್ಷಿ ಪದ್ಧತಿ ಮೂಲಕ ನೀಡುವ ಪ್ರಕ್ರಿಯೆ ಆರಂಭಿಸಲಿದೆ.<br /> <br /> ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವು (ಕಾಸಿಯಾ) ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಇಲಾಖೆ ಸಚಿವ ರಾಜೂ ಗೌಡ ಈ ಭರವಸೆ ನೀಡಿದರು.<br /> <br /> ಕಾಸಿಯಾ ಅಧ್ಯಕ್ಷ ಪ್ರಕಾಶ್ ರಾಯ್ಕರ್ ಅವರು ಉದ್ಯಮಿಗಳು ಅನುಮತಿ ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಬಿಚ್ಚಿಟ್ಟಾಗ, ಇದಕ್ಕೆ ಸ್ಪಂದಿಸಿದ ಸಚಿವರು, `ಈ ಎಲ್ಲ ಇಲಾಖೆಗಳ ಅನುಮತಿಗಳನ್ನು ಪಡೆಯಲು ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತರುವುದರ ಬಗ್ಗೆ ಚಿಂತನೆ ನಡೆದಿದೆ. ಶೀಘ್ರವೇ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರೊಂದಿಗೆ ಮಾತುಕತೆ ನಡೆಸುತ್ತೇನೆ~ ಎಂದರು.<br /> <br /> `ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಇಲಾಖೆಗೆ ಮಾತ್ರ ಪ್ರಧಾನ ಕಾರ್ಯದರ್ಶಿ ಇದ್ದಾರೆ. ಇದರಿಂದ ಸಣ್ಣ ಕೈಗಾರಿಕೆಗಳಿಗೆ ಸಂಬಂಧಿಸಿದ ಕೆಲಸಗಳು ನಿಧಾನವಾಗುತ್ತಿವೆ. ಆದ್ದರಿಂದ ನಮ್ಮ ಇಲಾಖೆಗೂ ಪ್ರತ್ಯೇಕ ಆಯುಕ್ತರನ್ನು ನೇಮಕ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.<br /> <br /> `ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳು ನನ್ನ ಅರಿವಿಗೆ ಬಂದಿವೆ. ಸಮಸ್ಯೆಗಳನ್ನು ಪರಿಹರಿಸಲು ನನ್ನ ಅಧಿಕಾರ ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇನೆ. ಕೈಗಾರಿಕೆಗಳ ಒಟ್ಟಾರೆ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸುತ್ತೇನೆ. ರಾಜ್ಯಗಳಲ್ಲಿ ವ್ಯಾಟ್ ಪ್ರಮಾಣ ಶೇ 2ರಷ್ಟಿದ್ದರೆ ನಮ್ಮಲ್ಲಿ ಶೇ 14ರಷ್ಟಿದೆ. <br /> <br /> ಇದು ನನ್ನ ಗಮನದಲ್ಲಿದ್ದು, ತೆರಿಗೆ ಪ್ರಮಾಣ ಕಡಿತಗೊಳಿಸಲು ಪ್ರಯತ್ನಿಸುತ್ತೇನೆ. ಕೈಗಾರಿಕೆಗಳಿಗೆ ಪ್ರತ್ಯೇಕವಾಗಿ 400 ಮೆಗಾ ವಾಟ್ ವಿದ್ಯುತ್ ಫೀಡರ್ ಸ್ಥಾಪಿಸುವ ಯೋಜನೆಯೂ ಸರ್ಕಾರದ ಮುಂದಿದೆ~ ಎಂದರು. <br /> <br /> `ಕೃಷಿ ನಂತರ ಅತಿ ಹೆಚ್ಚು ಜನರು ಸಣ್ಣ ಕೈಗಾರಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ಈ ಕ್ಷೇತ್ರದ ಹಿತರಕ್ಷಣೆ ಸರ್ಕಾರದ ಕರ್ತವ್ಯವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶಿಷ್ಟ ವಸ್ತುಗಳನ್ನು ಉತ್ಪಾದಿಸುತ್ತಾರೆ. <br /> <br /> ಉದಾಹರಣೆಗೆ ಮಂಗಳೂರಿನಲ್ಲಿ ರಬ್ಬರ್, ಚಿತ್ರದುರ್ಗದಲ್ಲಿ ಬಟ್ಟೆಯನ್ನು ತಯಾರಿಸಲಾಗುತ್ತಿದೆ. ಈ ವಸ್ತುಗಳನ್ನು ಸರ್ಕಾರದ ವಿವಿಧ ಇಲಾಖೆಗಳೇ ಖರೀದಿಸಿ ಪ್ರೋತ್ಸಾಹಿಸಬೇಕು~ ಎಂದರು.<br /> <br /> `ಸಾರಿಗೆ ಸಂಸ್ಥೆಯ ಬಸ್ ಚಕ್ರಗಳ ರಿಮೌಲ್ಡ್ಗಳಿಗೆ ಅನ್ಯ ರಾಜ್ಯಗಳಿಂದ ತರಿಸಿದ ರಬ್ಬರ್ಗಳನ್ನು ಉಪಯೋಗಿಸಲಾಗುತ್ತಿದೆ. ಈ ಬಗ್ಗೆ ಸಾರಿಗೆ ಸಚಿವ ಆರ್.ಅಶೋಕ ಅವರೊಂದಿಗೆ ಚರ್ಚಿಸಿ ರಾಜ್ಯದಲ್ಲಿ ತಯಾರಾಗುವ ರಬ್ಬರ್ ಬಳಕೆ ಮಾಡಲು ವಿನಂತಿಸುತ್ತೇನೆ. ಅಲ್ಲದೆ, ಸಣ್ಣ ಕೈಗಾರಿಕೆಗಳು ಉತ್ಪಾದಿಸುತ್ತಿರುವ ಬಟ್ಟೆಗಳನ್ನು ವಿವಿಧ ಸರ್ಕಾರಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗಾಗಿ ಖರೀದಿಸುವಂತೆ ಸಮಾಜ ಕಲ್ಯಾಣ ಸಚಿವರಲ್ಲಿಯೂ ಮನವಿ ಮಾಡುತ್ತೇನೆ~ ಎಂದರು.<br /> <br /> <strong>`ಅ.ಆ.ಇ.ಈ. ಕಲಿಯುತ್ತಿದ್ದೇನೆ~!</strong><br /> `ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲಷ್ಟೇ ಇಲಾಖೆಯ ಬಗ್ಗೆ ಅ.ಆ.ಇ.ಈ. ಕಲಿಯುತ್ತಿದ್ದೇನೆ. ನೀವೆಲ್ಲ ಇದರಲ್ಲಿ ಮಾಸ್ಟರ್ ಡಿಗ್ರಿ ಪಡೆದವರು. ಆದ್ದರಿಂದ ನಿಮ್ಮ ಮಾರ್ಗದರ್ಶನ ಅಗತ್ಯ...~<br /> <br /> ಸಣ್ಣ ಕೈಗಾರಿಕೆಗಳ ಸಚಿವ ರಾಜೂ ಗೌಡ ಅವರು ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿಕೊಂಡಿದ್ದು ಹೀಗೆ.<br /> `ಕಾಸಿಯಾ~ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಇಲಾಖೆಯಲ್ಲಿ ಎಷ್ಟೊಂದು ಸಮಸ್ಯೆಗಳು ಇವೆಯಲ್ಲಾ ಎಂದು ಮೊದಲು ವಿಷಾದವಾಯಿತು. ಆದರೆ ಹಲವು ಸಮಸ್ಯೆಗಳು ಇದ್ದಾಗಲಷ್ಟೇ ಅವುಗಳನ್ನು ಪರಿಹರಿಸುವ ಶಕ್ತಿಯೂ ಬರುತ್ತದೆ ಎಂಬ ಮಾತಿನಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ~ ಎಂದರು.<br /> <br /> ಕಾಸಿಯಾ ಅಧ್ಯಕ್ಷ ಪ್ರಕಾಶ್ ಎನ್.ರಾಯ್ಕರ್ ಮುಂದಿಟ್ಟ ಎಲ್ಲ ಬೇಡಿಕೆಗಳಿಗೂ, `ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ~ ಎಂದು ಸಚಿವರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪ್ರಸ್ತುತ ಸಣ್ಣ ಕೈಗಾರಿಕೆಗಳನ್ನು ಆರಂಭಿಸಲು ಹಲವು ಇಲಾಖೆಗಳಿಂದ ಅನುಮತಿ ಪಡೆಯುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಸಣ್ಣ ಕೈಗಾರಿಕೆಗಳ ಇಲಾಖೆ ಮುಂದಾಗಿದ್ದು, ಉದ್ಯಮ ಆರಂಭಕ್ಕೆ ಅಗತ್ಯವಾದ ವಿವಿಧ ಅನುಮತಿಗಳನ್ನು ಏಕಗವಾಕ್ಷಿ ಪದ್ಧತಿ ಮೂಲಕ ನೀಡುವ ಪ್ರಕ್ರಿಯೆ ಆರಂಭಿಸಲಿದೆ.<br /> <br /> ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವು (ಕಾಸಿಯಾ) ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಇಲಾಖೆ ಸಚಿವ ರಾಜೂ ಗೌಡ ಈ ಭರವಸೆ ನೀಡಿದರು.<br /> <br /> ಕಾಸಿಯಾ ಅಧ್ಯಕ್ಷ ಪ್ರಕಾಶ್ ರಾಯ್ಕರ್ ಅವರು ಉದ್ಯಮಿಗಳು ಅನುಮತಿ ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಬಿಚ್ಚಿಟ್ಟಾಗ, ಇದಕ್ಕೆ ಸ್ಪಂದಿಸಿದ ಸಚಿವರು, `ಈ ಎಲ್ಲ ಇಲಾಖೆಗಳ ಅನುಮತಿಗಳನ್ನು ಪಡೆಯಲು ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತರುವುದರ ಬಗ್ಗೆ ಚಿಂತನೆ ನಡೆದಿದೆ. ಶೀಘ್ರವೇ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರೊಂದಿಗೆ ಮಾತುಕತೆ ನಡೆಸುತ್ತೇನೆ~ ಎಂದರು.<br /> <br /> `ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಇಲಾಖೆಗೆ ಮಾತ್ರ ಪ್ರಧಾನ ಕಾರ್ಯದರ್ಶಿ ಇದ್ದಾರೆ. ಇದರಿಂದ ಸಣ್ಣ ಕೈಗಾರಿಕೆಗಳಿಗೆ ಸಂಬಂಧಿಸಿದ ಕೆಲಸಗಳು ನಿಧಾನವಾಗುತ್ತಿವೆ. ಆದ್ದರಿಂದ ನಮ್ಮ ಇಲಾಖೆಗೂ ಪ್ರತ್ಯೇಕ ಆಯುಕ್ತರನ್ನು ನೇಮಕ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.<br /> <br /> `ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳು ನನ್ನ ಅರಿವಿಗೆ ಬಂದಿವೆ. ಸಮಸ್ಯೆಗಳನ್ನು ಪರಿಹರಿಸಲು ನನ್ನ ಅಧಿಕಾರ ವ್ಯಾಪ್ತಿಯಲ್ಲಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇನೆ. ಕೈಗಾರಿಕೆಗಳ ಒಟ್ಟಾರೆ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸುತ್ತೇನೆ. ರಾಜ್ಯಗಳಲ್ಲಿ ವ್ಯಾಟ್ ಪ್ರಮಾಣ ಶೇ 2ರಷ್ಟಿದ್ದರೆ ನಮ್ಮಲ್ಲಿ ಶೇ 14ರಷ್ಟಿದೆ. <br /> <br /> ಇದು ನನ್ನ ಗಮನದಲ್ಲಿದ್ದು, ತೆರಿಗೆ ಪ್ರಮಾಣ ಕಡಿತಗೊಳಿಸಲು ಪ್ರಯತ್ನಿಸುತ್ತೇನೆ. ಕೈಗಾರಿಕೆಗಳಿಗೆ ಪ್ರತ್ಯೇಕವಾಗಿ 400 ಮೆಗಾ ವಾಟ್ ವಿದ್ಯುತ್ ಫೀಡರ್ ಸ್ಥಾಪಿಸುವ ಯೋಜನೆಯೂ ಸರ್ಕಾರದ ಮುಂದಿದೆ~ ಎಂದರು. <br /> <br /> `ಕೃಷಿ ನಂತರ ಅತಿ ಹೆಚ್ಚು ಜನರು ಸಣ್ಣ ಕೈಗಾರಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ಈ ಕ್ಷೇತ್ರದ ಹಿತರಕ್ಷಣೆ ಸರ್ಕಾರದ ಕರ್ತವ್ಯವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶಿಷ್ಟ ವಸ್ತುಗಳನ್ನು ಉತ್ಪಾದಿಸುತ್ತಾರೆ. <br /> <br /> ಉದಾಹರಣೆಗೆ ಮಂಗಳೂರಿನಲ್ಲಿ ರಬ್ಬರ್, ಚಿತ್ರದುರ್ಗದಲ್ಲಿ ಬಟ್ಟೆಯನ್ನು ತಯಾರಿಸಲಾಗುತ್ತಿದೆ. ಈ ವಸ್ತುಗಳನ್ನು ಸರ್ಕಾರದ ವಿವಿಧ ಇಲಾಖೆಗಳೇ ಖರೀದಿಸಿ ಪ್ರೋತ್ಸಾಹಿಸಬೇಕು~ ಎಂದರು.<br /> <br /> `ಸಾರಿಗೆ ಸಂಸ್ಥೆಯ ಬಸ್ ಚಕ್ರಗಳ ರಿಮೌಲ್ಡ್ಗಳಿಗೆ ಅನ್ಯ ರಾಜ್ಯಗಳಿಂದ ತರಿಸಿದ ರಬ್ಬರ್ಗಳನ್ನು ಉಪಯೋಗಿಸಲಾಗುತ್ತಿದೆ. ಈ ಬಗ್ಗೆ ಸಾರಿಗೆ ಸಚಿವ ಆರ್.ಅಶೋಕ ಅವರೊಂದಿಗೆ ಚರ್ಚಿಸಿ ರಾಜ್ಯದಲ್ಲಿ ತಯಾರಾಗುವ ರಬ್ಬರ್ ಬಳಕೆ ಮಾಡಲು ವಿನಂತಿಸುತ್ತೇನೆ. ಅಲ್ಲದೆ, ಸಣ್ಣ ಕೈಗಾರಿಕೆಗಳು ಉತ್ಪಾದಿಸುತ್ತಿರುವ ಬಟ್ಟೆಗಳನ್ನು ವಿವಿಧ ಸರ್ಕಾರಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗಾಗಿ ಖರೀದಿಸುವಂತೆ ಸಮಾಜ ಕಲ್ಯಾಣ ಸಚಿವರಲ್ಲಿಯೂ ಮನವಿ ಮಾಡುತ್ತೇನೆ~ ಎಂದರು.<br /> <br /> <strong>`ಅ.ಆ.ಇ.ಈ. ಕಲಿಯುತ್ತಿದ್ದೇನೆ~!</strong><br /> `ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲಷ್ಟೇ ಇಲಾಖೆಯ ಬಗ್ಗೆ ಅ.ಆ.ಇ.ಈ. ಕಲಿಯುತ್ತಿದ್ದೇನೆ. ನೀವೆಲ್ಲ ಇದರಲ್ಲಿ ಮಾಸ್ಟರ್ ಡಿಗ್ರಿ ಪಡೆದವರು. ಆದ್ದರಿಂದ ನಿಮ್ಮ ಮಾರ್ಗದರ್ಶನ ಅಗತ್ಯ...~<br /> <br /> ಸಣ್ಣ ಕೈಗಾರಿಕೆಗಳ ಸಚಿವ ರಾಜೂ ಗೌಡ ಅವರು ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿಕೊಂಡಿದ್ದು ಹೀಗೆ.<br /> `ಕಾಸಿಯಾ~ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಇಲಾಖೆಯಲ್ಲಿ ಎಷ್ಟೊಂದು ಸಮಸ್ಯೆಗಳು ಇವೆಯಲ್ಲಾ ಎಂದು ಮೊದಲು ವಿಷಾದವಾಯಿತು. ಆದರೆ ಹಲವು ಸಮಸ್ಯೆಗಳು ಇದ್ದಾಗಲಷ್ಟೇ ಅವುಗಳನ್ನು ಪರಿಹರಿಸುವ ಶಕ್ತಿಯೂ ಬರುತ್ತದೆ ಎಂಬ ಮಾತಿನಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ~ ಎಂದರು.<br /> <br /> ಕಾಸಿಯಾ ಅಧ್ಯಕ್ಷ ಪ್ರಕಾಶ್ ಎನ್.ರಾಯ್ಕರ್ ಮುಂದಿಟ್ಟ ಎಲ್ಲ ಬೇಡಿಕೆಗಳಿಗೂ, `ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ~ ಎಂದು ಸಚಿವರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>