<p><strong>ಬೆಂಗಳೂರು: </strong>ಬಿಜೆಪಿಯ ಡಿ.ವಿ.ಸದಾನಂದ ಗೌಡ, ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ಸೇರಿ ಒಟ್ಟು ಐದು ಮಂದಿ ಗುರುವಾರ ನಗರದಲ್ಲಿ ನಾಮಪತ್ರ ಸಲ್ಲಿಸಿದರು. <br /> <br /> <strong>ಬೆಂಗಳೂರು ಉತ್ತರ:</strong> ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ.ವಿ.ಸದಾನಂದ ಗೌಡ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಪತ್ನಿ ಡಾಟಿ ಸಮೇತ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.ನಂತರ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಗೆ ಬೆಂಬಲಿಗರ ಜತೆ ತೆರಳಿ ನಾಮಪತ್ರ ಸಲ್ಲಿಸಿದರು.<br /> <br /> ಮುಖಂಡರಾದ ಅನಂತಕುಮಾರ್, ಆರ್.ಅಶೋಕ, ಡಾ.ಸಿ.ಎನ್.-ಅಶ್ವತ್ಥನಾರಾಯಣ, ಎಸ್.ಮುನಿರಾಜು, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವೈ.ಎ.ನಾರಾಯಣಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು. ಬೆಂಗಳೂರು ಕೇಂದ್ರ: ಬುಧವಾರ ಸಂಜೆಯೇ ಮೈಸೂರು ಬ್ಯಾಂಕ್ ವೃತ್ತದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದ ರಿಜ್ವಾನ್, ಗುರುವಾರ ಬೆಳಿಗ್ಗೆ ಕಾಟನ್ ಪೇಟೆಯಲ್ಲಿರುವ ತವಕ್ಕಲ್ ಮಸ್ತಾನ್ ದರ್ಗಾಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.<br /> <br /> ಮಧ್ಯಾಹ್ನ 12.30ಕ್ಕೆ ಗೃಹ ಸಚಿವ ಕೆ.ಜೆ.ಜಾರ್ಜ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ನ ಸರ್ಕಾರದ ಮುಖ್ಯ ಸಚೇತಕ ಆರ್.ವಿ.ವೆಂಕಟೇಶ್, ಶಾಸಕ ಎನ್.ಎ.ಹ್ಯಾರಿಸ್ ಅವರೊಂದಿಗೆ ಬಿಬಿಎಂಪಿ ಕೇಂದ್ರ ಕಚೇರಿ ಆವರಣಕ್ಕೆ ಬಂದು ನಾಮಪತ್ರ ಸಲ್ಲಿಸಿದರು.<br /> <br /> ನಾಮಪತ್ರ ಸಲ್ಲಿಕೆಗೂ ಮುನ್ನ ರಿಜ್ವಾನ್ ಕೆಲ ದೂರದವರೆಗೆ ಕಾರ್ಯಕರ್ತರು ಮತ್ತು ಬೆಂಬಲಿಗರ ಜೊತೆ ಮೆರವಣಿಗೆಯಲ್ಲಿ ಬಂದರು. ನಾಮಪತ್ರ ಸಲ್ಲಿಕೆ ನಂತರ ಪಾಲಿಕೆ ಕಚೇರಿ ಆವರಣದಲ್ಲಿನ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತೆರಳಿದರು.<br /> <strong>ಬೆಂಗಳೂರು ದಕ್ಷಿಣ:</strong> ಈ ಕ್ಷೇತ್ರದಲ್ಲಿ ಡಾ.ಕಡೂರ ವೆಂಕಟೇಶ, ಡಾ.ಪ್ರದೀಪ್ ಗದುಗೇಶ್ ಮತ್ತು ಜಿ.ವೆಂಕಟೇಶ ಭೋವಿ ಎಂಬುವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಜೆಪಿಯ ಡಿ.ವಿ.ಸದಾನಂದ ಗೌಡ, ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ಸೇರಿ ಒಟ್ಟು ಐದು ಮಂದಿ ಗುರುವಾರ ನಗರದಲ್ಲಿ ನಾಮಪತ್ರ ಸಲ್ಲಿಸಿದರು. <br /> <br /> <strong>ಬೆಂಗಳೂರು ಉತ್ತರ:</strong> ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ.ವಿ.ಸದಾನಂದ ಗೌಡ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಪತ್ನಿ ಡಾಟಿ ಸಮೇತ ಸಂಜಯನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.ನಂತರ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಗೆ ಬೆಂಬಲಿಗರ ಜತೆ ತೆರಳಿ ನಾಮಪತ್ರ ಸಲ್ಲಿಸಿದರು.<br /> <br /> ಮುಖಂಡರಾದ ಅನಂತಕುಮಾರ್, ಆರ್.ಅಶೋಕ, ಡಾ.ಸಿ.ಎನ್.-ಅಶ್ವತ್ಥನಾರಾಯಣ, ಎಸ್.ಮುನಿರಾಜು, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವೈ.ಎ.ನಾರಾಯಣಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು. ಬೆಂಗಳೂರು ಕೇಂದ್ರ: ಬುಧವಾರ ಸಂಜೆಯೇ ಮೈಸೂರು ಬ್ಯಾಂಕ್ ವೃತ್ತದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದ ರಿಜ್ವಾನ್, ಗುರುವಾರ ಬೆಳಿಗ್ಗೆ ಕಾಟನ್ ಪೇಟೆಯಲ್ಲಿರುವ ತವಕ್ಕಲ್ ಮಸ್ತಾನ್ ದರ್ಗಾಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.<br /> <br /> ಮಧ್ಯಾಹ್ನ 12.30ಕ್ಕೆ ಗೃಹ ಸಚಿವ ಕೆ.ಜೆ.ಜಾರ್ಜ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ನ ಸರ್ಕಾರದ ಮುಖ್ಯ ಸಚೇತಕ ಆರ್.ವಿ.ವೆಂಕಟೇಶ್, ಶಾಸಕ ಎನ್.ಎ.ಹ್ಯಾರಿಸ್ ಅವರೊಂದಿಗೆ ಬಿಬಿಎಂಪಿ ಕೇಂದ್ರ ಕಚೇರಿ ಆವರಣಕ್ಕೆ ಬಂದು ನಾಮಪತ್ರ ಸಲ್ಲಿಸಿದರು.<br /> <br /> ನಾಮಪತ್ರ ಸಲ್ಲಿಕೆಗೂ ಮುನ್ನ ರಿಜ್ವಾನ್ ಕೆಲ ದೂರದವರೆಗೆ ಕಾರ್ಯಕರ್ತರು ಮತ್ತು ಬೆಂಬಲಿಗರ ಜೊತೆ ಮೆರವಣಿಗೆಯಲ್ಲಿ ಬಂದರು. ನಾಮಪತ್ರ ಸಲ್ಲಿಕೆ ನಂತರ ಪಾಲಿಕೆ ಕಚೇರಿ ಆವರಣದಲ್ಲಿನ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತೆರಳಿದರು.<br /> <strong>ಬೆಂಗಳೂರು ದಕ್ಷಿಣ:</strong> ಈ ಕ್ಷೇತ್ರದಲ್ಲಿ ಡಾ.ಕಡೂರ ವೆಂಕಟೇಶ, ಡಾ.ಪ್ರದೀಪ್ ಗದುಗೇಶ್ ಮತ್ತು ಜಿ.ವೆಂಕಟೇಶ ಭೋವಿ ಎಂಬುವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>