<p><strong>ಬೆಂಗಳೂರು:</strong> ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಒಟ್ಟು 287 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಇದೇ 15ರಂದು (ಸ್ವಾತಂತ್ರ್ಯೋತ್ಸವ ದಿನ) ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.<br /> <br /> ಸನ್ನಡತೆಯ ಕೈದಿಗಳ ಬಿಡುಗಡೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ರಾಜ್ಯ ಸರ್ಕಾರ ರೂಪಿಸಿದ ಪರಿಷ್ಕೃತ ಮಾರ್ಗಸೂಚಿ ಅನ್ವಯ ಕೈದಿಗಳು ಬಿಡುಗಡೆ ಆಗಲಿದ್ದಾರೆ.<br /> <br /> ಸಿಬಿಐ, ಎನ್ಐಎ ತನಿಖೆಯಲ್ಲಿ ಶಿಕ್ಷೆಗೊಳಗಾದ ಕೈದಿಗಳು, ಭಯೋತ್ಪಾದನೆ, ರಾಜದ್ರೋಹ, ಎರಡಕ್ಕಿಂತ ಹೆಚ್ಚು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದವರು, ಶಸ್ತ್ರಸಜ್ಜಿತ ದರೋಡೆಕೋರರು, ಸುಪಾರಿ ಕೊಲೆಗಾರರು, ಮಾದಕ ದ್ರವ್ಯ ಸಾಗಣೆದಾರರು , ಅತ್ಯಾಚಾರ, ದರೋಡೆ, ಕೊಲೆ ಮಾಡಿದವರನ್ನು ಬಿಡುಗಡೆ ವ್ಯಾಪ್ತಿಯಿಂದ ಹೊರಗೆ ಇಡಲಾಗಿದೆ. ಸಿಆರ್ಪಿಸಿ (ದಂಡ ಪ್ರಕ್ರಿಯಾ ಸಂಹಿತೆ) ಕಲಂ 433 (ಎ) ಅನುಸಾರ ಶಿಕ್ಷೆ ಒಳಗಾದ ಕೈದಿಗಳು 14 ವರ್ಷ ಸೆರೆವಾಸ ಅನುಭವಿಸಿದ್ದರೆ ಮಾತ್ರ ಅವರಿಗೆ ಪರಿಷ್ಕೃತ ಮಾರ್ಗಸೂಚಿ ಅನ್ವಯವಾಗುತ್ತದೆ.<br /> <br /> ಜೀವಾವಾಧಿ ಶಿಕ್ಷೆಗೆ ಒಳಗಾಗಿರುವ 65 ವರ್ಷ ದಾಟಿದ ಪುರುಷ ಕೈದಿಗಳು ಯಾವುದೇ ಕಡಿತ ಇಲ್ಲದೆ 10 ವರ್ಷ ಜೈಲು ಅವಧಿ ಪೂರೈಸಿದ್ದರೆ ಮತ್ತು ಏಳು ವರ್ಷ ಕಾರಾಗೃಹದಲ್ಲಿರುವ 60 ವರ್ಷ ದಾಟಿದ ಮಹಿಳಾ ಕೈದಿಗಳು ಬಿಡುಗಡೆಗೆ ಅರ್ಹರಾಗಿದ್ದಾರೆ.<br /> <br /> <strong>433ಎ ಏನು ಹೇಳುತ್ತದೆ?</strong><br /> ಸಿಆರ್ಪಿಸಿ 433 (ಎ) ಅನುಸಾರ ಮರಣದಂಡನೆಗೆ ಒಳಗಾದವರು ರಾಷ್ಟ್ರಪತಿಗಳಿಂದ ಕ್ಷಮಾದಾನ ಪಡೆದಿದ್ದರೆ ಅಥವಾ ಉಚ್ಚ ನ್ಯಾಯಾಲಯಗಳ ತೀರ್ಪಿನ ಅನುಸಾರ ಮರಣ ದಂಡನೆಯಿಂದ ಜೀವಾವಧಿ ಶಿಕ್ಷೆಗೆ ಪರಿವರ್ತನೆ ಹೊಂದಿದ್ದರೆ ಅಂಥವರು 14 ವರ್ಷ ಶಿಕ್ಷೆ ಅನುಭವಿಸಲೇಬೇಕು.<br /> <br /> ಯಾವುದೇ ವಿನಾಯ್ತಿ ಅನುಸಾರ ಅವರನ್ನು 14 ವರ್ಷಕ್ಕೂ ಮುನ್ನ ಬಿಡುಗಡೆಗೆ ಪರಿಗಣಿಸುವಂತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಒಟ್ಟು 287 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಇದೇ 15ರಂದು (ಸ್ವಾತಂತ್ರ್ಯೋತ್ಸವ ದಿನ) ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.<br /> <br /> ಸನ್ನಡತೆಯ ಕೈದಿಗಳ ಬಿಡುಗಡೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ರಾಜ್ಯ ಸರ್ಕಾರ ರೂಪಿಸಿದ ಪರಿಷ್ಕೃತ ಮಾರ್ಗಸೂಚಿ ಅನ್ವಯ ಕೈದಿಗಳು ಬಿಡುಗಡೆ ಆಗಲಿದ್ದಾರೆ.<br /> <br /> ಸಿಬಿಐ, ಎನ್ಐಎ ತನಿಖೆಯಲ್ಲಿ ಶಿಕ್ಷೆಗೊಳಗಾದ ಕೈದಿಗಳು, ಭಯೋತ್ಪಾದನೆ, ರಾಜದ್ರೋಹ, ಎರಡಕ್ಕಿಂತ ಹೆಚ್ಚು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದವರು, ಶಸ್ತ್ರಸಜ್ಜಿತ ದರೋಡೆಕೋರರು, ಸುಪಾರಿ ಕೊಲೆಗಾರರು, ಮಾದಕ ದ್ರವ್ಯ ಸಾಗಣೆದಾರರು , ಅತ್ಯಾಚಾರ, ದರೋಡೆ, ಕೊಲೆ ಮಾಡಿದವರನ್ನು ಬಿಡುಗಡೆ ವ್ಯಾಪ್ತಿಯಿಂದ ಹೊರಗೆ ಇಡಲಾಗಿದೆ. ಸಿಆರ್ಪಿಸಿ (ದಂಡ ಪ್ರಕ್ರಿಯಾ ಸಂಹಿತೆ) ಕಲಂ 433 (ಎ) ಅನುಸಾರ ಶಿಕ್ಷೆ ಒಳಗಾದ ಕೈದಿಗಳು 14 ವರ್ಷ ಸೆರೆವಾಸ ಅನುಭವಿಸಿದ್ದರೆ ಮಾತ್ರ ಅವರಿಗೆ ಪರಿಷ್ಕೃತ ಮಾರ್ಗಸೂಚಿ ಅನ್ವಯವಾಗುತ್ತದೆ.<br /> <br /> ಜೀವಾವಾಧಿ ಶಿಕ್ಷೆಗೆ ಒಳಗಾಗಿರುವ 65 ವರ್ಷ ದಾಟಿದ ಪುರುಷ ಕೈದಿಗಳು ಯಾವುದೇ ಕಡಿತ ಇಲ್ಲದೆ 10 ವರ್ಷ ಜೈಲು ಅವಧಿ ಪೂರೈಸಿದ್ದರೆ ಮತ್ತು ಏಳು ವರ್ಷ ಕಾರಾಗೃಹದಲ್ಲಿರುವ 60 ವರ್ಷ ದಾಟಿದ ಮಹಿಳಾ ಕೈದಿಗಳು ಬಿಡುಗಡೆಗೆ ಅರ್ಹರಾಗಿದ್ದಾರೆ.<br /> <br /> <strong>433ಎ ಏನು ಹೇಳುತ್ತದೆ?</strong><br /> ಸಿಆರ್ಪಿಸಿ 433 (ಎ) ಅನುಸಾರ ಮರಣದಂಡನೆಗೆ ಒಳಗಾದವರು ರಾಷ್ಟ್ರಪತಿಗಳಿಂದ ಕ್ಷಮಾದಾನ ಪಡೆದಿದ್ದರೆ ಅಥವಾ ಉಚ್ಚ ನ್ಯಾಯಾಲಯಗಳ ತೀರ್ಪಿನ ಅನುಸಾರ ಮರಣ ದಂಡನೆಯಿಂದ ಜೀವಾವಧಿ ಶಿಕ್ಷೆಗೆ ಪರಿವರ್ತನೆ ಹೊಂದಿದ್ದರೆ ಅಂಥವರು 14 ವರ್ಷ ಶಿಕ್ಷೆ ಅನುಭವಿಸಲೇಬೇಕು.<br /> <br /> ಯಾವುದೇ ವಿನಾಯ್ತಿ ಅನುಸಾರ ಅವರನ್ನು 14 ವರ್ಷಕ್ಕೂ ಮುನ್ನ ಬಿಡುಗಡೆಗೆ ಪರಿಗಣಿಸುವಂತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>