<p><strong>ಬೆಂಗಳೂರು: </strong>ಕಾಲಮಿತಿಯಲ್ಲಿ ಸೇವೆ ನೀಡ ಬೇಕೆನ್ನುವ `ಸಕಾಲ~ದಿಂದ ತಪ್ಪಿಸಿಕೊಳ್ಳಲು ಸರ್ಕಾರಿ ನೌಕರರು ಪರ್ಯಾಯ ಮಾರ್ಗ ಹುಡುಕದೇ ಕಾರ್ಯನಿರ್ವಹಿಸಬೇಕು~ ಎಂದು ಸಚಿವ ಆರ್.ಅಶೋಕ ಹೇಳಿದರು.<br /> <br /> ಬೆಂಗಳೂರು ನಗರ ಜಿಲ್ಲಾಡಳಿತವು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ `ಸಕಾಲ~ ನಾಗರಿಕ ಸೇವಾ ಖಾತರಿ ಕಾಯ್ದೆಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಸಕಾಲ~ ಸರ್ಕಾರದ ಬಹನಿರೀಕ್ಷಿತ ಯೋಜನೆಯಾಗಿದ್ದು, ಸರ್ಕಾರಿ ನೌಕರರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಬೇಕು. ನೌಕರರು ಕಡತ ವಿಲೇವಾರಿ ವಿಳಂಬ ಮಾಡುವುದು ಮತ್ತು ಸೇವೆ ಬಯಸಿ ಬಂದವರಿಗೆ ಸಬೂಬು ಹೇಳುವುದನ್ನು ಬಿಡಬೇಕು~ ಎಂದು ಸಲಹೆ ನೀಡಿದರು.<br /> <br /> `ನಾಗರಿಕ ಸೇವಾ ಖಾತರಿ ಕಾಯ್ದೆಯ ಜಾರಿಯಿಂದ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ. ಈ ಯೋಜನೆಯ ಪೂರ್ಣ ಯಶಸ್ಸು ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಸಹಕಾರದ ಮೇಲೆ ನಿಂತಿದೆ~ ಎಂದು ಹೇಳಿದರು.<br /> <br /> ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿದ್ದಯ್ಯ, ಜಿಲ್ಲೆ ಮತ್ತು ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಾಲಮಿತಿಯಲ್ಲಿ ಸೇವೆ ನೀಡ ಬೇಕೆನ್ನುವ `ಸಕಾಲ~ದಿಂದ ತಪ್ಪಿಸಿಕೊಳ್ಳಲು ಸರ್ಕಾರಿ ನೌಕರರು ಪರ್ಯಾಯ ಮಾರ್ಗ ಹುಡುಕದೇ ಕಾರ್ಯನಿರ್ವಹಿಸಬೇಕು~ ಎಂದು ಸಚಿವ ಆರ್.ಅಶೋಕ ಹೇಳಿದರು.<br /> <br /> ಬೆಂಗಳೂರು ನಗರ ಜಿಲ್ಲಾಡಳಿತವು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ `ಸಕಾಲ~ ನಾಗರಿಕ ಸೇವಾ ಖಾತರಿ ಕಾಯ್ದೆಗೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> `ಸಕಾಲ~ ಸರ್ಕಾರದ ಬಹನಿರೀಕ್ಷಿತ ಯೋಜನೆಯಾಗಿದ್ದು, ಸರ್ಕಾರಿ ನೌಕರರು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಬೇಕು. ನೌಕರರು ಕಡತ ವಿಲೇವಾರಿ ವಿಳಂಬ ಮಾಡುವುದು ಮತ್ತು ಸೇವೆ ಬಯಸಿ ಬಂದವರಿಗೆ ಸಬೂಬು ಹೇಳುವುದನ್ನು ಬಿಡಬೇಕು~ ಎಂದು ಸಲಹೆ ನೀಡಿದರು.<br /> <br /> `ನಾಗರಿಕ ಸೇವಾ ಖಾತರಿ ಕಾಯ್ದೆಯ ಜಾರಿಯಿಂದ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ. ಈ ಯೋಜನೆಯ ಪೂರ್ಣ ಯಶಸ್ಸು ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಸಹಕಾರದ ಮೇಲೆ ನಿಂತಿದೆ~ ಎಂದು ಹೇಳಿದರು.<br /> <br /> ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿದ್ದಯ್ಯ, ಜಿಲ್ಲೆ ಮತ್ತು ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>