<p><strong>ಬೆಂಗಳೂರು: </strong>`ವಿದೇಶಿ ಬಂಡವಾಳ ಹೂಡಿಕೆಯು ಚಿಲ್ಲರೆ ವ್ಯಾಪಾರಿಗಳಿಗೆ ಕೆಡಕು ಉಂಟು ಮಾಡದಂತೆ ಕಾರ್ಯಗತವಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದ ಜವಾಬ್ದಾರಿ ಹೆಚ್ಚೇ ಇದೆ~ ಎಂದು ಕೃಷಿ ವಿಜ್ಞಾನ ವಿವಿಯ ನಿವೃತ್ತ ಕುಲಪತಿ ಡಾ. ಎಸ್.ಬಿಸಿಲಯ್ಯ ಹೇಳಿದರು.<br /> <br /> ಬೆಂಗಳೂರು ಸಮಾಜ ವಿಜ್ಞಾನ ವೇದಿಕೆಯು ನ್ಯಾಷನಲ್ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ `ಕೇಂದ್ರ ಬಜೆಟ್~ ಕುರಿತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ಬಾರಿಯ ಬಜೆಟ್ನಲ್ಲಿ ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ ಕೇವಲ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಕೇವಲ ಸಬ್ಸಿಡಿ ನೀಡುವುದು ಮಾತ್ರ ಅಭಿವೃದ್ದಿಯಲ್ಲ~ ಎಂದು ಹೇಳಿದರು.<br /> <br /> `ಸಬ್ಸಿಡಿ ವಿತರಣೆಯ ಮಾನದಂಡದ ಬಗ್ಗೆ ಅವಶ್ಯಕವಾಗಿ ಚಿಂತನೆ ನಡೆಸುವ ಅಗತ್ಯವಿದೆ. ಆರ್ಥಿಕವಾಗಿ ಮುಂದುವರಿದಿರುವ ಕೃಷಿಕರು ಮತ್ತು ದೊಡ್ಡ ಮಟ್ಟದ ಕೈಗಾರಿಕೆಗಳಿಗೆ ಸಬ್ಸಿಡಿಯ ಅಗತ್ಯವಿರುವುದಿಲ್ಲ. ಸರ್ಕಾರ ಸಬ್ಸಿಡಿ ವಿತರಣೆಯಲ್ಲಿ ಲಾಬಿಗೆ ಮಣಿಯದಂತೆ ಎಚ್ಚರವಹಿಸಬೇಕು~ ಎಂದರು.<br /> <br /> `ದೇಶದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಶಾಖೆಯು ಪ್ರಾರಂಭಗೊಳ್ಳುವುದಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಸರಿಯಲ್ಲ. ಪ್ರಸ್ತುತವಿರುವ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಆ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು~ ಎಂದು ಹೇಳಿದರು. ಸಂಸ್ಥೆ ಅಧ್ಯಕ್ಷ ಎ. ಜೆ.ಸದಾಶಿವ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ವಿದೇಶಿ ಬಂಡವಾಳ ಹೂಡಿಕೆಯು ಚಿಲ್ಲರೆ ವ್ಯಾಪಾರಿಗಳಿಗೆ ಕೆಡಕು ಉಂಟು ಮಾಡದಂತೆ ಕಾರ್ಯಗತವಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದ ಜವಾಬ್ದಾರಿ ಹೆಚ್ಚೇ ಇದೆ~ ಎಂದು ಕೃಷಿ ವಿಜ್ಞಾನ ವಿವಿಯ ನಿವೃತ್ತ ಕುಲಪತಿ ಡಾ. ಎಸ್.ಬಿಸಿಲಯ್ಯ ಹೇಳಿದರು.<br /> <br /> ಬೆಂಗಳೂರು ಸಮಾಜ ವಿಜ್ಞಾನ ವೇದಿಕೆಯು ನ್ಯಾಷನಲ್ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ `ಕೇಂದ್ರ ಬಜೆಟ್~ ಕುರಿತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ಬಾರಿಯ ಬಜೆಟ್ನಲ್ಲಿ ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ ಕೇವಲ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಕೇವಲ ಸಬ್ಸಿಡಿ ನೀಡುವುದು ಮಾತ್ರ ಅಭಿವೃದ್ದಿಯಲ್ಲ~ ಎಂದು ಹೇಳಿದರು.<br /> <br /> `ಸಬ್ಸಿಡಿ ವಿತರಣೆಯ ಮಾನದಂಡದ ಬಗ್ಗೆ ಅವಶ್ಯಕವಾಗಿ ಚಿಂತನೆ ನಡೆಸುವ ಅಗತ್ಯವಿದೆ. ಆರ್ಥಿಕವಾಗಿ ಮುಂದುವರಿದಿರುವ ಕೃಷಿಕರು ಮತ್ತು ದೊಡ್ಡ ಮಟ್ಟದ ಕೈಗಾರಿಕೆಗಳಿಗೆ ಸಬ್ಸಿಡಿಯ ಅಗತ್ಯವಿರುವುದಿಲ್ಲ. ಸರ್ಕಾರ ಸಬ್ಸಿಡಿ ವಿತರಣೆಯಲ್ಲಿ ಲಾಬಿಗೆ ಮಣಿಯದಂತೆ ಎಚ್ಚರವಹಿಸಬೇಕು~ ಎಂದರು.<br /> <br /> `ದೇಶದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಶಾಖೆಯು ಪ್ರಾರಂಭಗೊಳ್ಳುವುದಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಸರಿಯಲ್ಲ. ಪ್ರಸ್ತುತವಿರುವ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಆ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು~ ಎಂದು ಹೇಳಿದರು. ಸಂಸ್ಥೆ ಅಧ್ಯಕ್ಷ ಎ. ಜೆ.ಸದಾಶಿವ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>