<p><strong>ಚಿತ್ರದುರ್ಗ: </strong>ನಗರದಲ್ಲಿ ಸೋಮವಾರ ನಡೆದ ಜಿಲ್ಲಾ ಬಣಜಾರ ಬಾಲಕಿಯರ ವಿದ್ಯಾರ್ಥಿನಿಲಯದ ಮಹಾಸಭೆ ಆಯೋಜಿಸಲು ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಜಿ.ಪಂ. ಸದಸ್ಯ ರಾಜಾನಾಯ್ಕ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.<br /> <br /> ಸೋಮವಾರ ಬೆಳಿಗ್ಗೆ 11.30ಕ್ಕೆ ಬಂಜಾರ ಬಾಲಕಿಯರ ವಿದ್ಯಾರ್ಥಿ ನಿಲಯದ ಮಹಾಸಭೆಯನ್ನು ಸಂಸ್ಥೆಯ ಉಪಾಧ್ಯಕ್ಷೆ ಸೀತಾಬಾಯಿ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಆದರೆ, ಸಭೆ ಆಯೋಜಿಸದಂತೆ ಪೊಲೀಸರು ಸೂಚಿಸಿದಾಗ ಮುಖಂಡರ ಜತೆ ಮಾತಿನ ಚಕಮಕಿ ನಡೆಯಿತು.<br /> <br /> ‘ತಮಗೆ ಅನಗತ್ಯವಾಗಿ ಅವಕಾಶ ನಿರಾಕರಿಸಲಾಗುತ್ತಿದೆ. ವಿದ್ಯಾರ್ಥಿ ನಿಲಯಗಳಿಗೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳು ತಮ್ಮ ಬಳಿ ಇದ್ದು, ಸಭೆ ನಡೆಸಲು ಅವಕಾಶ ನೀಡಬೇಕು’ ಎಂದು ರಾಜಾನಾಯ್ಕ ಮತ್ತಿತರರು ಆಗ್ರಹಿಸಿದರು.<br /> <br /> ಪೊಲೀಸರ ಕ್ರಮ ಖಂಡಿಸಿ ಕೆಲಕಾಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸಭೆಗೆ ಅಡ್ಡಿಪಡಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಅವರು ಮಧ್ಯಪ್ರವೇಶಿಸಿ ಮುಖಂಡರ ಮನವೊಲಿಸಿದರು.<br /> <br /> ವಿದ್ಯಾರ್ಥಿನಿಲಯದ ಆವರಣದಲ್ಲಿ ಸಭೆ ನಡೆಸಿದ ಮುಖಂಡರು ಜಿಲ್ಲಾ ಬಣಜಾರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅಧ್ಯಕ್ಷರಾಗಿ ಡಾ. ತುಳಾಜಾಕ್ಷಾಬಾಯಿ ಮತ್ತು ಉಪಾಧ್ಯಕ್ಷರನ್ನಾಗಿ ಸೀತಾಬಾಯಿ ಹಾಗೂ ಕಾರ್ಯದರ್ಶಿಯನ್ನಾಗಿ ಕೋಕಿಲಾಬಾಯಿ ಅವರನ್ನು ಆಯ್ಕೆ ಮಾಡಿದರು ಎಂದು ರಾಜಾನಾಯ್ಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ನಗರದಲ್ಲಿ ಸೋಮವಾರ ನಡೆದ ಜಿಲ್ಲಾ ಬಣಜಾರ ಬಾಲಕಿಯರ ವಿದ್ಯಾರ್ಥಿನಿಲಯದ ಮಹಾಸಭೆ ಆಯೋಜಿಸಲು ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಜಿ.ಪಂ. ಸದಸ್ಯ ರಾಜಾನಾಯ್ಕ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.<br /> <br /> ಸೋಮವಾರ ಬೆಳಿಗ್ಗೆ 11.30ಕ್ಕೆ ಬಂಜಾರ ಬಾಲಕಿಯರ ವಿದ್ಯಾರ್ಥಿ ನಿಲಯದ ಮಹಾಸಭೆಯನ್ನು ಸಂಸ್ಥೆಯ ಉಪಾಧ್ಯಕ್ಷೆ ಸೀತಾಬಾಯಿ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಆದರೆ, ಸಭೆ ಆಯೋಜಿಸದಂತೆ ಪೊಲೀಸರು ಸೂಚಿಸಿದಾಗ ಮುಖಂಡರ ಜತೆ ಮಾತಿನ ಚಕಮಕಿ ನಡೆಯಿತು.<br /> <br /> ‘ತಮಗೆ ಅನಗತ್ಯವಾಗಿ ಅವಕಾಶ ನಿರಾಕರಿಸಲಾಗುತ್ತಿದೆ. ವಿದ್ಯಾರ್ಥಿ ನಿಲಯಗಳಿಗೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳು ತಮ್ಮ ಬಳಿ ಇದ್ದು, ಸಭೆ ನಡೆಸಲು ಅವಕಾಶ ನೀಡಬೇಕು’ ಎಂದು ರಾಜಾನಾಯ್ಕ ಮತ್ತಿತರರು ಆಗ್ರಹಿಸಿದರು.<br /> <br /> ಪೊಲೀಸರ ಕ್ರಮ ಖಂಡಿಸಿ ಕೆಲಕಾಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸಭೆಗೆ ಅಡ್ಡಿಪಡಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಅವರು ಮಧ್ಯಪ್ರವೇಶಿಸಿ ಮುಖಂಡರ ಮನವೊಲಿಸಿದರು.<br /> <br /> ವಿದ್ಯಾರ್ಥಿನಿಲಯದ ಆವರಣದಲ್ಲಿ ಸಭೆ ನಡೆಸಿದ ಮುಖಂಡರು ಜಿಲ್ಲಾ ಬಣಜಾರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅಧ್ಯಕ್ಷರಾಗಿ ಡಾ. ತುಳಾಜಾಕ್ಷಾಬಾಯಿ ಮತ್ತು ಉಪಾಧ್ಯಕ್ಷರನ್ನಾಗಿ ಸೀತಾಬಾಯಿ ಹಾಗೂ ಕಾರ್ಯದರ್ಶಿಯನ್ನಾಗಿ ಕೋಕಿಲಾಬಾಯಿ ಅವರನ್ನು ಆಯ್ಕೆ ಮಾಡಿದರು ಎಂದು ರಾಜಾನಾಯ್ಕ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>