<p>ಬಳ್ಳಾರಿ: ಮೂರು ವರ್ಷಗಳ ಹಿಂದೆ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರ್ಕಾರ ಈ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.<br /> <br /> ನಗರದ ಕೌಲ್ಬಝಾರ್ ಬಳಿಯ ಬೆಳಗಲ್ ಕ್ರಾಸ್ನಲ್ಲಿ ಸೋಮವಾರ ರಾತ್ರಿ ನಡೆದ ಸಮಾರಂಭದಲ್ಲಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.<br /> <br /> ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದ್ದು, ಸಾಕಷ್ಟು ಅನುದಾನವೂ ಬಿಡುಗಡೆಯಾಗಿದೆ. ರಸ್ತೆ ಅಭಿವೃದ್ಧಿಗೆ ರೂ 100 ಕೋಟಿ, ಬೈಪಾಸ್ ರಸ್ತೆಗೆ ರೂ 112 ಕೋಟಿ ಅನುದಾನ ಮಂಜೂರಾಗಿದೆ ಎಂದರು.<br /> <br /> ಬಳ್ಳಾರಿಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ಅಧಿಕ ಅನುದಾನ ಪಡೆಯಲಾಗಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಟೀಕಿಸುವ ಕಾರ್ಯ ಕೈಬಿಟ್ಟು ರಾಜ್ಯದ ಅಭಿವೃದ್ಧಿ ಗಮನಿಸಿ, ಸರ್ಕಾರದ ಜನಪರ ಯೋಜನೆಗಳಿಗೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.<br /> <br /> ಬಡ ರೈತರಿಗಾಗಿ ಸುವರ್ಣ ಭೂಮಿ ಯೋಜನೆ ಜಾರಿಗೆ ತರುವ ಮೂಲಕ ಜನಾನುರಾಗಿಯಾಗಿರುವ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ್ದು, ವಿರೋಧ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ವಿನಾಕಾರಣ ಸರ್ಕಾರದ ಹೆಸರು ಕೆಡಿಸುವ ತಂತ್ರದಲ್ಲಿ ವಿರೋಧ ಪಕ್ಷದ ನಾಯಕರು ತೊಡಗಿದ್ದಾರೆ ಎಂದು ಅವರು ಆರೋಪಿಸಿದರು.<br /> <br /> ಜೂನ್ ಅಂತ್ಯದೊಳಗೆ ನಗರ ನೀರು ಸರಬರಾಜು ಕಾಮಗಾರಿ ಪೂರ್ಣಗೊಳ್ಳಲಿದ್ದು, ಸಂಗನಕಲ್, ಅಲ್ಲಿಪುರ ಕೆರೆಗಳಲ್ಲಿ ಹೆಚ್ಚುವರಿ ನೀರು ಸಂಗ್ರಹಿಸಿ ನಗರಕ್ಕೆ ದಿನದ 24 ಗಂಟೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು.<br /> <br /> ಸಂಸದೆ ಜಿ.ಶಾಂತ, ಮೇಯರ್ ಪಾರ್ವತಿ, ಜಿ.ಪಂ. ಅಧ್ಯಕ್ಷೆ ಅರುಣಾ, ವಿಧಾನ ಪರಿಷತ್ ಸದಸ್ಯ ಮೃತ್ಯುಂಜಯ ಜನಗಾ, ಉಪಮೇಯರ್ ಶಶಿಕಲಾ, ಜಿಲ್ಲಾಧಿಕಾರಿ ಎ.ಎ. ಬಿಶ್ವಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಮೂರು ವರ್ಷಗಳ ಹಿಂದೆ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರ್ಕಾರ ಈ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.<br /> <br /> ನಗರದ ಕೌಲ್ಬಝಾರ್ ಬಳಿಯ ಬೆಳಗಲ್ ಕ್ರಾಸ್ನಲ್ಲಿ ಸೋಮವಾರ ರಾತ್ರಿ ನಡೆದ ಸಮಾರಂಭದಲ್ಲಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.<br /> <br /> ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದ್ದು, ಸಾಕಷ್ಟು ಅನುದಾನವೂ ಬಿಡುಗಡೆಯಾಗಿದೆ. ರಸ್ತೆ ಅಭಿವೃದ್ಧಿಗೆ ರೂ 100 ಕೋಟಿ, ಬೈಪಾಸ್ ರಸ್ತೆಗೆ ರೂ 112 ಕೋಟಿ ಅನುದಾನ ಮಂಜೂರಾಗಿದೆ ಎಂದರು.<br /> <br /> ಬಳ್ಳಾರಿಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ಅಧಿಕ ಅನುದಾನ ಪಡೆಯಲಾಗಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ಟೀಕಿಸುವ ಕಾರ್ಯ ಕೈಬಿಟ್ಟು ರಾಜ್ಯದ ಅಭಿವೃದ್ಧಿ ಗಮನಿಸಿ, ಸರ್ಕಾರದ ಜನಪರ ಯೋಜನೆಗಳಿಗೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.<br /> <br /> ಬಡ ರೈತರಿಗಾಗಿ ಸುವರ್ಣ ಭೂಮಿ ಯೋಜನೆ ಜಾರಿಗೆ ತರುವ ಮೂಲಕ ಜನಾನುರಾಗಿಯಾಗಿರುವ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ್ದು, ವಿರೋಧ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ. ವಿನಾಕಾರಣ ಸರ್ಕಾರದ ಹೆಸರು ಕೆಡಿಸುವ ತಂತ್ರದಲ್ಲಿ ವಿರೋಧ ಪಕ್ಷದ ನಾಯಕರು ತೊಡಗಿದ್ದಾರೆ ಎಂದು ಅವರು ಆರೋಪಿಸಿದರು.<br /> <br /> ಜೂನ್ ಅಂತ್ಯದೊಳಗೆ ನಗರ ನೀರು ಸರಬರಾಜು ಕಾಮಗಾರಿ ಪೂರ್ಣಗೊಳ್ಳಲಿದ್ದು, ಸಂಗನಕಲ್, ಅಲ್ಲಿಪುರ ಕೆರೆಗಳಲ್ಲಿ ಹೆಚ್ಚುವರಿ ನೀರು ಸಂಗ್ರಹಿಸಿ ನಗರಕ್ಕೆ ದಿನದ 24 ಗಂಟೆ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು.<br /> <br /> ಸಂಸದೆ ಜಿ.ಶಾಂತ, ಮೇಯರ್ ಪಾರ್ವತಿ, ಜಿ.ಪಂ. ಅಧ್ಯಕ್ಷೆ ಅರುಣಾ, ವಿಧಾನ ಪರಿಷತ್ ಸದಸ್ಯ ಮೃತ್ಯುಂಜಯ ಜನಗಾ, ಉಪಮೇಯರ್ ಶಶಿಕಲಾ, ಜಿಲ್ಲಾಧಿಕಾರಿ ಎ.ಎ. ಬಿಶ್ವಾಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>