<p>ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಗೇಜ್ ನಿರ್ವಹಣೆ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ಬರಗಾಲ ಪರಿಸ್ಥಿತಿ ಪರಿಹಾರ ಕುರಿತ ಸಭೆಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ ಕುರಿತ ಚರ್ಚೆ ವೇಳೆ ಹೇಳಿದರು.<br /> <br /> ಗೇಜ್ ನಿರ್ವಹಣೆ ಅಸಮರ್ಪಕವಾಗಿ ನಡೆಯುತ್ತಲೇ ಇದೆ. ನೀರಾವರಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಹಾಗೂ ಮೇಲ್ಭಾಗದ ರೈತರು ಹೆಚ್ಚು ನೀರು ಪಡೆಯುತ್ತಿರುವುದೇ ಕಾರಣಎಂದು ಮಾನ್ವಿ ಶಾಸಕ ಹಂಪಯ್ಯ ನಾಯಕ ಒತ್ತಾಯಿಸಿದರು.<br /> <br /> ಸದ್ಯ ನೀರು ನಿರ್ವಹಣೆ ಸಮರ್ಪಕವಾಗಿ ಆಗುತ್ತಿದೆ. ರಾಯಚೂರು ನಗರಕ್ಕೆ ಇನ್ನೂ ಒಂದು ತಿಂಗಳು ನೀರು ಪೂರೈಸಲು ಬೇಕಾದ ನೀರು ಸಂಗ್ರಹಿಸಲಾಗಿದೆ. ಕಾಲುವೆ ಕೊನೆ ಭಾಗದ ರೈತರಿಗೆ ನೀರು ಹರಿಸಲು ಸಮಸ್ಯೆ ಆಗುತ್ತಿದೆ ಎಂದು ಎಂಜಿನಿಯರ್ ಹನುಮಂತರಾಯ ವಿವರಣೆ ನೀಡಿದರು.<br /> <br /> ಇದನ್ನು ಆಕ್ಷೇಪಿಸಿದ ಶಾಸಕ ಸಯ್ಯದ್ ಯಾಸಿನ್, ಕಾಲುವೆಯಿಂದ ರಾಯಚೂರಿಗೆ ನೀರು ಪೂರೈಸಲು ಹಾಗೂ ಕೊನೆ ಭಾಗದ ರೈತರಿಗೆ ತೊಂದರೆ ಆಗುತ್ತದೆ ಎಂಬ ಮಾತು ಸರಿಯಲ್ಲ. ಮೇಲ್ಭಾಗದಿಂದಲೇ ನೀರು ಹರಿಸುವಲ್ಲಿ ಅನ್ಯಾಯವಾಗುತ್ತಿದೆ. ರಾಜಕೀಯ ಹುನ್ನಾರವೂ ಇದರಲ್ಲಿದೆ. ನಿಮ್ಮದೇ ಲೋಪ ಎಂದು ತರಾಟೆಗೆ ತೆಗೆದುಕೊಂಡರು.<br /> <br /> ಈ ಸಮಸ್ಯೆ ಸರಿಪಡಿಸಬೇಕಾದರೆ ತುಂಗಭದ್ರಾ ಕಾಲುವೆ `0~ ಮೈಲ್ನಿಂದಲೇ ಆರಂಭಿಸಬೇಕು ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ ಬಸವನಗೌಡ ಬ್ಯಾಗವಾಟ ಹೇಳಿದರು.<br /> <br /> ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಪರಿಹಾರ ಕಂಡುಕೊಳ್ಳಬಹುದು ಎಂದು ಶಾಸಕ ನಾಡಗೌಡ ಹೇಳಿದರು. <br /> <br /> ಶೀಘ್ರವೆ ಎರಡೂ ಜಿಲ್ಲೆ ಅಧಿಕಾರಿಗಳ ಸಭೆ ನಡೆಸಲಾಗುವುದು. ಗೇಜ್ ನಿರ್ವಹಣೆ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಲಿ ಎಂದು ಸಚಿವರು ಚರ್ಚೆಯ ಬಳಿಕ ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಗೇಜ್ ನಿರ್ವಹಣೆ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ಬರಗಾಲ ಪರಿಸ್ಥಿತಿ ಪರಿಹಾರ ಕುರಿತ ಸಭೆಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ ಕುರಿತ ಚರ್ಚೆ ವೇಳೆ ಹೇಳಿದರು.<br /> <br /> ಗೇಜ್ ನಿರ್ವಹಣೆ ಅಸಮರ್ಪಕವಾಗಿ ನಡೆಯುತ್ತಲೇ ಇದೆ. ನೀರಾವರಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಹಾಗೂ ಮೇಲ್ಭಾಗದ ರೈತರು ಹೆಚ್ಚು ನೀರು ಪಡೆಯುತ್ತಿರುವುದೇ ಕಾರಣಎಂದು ಮಾನ್ವಿ ಶಾಸಕ ಹಂಪಯ್ಯ ನಾಯಕ ಒತ್ತಾಯಿಸಿದರು.<br /> <br /> ಸದ್ಯ ನೀರು ನಿರ್ವಹಣೆ ಸಮರ್ಪಕವಾಗಿ ಆಗುತ್ತಿದೆ. ರಾಯಚೂರು ನಗರಕ್ಕೆ ಇನ್ನೂ ಒಂದು ತಿಂಗಳು ನೀರು ಪೂರೈಸಲು ಬೇಕಾದ ನೀರು ಸಂಗ್ರಹಿಸಲಾಗಿದೆ. ಕಾಲುವೆ ಕೊನೆ ಭಾಗದ ರೈತರಿಗೆ ನೀರು ಹರಿಸಲು ಸಮಸ್ಯೆ ಆಗುತ್ತಿದೆ ಎಂದು ಎಂಜಿನಿಯರ್ ಹನುಮಂತರಾಯ ವಿವರಣೆ ನೀಡಿದರು.<br /> <br /> ಇದನ್ನು ಆಕ್ಷೇಪಿಸಿದ ಶಾಸಕ ಸಯ್ಯದ್ ಯಾಸಿನ್, ಕಾಲುವೆಯಿಂದ ರಾಯಚೂರಿಗೆ ನೀರು ಪೂರೈಸಲು ಹಾಗೂ ಕೊನೆ ಭಾಗದ ರೈತರಿಗೆ ತೊಂದರೆ ಆಗುತ್ತದೆ ಎಂಬ ಮಾತು ಸರಿಯಲ್ಲ. ಮೇಲ್ಭಾಗದಿಂದಲೇ ನೀರು ಹರಿಸುವಲ್ಲಿ ಅನ್ಯಾಯವಾಗುತ್ತಿದೆ. ರಾಜಕೀಯ ಹುನ್ನಾರವೂ ಇದರಲ್ಲಿದೆ. ನಿಮ್ಮದೇ ಲೋಪ ಎಂದು ತರಾಟೆಗೆ ತೆಗೆದುಕೊಂಡರು.<br /> <br /> ಈ ಸಮಸ್ಯೆ ಸರಿಪಡಿಸಬೇಕಾದರೆ ತುಂಗಭದ್ರಾ ಕಾಲುವೆ `0~ ಮೈಲ್ನಿಂದಲೇ ಆರಂಭಿಸಬೇಕು ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ ಬಸವನಗೌಡ ಬ್ಯಾಗವಾಟ ಹೇಳಿದರು.<br /> <br /> ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಪರಿಹಾರ ಕಂಡುಕೊಳ್ಳಬಹುದು ಎಂದು ಶಾಸಕ ನಾಡಗೌಡ ಹೇಳಿದರು. <br /> <br /> ಶೀಘ್ರವೆ ಎರಡೂ ಜಿಲ್ಲೆ ಅಧಿಕಾರಿಗಳ ಸಭೆ ನಡೆಸಲಾಗುವುದು. ಗೇಜ್ ನಿರ್ವಹಣೆ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಲಿ ಎಂದು ಸಚಿವರು ಚರ್ಚೆಯ ಬಳಿಕ ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>