<p><strong>ಚಿಕ್ಕಬಳ್ಳಾಪುರ: </strong>ನಗರದ ಬಸಪ್ಪ ಛತ್ರದಲ್ಲಿನ ಮನೆಗಳಿಂದ ತಮ್ಮನ್ನು ತೆರವುಗೊಳಿಸಿ, ಸಮರ್ಪಕ ವಸತಿ ಸೌಕರ್ಯ ಕಲ್ಪಿಸದೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿ ಅಲ್ಲಿನ ನಿವಾಸಿಗಳು ನಗರಸಭೆ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.<br /> <br /> ನಗರದ ಪ್ರವಾಸಿ ಮಂದಿರದಿಂದ ನಗರಸಭೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, `ಬಸಪ್ಪ ಛತ್ರದಲ್ಲಿನ ಮನೆಗಳಿಂದ ತೆರವುಗೊಳಿಸಿ ವರ್ಷವಾದರೂ ಸಮರ್ಪಕ ಪುನರ್ವಸತಿ ಕಲ್ಪಿಸಲಾಗಿಲ್ಲ. ಕೆಲವರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಿದರೂ ಯಾವುದೇ ಸೌಕರ್ಯ ಪೂರೈಸಲಾಗಿಲ್ಲ~ ಎಂದು ಆರೋಪಿಸಿದರು.<br /> <br /> ಪ್ರತಿಭಟನೆ ನೇತೃತ್ವ ವಹಿಸಿದ್ದ ಸಿಪಿಎಂ ಮುಖಂಡ ಲಕ್ಷ್ಮಯ್ಯ ಮಾತನಾಡಿ, `ಹೈಟೆಕ್ ಆಸ್ಪತ್ರೆ, ಇತರ ಕಟ್ಟಡಗಳನ್ನು ನಿರ್ಮಿಸುವ ಉದ್ದೇಶದಿಂದ ಬಸಪ್ಪ ಛತ್ರದ ಬಡಾವಣೆಯಲ್ಲಿ ವಾಸವಿದ್ದ 40ಕ್ಕೂ ಹೆಚ್ಚು ಕುಟುಂಬವನ್ನು ತೆರವುಗೊಳಿಸಲಾಯಿತು.<br /> <br /> ಶೀಘ್ರವೇ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದು ಜಿಲ್ಲಾಡಳಿತ ನೀಡಿತ್ತು. ನಗರ ಹೊರವಲಯದ ಕಂದವಾರದ ಬಳಿ ಟೆಂಟ್-ಶೀಟುಗಳ ಮನೆಗಳಲ್ಲಿ ತಾತ್ಕಾಲಿಕವಾಗಿ ವಸತಿ ಕಲ್ಪಿಸಲಾಯಿತು. ಆದರೆ ಈವರೆಗೆ ಮೂಲಸೌಕರ್ಯ ಕಲ್ಪಿಸಿಲ್ಲ~ ಎಂದು ದೂರಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ನಗರದ ಬಸಪ್ಪ ಛತ್ರದಲ್ಲಿನ ಮನೆಗಳಿಂದ ತಮ್ಮನ್ನು ತೆರವುಗೊಳಿಸಿ, ಸಮರ್ಪಕ ವಸತಿ ಸೌಕರ್ಯ ಕಲ್ಪಿಸದೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿ ಅಲ್ಲಿನ ನಿವಾಸಿಗಳು ನಗರಸಭೆ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.<br /> <br /> ನಗರದ ಪ್ರವಾಸಿ ಮಂದಿರದಿಂದ ನಗರಸಭೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, `ಬಸಪ್ಪ ಛತ್ರದಲ್ಲಿನ ಮನೆಗಳಿಂದ ತೆರವುಗೊಳಿಸಿ ವರ್ಷವಾದರೂ ಸಮರ್ಪಕ ಪುನರ್ವಸತಿ ಕಲ್ಪಿಸಲಾಗಿಲ್ಲ. ಕೆಲವರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಿದರೂ ಯಾವುದೇ ಸೌಕರ್ಯ ಪೂರೈಸಲಾಗಿಲ್ಲ~ ಎಂದು ಆರೋಪಿಸಿದರು.<br /> <br /> ಪ್ರತಿಭಟನೆ ನೇತೃತ್ವ ವಹಿಸಿದ್ದ ಸಿಪಿಎಂ ಮುಖಂಡ ಲಕ್ಷ್ಮಯ್ಯ ಮಾತನಾಡಿ, `ಹೈಟೆಕ್ ಆಸ್ಪತ್ರೆ, ಇತರ ಕಟ್ಟಡಗಳನ್ನು ನಿರ್ಮಿಸುವ ಉದ್ದೇಶದಿಂದ ಬಸಪ್ಪ ಛತ್ರದ ಬಡಾವಣೆಯಲ್ಲಿ ವಾಸವಿದ್ದ 40ಕ್ಕೂ ಹೆಚ್ಚು ಕುಟುಂಬವನ್ನು ತೆರವುಗೊಳಿಸಲಾಯಿತು.<br /> <br /> ಶೀಘ್ರವೇ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದು ಜಿಲ್ಲಾಡಳಿತ ನೀಡಿತ್ತು. ನಗರ ಹೊರವಲಯದ ಕಂದವಾರದ ಬಳಿ ಟೆಂಟ್-ಶೀಟುಗಳ ಮನೆಗಳಲ್ಲಿ ತಾತ್ಕಾಲಿಕವಾಗಿ ವಸತಿ ಕಲ್ಪಿಸಲಾಯಿತು. ಆದರೆ ಈವರೆಗೆ ಮೂಲಸೌಕರ್ಯ ಕಲ್ಪಿಸಿಲ್ಲ~ ಎಂದು ದೂರಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>