<p><strong>ಮೊಳಕಾಲ್ಮುರು: </strong>ತಾಲ್ಲೂಕಿನ ಬಿ.ಜಿ. ಕೆರೆ ಬೆಸ್ಕಾಂ ಕಚೇರಿ ಎದುರು ಮಂಗಳವಾರ ಸೂರಮ್ಮನಹಳ್ಳಿ ಗ್ರಾಮಸ್ಥರು ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಗ್ರಾಮಕ್ಕೆ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೀವ್ರ ಅಡಚಣೆಯಾಗಿದ್ದು, ಕುಡಿಯುವ ನೀರಿಗಾಗಿ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಶಾಲಾ ಮಕ್ಕಳು ಬಿಸಿಯೂಟ ನಂತರ ಶಾಲೆ ಮುಂಭಾಗದಲ್ಲಿ ಇರುವ ಜಾನುವಾರುಗಳಿಗೆ ಕುಡಿಯಲು ನಿರ್ಮಿಸಿರುವ ತೊಟ್ಟಿಯಲ್ಲಿ ನೀರು ಕುಡಿಯುವಂತಹ ಸ್ಥಿತಿ ಬಂದಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> ಈ ಬಗ್ಗೆ ಸಂಬಂದಪಟ್ಟ ಬೆಸ್ಕಾಂ ವಲಯ ಅಧಿಕಾರಿಗೆ ತಿಳಿಸಿದರೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. <br /> ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.<br /> <br /> ಎಸ್.ಒ. ಪಾಲಯ್ಯ, ಎಸ್.ವಿ. ರಾಜಶೇಖರಪ್ಪ, ಡಿ. ಬೋರಯ್ಯ, ಎ.ಕೆ. ತಿಪ್ಪೇಸ್ವಾಮಿ, ಎಸ್. ಬಸಯ್ಯ, ಮಲ್ಲಿಕಾರ್ಜುನ, ಜಗನ್ನಾಥ್, ಬೋರಯ್ಯ, ಮಂಜುನಾಥ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು: </strong>ತಾಲ್ಲೂಕಿನ ಬಿ.ಜಿ. ಕೆರೆ ಬೆಸ್ಕಾಂ ಕಚೇರಿ ಎದುರು ಮಂಗಳವಾರ ಸೂರಮ್ಮನಹಳ್ಳಿ ಗ್ರಾಮಸ್ಥರು ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಗ್ರಾಮಕ್ಕೆ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೀವ್ರ ಅಡಚಣೆಯಾಗಿದ್ದು, ಕುಡಿಯುವ ನೀರಿಗಾಗಿ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.<br /> <br /> ಶಾಲಾ ಮಕ್ಕಳು ಬಿಸಿಯೂಟ ನಂತರ ಶಾಲೆ ಮುಂಭಾಗದಲ್ಲಿ ಇರುವ ಜಾನುವಾರುಗಳಿಗೆ ಕುಡಿಯಲು ನಿರ್ಮಿಸಿರುವ ತೊಟ್ಟಿಯಲ್ಲಿ ನೀರು ಕುಡಿಯುವಂತಹ ಸ್ಥಿತಿ ಬಂದಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> ಈ ಬಗ್ಗೆ ಸಂಬಂದಪಟ್ಟ ಬೆಸ್ಕಾಂ ವಲಯ ಅಧಿಕಾರಿಗೆ ತಿಳಿಸಿದರೆ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. <br /> ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.<br /> <br /> ಎಸ್.ಒ. ಪಾಲಯ್ಯ, ಎಸ್.ವಿ. ರಾಜಶೇಖರಪ್ಪ, ಡಿ. ಬೋರಯ್ಯ, ಎ.ಕೆ. ತಿಪ್ಪೇಸ್ವಾಮಿ, ಎಸ್. ಬಸಯ್ಯ, ಮಲ್ಲಿಕಾರ್ಜುನ, ಜಗನ್ನಾಥ್, ಬೋರಯ್ಯ, ಮಂಜುನಾಥ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>