<p>ಪಾಂಡವಪುರ: ಮಲೇರಿಯಾದ ತವರೂರಾಗಿದ್ದ ತಾಲ್ಲೂಕಿನ ಸಣಬದ ಕೊಪ್ಪಲು ಗ್ರಾಮದಲ್ಲಿ ಮತ್ತೆ ಕಾಯಿಲೆಗಳು ಮರುಕಳಿಸುವ ಆತಂಕವನ್ನು ಗ್ರಾಮಸ್ಥರು ಎದುರಿಸುತ್ತಿದ್ದಾರೆ.<br /> <br /> ಗ್ರಾಮದಲ್ಲಿ 200ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಜನಸಂಖ್ಯೆ ಸಾವಿರ ದಾಟಿದೆ. ಇಲ್ಲಿ ಮೂಲ ಸೌಕರ್ಯವಿಲ್ಲ. ಹೀಗಾಗಿ, ಗ್ರಾಮವು ಸೊಳ್ಳೆಗಳ ವಾಸಸ್ಥಾನವಾಗಿ ಪರಿವರ್ತನೆಯಾಗಿದೆ.<br /> <br /> ಗ್ರಾಮವು, ಪ್ರಸಿದ್ದ ತೊಣ್ಣೂರು ಕೆರೆಯ ಹಿನ್ನೀರಿನ ದಡದಲ್ಲಿದೆ. ಜನಪ್ರತಿನಿಧಿಗಳು ಮತ್ತು ಆಧಿಕಾರಿಗಳು ಗ್ರಾಮದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ತಾಳಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ. <br /> <br /> ಗ್ರಾಮದ ಬಹುತೇಕ ಚರಂಡಿಗಳು ದುರಸ್ತಿ ಕಾಣಬೇಕಿದೆ. ಬೀದಿಗಳಲ್ಲಿ ಗುಂಡಿಬಿದ್ದ ರಸ್ತೆಗಳ ಡಾಂಬರೀಕರಣ ಆಗಬೇಕು. ಶಾಲೆಗೆ ಕಂಪೌಂಡ್ ಇಲ್ಲದಿರುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಕಂಪೌಂಡ್ ನಿರ್ಮಿಸಬೇಕು. ದೇವಸ್ಥಾನದ ಹಿಂಭಾಗದ ಸ್ಥಳವನ್ನು ಸಮತಟ್ಟು ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಾರೆ.<br /> <br /> 2011-12ನೇ ಸಾಲಿನಲ್ಲಿ ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾಮದ ಅರಳಿಮರದಿಂದ ಕೆರೆಯವರೆಗೆ ರಸ್ತೆಯ ಅಭಿವೃದ್ಧಿ ಹಾಗೂ ಕೊಳಚೆ ನೀರು ಹರಿದು ಹೋಗಲು ಬಸಿಗಾಲುವೆಯನ್ನು ರೂ.90 ಸಾವಿರ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ರಸ್ತೆ ಹಾಳಾಗಿದ್ದು, ಬಸಿಗಾಲುವೆ ಮುಚ್ಚಿ ಹೋಗಿದೆ. <br /> <br /> ಕುಡಿಯುವ ನೀರಿನ ಪೂರೈಕೆ ಪರವಾಗಿಲ್ಲ. ವಿದ್ಯುತ್ ಸಮಸ್ಯೆ ಇರದಿದ್ದರೆ ನೀರು ಸಿಗುತ್ತದೆ. ಅದನ್ನು ಬಿಟ್ಟರೆ ಉಳಿದ ಮೂಲ ಸೌಕರ್ಯಗಳಿಲ್ಲ ಎಂದು ದೂರುತ್ತಾರೆ ಅವರು.<br /> <br /> ಗ್ರಾಮಕ್ಕೆ ಬಸ್ ಸಂಚಾರದ ವ್ಯವಸ್ಥೆ ಇಲ್ಲ. ಹೀಗಾಗಿ ಅವರು ಒಂದು ಕಿ.ಮೀ. ನಷ್ಟು ನಡೆದುಕೊಂಡೇ ಹೋಗಬೇಕಾದ ಸ್ಥಿತಿ ಇದೆ. ಗ್ರಾಮದ ಸಮಗ್ರ ಅಭಿವೃದ್ದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಅಧ್ಯಕ್ಷ ಸೀತಾರಾಮ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾಂಡವಪುರ: ಮಲೇರಿಯಾದ ತವರೂರಾಗಿದ್ದ ತಾಲ್ಲೂಕಿನ ಸಣಬದ ಕೊಪ್ಪಲು ಗ್ರಾಮದಲ್ಲಿ ಮತ್ತೆ ಕಾಯಿಲೆಗಳು ಮರುಕಳಿಸುವ ಆತಂಕವನ್ನು ಗ್ರಾಮಸ್ಥರು ಎದುರಿಸುತ್ತಿದ್ದಾರೆ.<br /> <br /> ಗ್ರಾಮದಲ್ಲಿ 200ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಜನಸಂಖ್ಯೆ ಸಾವಿರ ದಾಟಿದೆ. ಇಲ್ಲಿ ಮೂಲ ಸೌಕರ್ಯವಿಲ್ಲ. ಹೀಗಾಗಿ, ಗ್ರಾಮವು ಸೊಳ್ಳೆಗಳ ವಾಸಸ್ಥಾನವಾಗಿ ಪರಿವರ್ತನೆಯಾಗಿದೆ.<br /> <br /> ಗ್ರಾಮವು, ಪ್ರಸಿದ್ದ ತೊಣ್ಣೂರು ಕೆರೆಯ ಹಿನ್ನೀರಿನ ದಡದಲ್ಲಿದೆ. ಜನಪ್ರತಿನಿಧಿಗಳು ಮತ್ತು ಆಧಿಕಾರಿಗಳು ಗ್ರಾಮದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ತಾಳಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ. <br /> <br /> ಗ್ರಾಮದ ಬಹುತೇಕ ಚರಂಡಿಗಳು ದುರಸ್ತಿ ಕಾಣಬೇಕಿದೆ. ಬೀದಿಗಳಲ್ಲಿ ಗುಂಡಿಬಿದ್ದ ರಸ್ತೆಗಳ ಡಾಂಬರೀಕರಣ ಆಗಬೇಕು. ಶಾಲೆಗೆ ಕಂಪೌಂಡ್ ಇಲ್ಲದಿರುವುದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಕಂಪೌಂಡ್ ನಿರ್ಮಿಸಬೇಕು. ದೇವಸ್ಥಾನದ ಹಿಂಭಾಗದ ಸ್ಥಳವನ್ನು ಸಮತಟ್ಟು ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಾರೆ.<br /> <br /> 2011-12ನೇ ಸಾಲಿನಲ್ಲಿ ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾಮದ ಅರಳಿಮರದಿಂದ ಕೆರೆಯವರೆಗೆ ರಸ್ತೆಯ ಅಭಿವೃದ್ಧಿ ಹಾಗೂ ಕೊಳಚೆ ನೀರು ಹರಿದು ಹೋಗಲು ಬಸಿಗಾಲುವೆಯನ್ನು ರೂ.90 ಸಾವಿರ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ರಸ್ತೆ ಹಾಳಾಗಿದ್ದು, ಬಸಿಗಾಲುವೆ ಮುಚ್ಚಿ ಹೋಗಿದೆ. <br /> <br /> ಕುಡಿಯುವ ನೀರಿನ ಪೂರೈಕೆ ಪರವಾಗಿಲ್ಲ. ವಿದ್ಯುತ್ ಸಮಸ್ಯೆ ಇರದಿದ್ದರೆ ನೀರು ಸಿಗುತ್ತದೆ. ಅದನ್ನು ಬಿಟ್ಟರೆ ಉಳಿದ ಮೂಲ ಸೌಕರ್ಯಗಳಿಲ್ಲ ಎಂದು ದೂರುತ್ತಾರೆ ಅವರು.<br /> <br /> ಗ್ರಾಮಕ್ಕೆ ಬಸ್ ಸಂಚಾರದ ವ್ಯವಸ್ಥೆ ಇಲ್ಲ. ಹೀಗಾಗಿ ಅವರು ಒಂದು ಕಿ.ಮೀ. ನಷ್ಟು ನಡೆದುಕೊಂಡೇ ಹೋಗಬೇಕಾದ ಸ್ಥಿತಿ ಇದೆ. ಗ್ರಾಮದ ಸಮಗ್ರ ಅಭಿವೃದ್ದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಾರೆ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಅಧ್ಯಕ್ಷ ಸೀತಾರಾಮ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>