<p><strong>ಕೊಳ್ಳೇಗಾಲ:</strong> ಮಣ್ಣಿನಿಂದ ಮುಚ್ಚಿಹೋದ ಚರಂಡಿ, ಹಳ್ಳಕೊಳ್ಳಗಳಿಂದ ಕೂಡಿದ ರಸ್ತೆ, ಹೂಳು ಮತ್ತು ತ್ಯಾಜ್ಯದಿಂದ ತುಂಬಿರುವ ಕೆರೆ...<br /> <br /> ಇದು ಕೊಳ್ಳೇಗಾಲ ತಾಲ್ಲೂಕು ಬೆಂಡರಹಳ್ಳಿಯಲ್ಲಿ ಕಂಡು ಬರುವ ಸಮಸ್ಯೆಗಳು.<br /> <br /> ಈ ಗ್ರಾಮ ನಗರಸಭೆ ವ್ಯಾಪ್ತಿಗೆ ಸೇರಿದ್ದರೂ, ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವಲ್ಲಿ ವಿಫಲವಾಗಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನ ಸೆಳೆದರೂ ಯಾವುದೇ ಪ್ರಯೋಜನ ದೊರೆತಿಲ್ಲ ಎಂಬುದು ಗ್ರಾಮದ ನಾಗರಾಜು ಅವರ ಆರೋಪ.<br /> <br /> ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಗ್ರಾಮದ ಮುಖ್ಯರಸ್ತೆಯಲ್ಲಿ ಗುಂಡಿಬಿದ್ದಿವೆ. ಕೆಲವು ಚರಂಡಿಗಳು ತ್ಯಾಜ್ಯ ಮತ್ತು ಮಣ್ಣಿನಿಂದ ತುಂಬಿ ಹೋಗಿರುವುದರಿಂದ ಕೊಳಚೆ ನೀರು ರಸ್ತೆ ಮಧ್ಯಭಾಗದಲ್ಲೇ ಹರಿಯುತ್ತದೆ. <br /> <br /> ಸೊಳ್ಳೆಗಳು ಹೆಚ್ಚಿರುವುದರಿಂದ ವಾತಾವರಣ ಅನೈರ್ಮಲ್ಯಗೊಂಡಿದೆ. ಗ್ರಾಮಸ್ಥರು ಕೆಲವೊಮ್ಮೆ ಅನಾರೋಗ್ಯಕ್ಕೆ ತುತ್ತಾಗಿರುವ ನಿದರ್ಶನಗಳು ಇವೆ.<br /> <br /> ಅಂಗನವಾಡಿ ಕೇಂದ್ರ ಹಾಗೂ ಕುಡಿಯುವ ನೀರಿನ ಟ್ಯಾಂಕ್ ಸುತ್ತ ಗಿಡಗಂಟಿ ಬೆಳೆದು ವಿಷಜಂತುಗಳ ವಾಸಸ್ಥಾನವಾಗಿ ಪರಿಣಮಿಸಿವೆ. ಮಕ್ಕಳು ಆತಂಕದಲ್ಲೇ ಪಾಠ ಕೇಳುವ ದುಸ್ಥಿತಿ ಎದುರಾಗಿದೆ. ಗ್ರಾಮ ಪಂಚಾಯಿತಿಯವರು ಕೂಡಲೇ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಸಂಘಗಳ ಸದಸ್ಯರ ಒತ್ತಾಯಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ಮಣ್ಣಿನಿಂದ ಮುಚ್ಚಿಹೋದ ಚರಂಡಿ, ಹಳ್ಳಕೊಳ್ಳಗಳಿಂದ ಕೂಡಿದ ರಸ್ತೆ, ಹೂಳು ಮತ್ತು ತ್ಯಾಜ್ಯದಿಂದ ತುಂಬಿರುವ ಕೆರೆ...<br /> <br /> ಇದು ಕೊಳ್ಳೇಗಾಲ ತಾಲ್ಲೂಕು ಬೆಂಡರಹಳ್ಳಿಯಲ್ಲಿ ಕಂಡು ಬರುವ ಸಮಸ್ಯೆಗಳು.<br /> <br /> ಈ ಗ್ರಾಮ ನಗರಸಭೆ ವ್ಯಾಪ್ತಿಗೆ ಸೇರಿದ್ದರೂ, ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವಲ್ಲಿ ವಿಫಲವಾಗಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನ ಸೆಳೆದರೂ ಯಾವುದೇ ಪ್ರಯೋಜನ ದೊರೆತಿಲ್ಲ ಎಂಬುದು ಗ್ರಾಮದ ನಾಗರಾಜು ಅವರ ಆರೋಪ.<br /> <br /> ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಗ್ರಾಮದ ಮುಖ್ಯರಸ್ತೆಯಲ್ಲಿ ಗುಂಡಿಬಿದ್ದಿವೆ. ಕೆಲವು ಚರಂಡಿಗಳು ತ್ಯಾಜ್ಯ ಮತ್ತು ಮಣ್ಣಿನಿಂದ ತುಂಬಿ ಹೋಗಿರುವುದರಿಂದ ಕೊಳಚೆ ನೀರು ರಸ್ತೆ ಮಧ್ಯಭಾಗದಲ್ಲೇ ಹರಿಯುತ್ತದೆ. <br /> <br /> ಸೊಳ್ಳೆಗಳು ಹೆಚ್ಚಿರುವುದರಿಂದ ವಾತಾವರಣ ಅನೈರ್ಮಲ್ಯಗೊಂಡಿದೆ. ಗ್ರಾಮಸ್ಥರು ಕೆಲವೊಮ್ಮೆ ಅನಾರೋಗ್ಯಕ್ಕೆ ತುತ್ತಾಗಿರುವ ನಿದರ್ಶನಗಳು ಇವೆ.<br /> <br /> ಅಂಗನವಾಡಿ ಕೇಂದ್ರ ಹಾಗೂ ಕುಡಿಯುವ ನೀರಿನ ಟ್ಯಾಂಕ್ ಸುತ್ತ ಗಿಡಗಂಟಿ ಬೆಳೆದು ವಿಷಜಂತುಗಳ ವಾಸಸ್ಥಾನವಾಗಿ ಪರಿಣಮಿಸಿವೆ. ಮಕ್ಕಳು ಆತಂಕದಲ್ಲೇ ಪಾಠ ಕೇಳುವ ದುಸ್ಥಿತಿ ಎದುರಾಗಿದೆ. ಗ್ರಾಮ ಪಂಚಾಯಿತಿಯವರು ಕೂಡಲೇ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಸಂಘಗಳ ಸದಸ್ಯರ ಒತ್ತಾಯಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>