<p><strong>ಚಿಕ್ಕಮಗಳೂರು:</strong> ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಂಬ ಭೇದ, ಭಾವ ಬಿತ್ತಿ ಸಮಾಜವನ್ನ ಒಡೆಯುವುದು ಬಿಜೆಪಿ ಪ್ರವೃತ್ತಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್ ಆರೋಪಿಸಿದರು.<br /> <br /> ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಧವಾರ ನಗರದಲ್ಲಿ ಆರಂಭಿಸಿದ ಕೆಪಿಸಿಸಿ ಚುನಾವಣಾ ಪ್ರಚಾರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ದತ್ತ ಪೀಠದಂತಹ ಭಾವೈಕ್ಯ ಕೇಂದ್ರವನ್ನು ವಿವಾದಾತ್ಮಕ ಕೇಂದ್ರವನ್ನಾಗಿಸಿ, ಹಿಂದೂ ಮುಸ್ಲಿಮರ ಭಾವನೆ ಕೆದಕಿದ ಮತ್ತು ಅದರಿಂದ ಶಾಸಕರಾದ ಕೀರ್ತಿ ಸುನೀಲ್ ಕುಮಾರ್ಗೆ ಸಲ್ಲುತ್ತದೆ ಎಂದು ಟೀಕಿಸಿದರು.<br /> <br /> ಜೆಡಿಎಸ್ ರಾಜ್ಯದಲ್ಲಿ ರಾಜಕೀಯ ವ್ಯಾಪಾರ ಪ್ರಾರಂಭಿಸಿದೆ. ಶಾಸಕರನ್ನು ಖರೀದಿಸುವ ವ್ಯವಹಾರ ಅವರ ಅಧಿಕಾರವಧಿಯಲ್ಲೇ ಆಗಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಯಾರ ಬೆಂಬಲಕ್ಕಾಗಿ ಅಭ್ಯರ್ಥಿ ಕಣಕ್ಕಳಿಸಿದೆ ಎಂಬುದು ಜಗಜ್ಜಾಹೀರಾಗಿದೆ ಎಂದರು.<br /> <br /> ಮಾಜಿ ಸಚಿವ ಸಗೀರ್ ಅಹಮದ್ ಮಾತನಾಡಿ, ಧರ್ಮದ ಹೆಸರಿನಿಂದ ಜಯ ಗಳಿಸಿದ ಬಿಜೆಪಿ ಧರ್ಮ ದುರ್ಬಳಕೆ ಮಾಡಿಕೊಂಡು ರಾಜಕೀಯಕ್ಕೆ ಬಳಸಿಕೊಂಡಿದೆ ಎಂದು ಆರೋಪಿಸಿದರು.<br /> <br /> ಮಾಜಿ ಶಾಸಕ ಕೆ.ಬಿ.ಮಲ್ಲಿಕಾರ್ಜುನ ಮಾತನಾಡಿ, ಎಲ್ಲರೂ ನಾಯಕರಂತೆ ವರ್ತಿಸಬಾರದು. ಕಾರ್ಯಕರ್ತರಾಗಿ ಕೆಲಸ ಮಾಡಿ, ಚುನಾವಣೆ ಎದುರಿಸಿದಾಗ ಮಾತ್ರ ಜಯ ಸಾಧ್ಯ ಎಂದರು.<br /> <br /> ಪಕ್ಷದ ಜಿಲ್ಲಾ ಘಟಕ ಅಧ್ಯಕ್ಷ ಎಂ.ಎಲ್.ಮೂರ್ತಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಆನಂದ್ , ಮೋಹನ್, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಯುವ ಕಾಂಗ್ರೆಸ್ ಆಧ್ಯಕ್ಷ ನಿಖಿಲ್ಗೌಡ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಂಬ ಭೇದ, ಭಾವ ಬಿತ್ತಿ ಸಮಾಜವನ್ನ ಒಡೆಯುವುದು ಬಿಜೆಪಿ ಪ್ರವೃತ್ತಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್ ಆರೋಪಿಸಿದರು.<br /> <br /> ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಧವಾರ ನಗರದಲ್ಲಿ ಆರಂಭಿಸಿದ ಕೆಪಿಸಿಸಿ ಚುನಾವಣಾ ಪ್ರಚಾರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ದತ್ತ ಪೀಠದಂತಹ ಭಾವೈಕ್ಯ ಕೇಂದ್ರವನ್ನು ವಿವಾದಾತ್ಮಕ ಕೇಂದ್ರವನ್ನಾಗಿಸಿ, ಹಿಂದೂ ಮುಸ್ಲಿಮರ ಭಾವನೆ ಕೆದಕಿದ ಮತ್ತು ಅದರಿಂದ ಶಾಸಕರಾದ ಕೀರ್ತಿ ಸುನೀಲ್ ಕುಮಾರ್ಗೆ ಸಲ್ಲುತ್ತದೆ ಎಂದು ಟೀಕಿಸಿದರು.<br /> <br /> ಜೆಡಿಎಸ್ ರಾಜ್ಯದಲ್ಲಿ ರಾಜಕೀಯ ವ್ಯಾಪಾರ ಪ್ರಾರಂಭಿಸಿದೆ. ಶಾಸಕರನ್ನು ಖರೀದಿಸುವ ವ್ಯವಹಾರ ಅವರ ಅಧಿಕಾರವಧಿಯಲ್ಲೇ ಆಗಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಯಾರ ಬೆಂಬಲಕ್ಕಾಗಿ ಅಭ್ಯರ್ಥಿ ಕಣಕ್ಕಳಿಸಿದೆ ಎಂಬುದು ಜಗಜ್ಜಾಹೀರಾಗಿದೆ ಎಂದರು.<br /> <br /> ಮಾಜಿ ಸಚಿವ ಸಗೀರ್ ಅಹಮದ್ ಮಾತನಾಡಿ, ಧರ್ಮದ ಹೆಸರಿನಿಂದ ಜಯ ಗಳಿಸಿದ ಬಿಜೆಪಿ ಧರ್ಮ ದುರ್ಬಳಕೆ ಮಾಡಿಕೊಂಡು ರಾಜಕೀಯಕ್ಕೆ ಬಳಸಿಕೊಂಡಿದೆ ಎಂದು ಆರೋಪಿಸಿದರು.<br /> <br /> ಮಾಜಿ ಶಾಸಕ ಕೆ.ಬಿ.ಮಲ್ಲಿಕಾರ್ಜುನ ಮಾತನಾಡಿ, ಎಲ್ಲರೂ ನಾಯಕರಂತೆ ವರ್ತಿಸಬಾರದು. ಕಾರ್ಯಕರ್ತರಾಗಿ ಕೆಲಸ ಮಾಡಿ, ಚುನಾವಣೆ ಎದುರಿಸಿದಾಗ ಮಾತ್ರ ಜಯ ಸಾಧ್ಯ ಎಂದರು.<br /> <br /> ಪಕ್ಷದ ಜಿಲ್ಲಾ ಘಟಕ ಅಧ್ಯಕ್ಷ ಎಂ.ಎಲ್.ಮೂರ್ತಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಆನಂದ್ , ಮೋಹನ್, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಯುವ ಕಾಂಗ್ರೆಸ್ ಆಧ್ಯಕ್ಷ ನಿಖಿಲ್ಗೌಡ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>