<p><strong>ಗೋಕಾಕ:</strong> ಸಂವಿಧಾನದ ನಾಲ್ಕನೇ ಅಂಗದಂತೆ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾರಂಗ ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.<br /> <br /> ಭಾನುವಾರ ಇಲ್ಲಿಯ ತಾ.ಪಂ. ಸಭಾ ಭವನದಲ್ಲಿ ಜರುಗಿದ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾ ಶಾಖೆಯ ಕಾರ್ಯಾಲಯ ಉದ್ಘಾಟನೆಯನ್ನು ನೆರವೇರಿಸಿ, ಪತ್ರಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> `ಉಪವಾಸ, ಧರಣಿ, ಸತ್ಯಾಗ್ರಹ ಹಾಗೂ ಪ್ರತಿಭಟನೆಗಳ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಸಮಾಜದ ಅಭ್ಯುದಯಕ್ಕೆ ಶ್ರಮಿಸುತ್ತಿರುವ ಇಂದಿನ ಮಾಧ್ಯಮಗಳಿಂದ ಭ್ರಷ್ಟ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯ~ ಎಂದು ಅವರು ಹೇಳಿದರು.<br /> <br /> ಹೊಗಳಿಕೆ ಹಾಗೂ ತೆಗಳಿಕೆಗೆ ಹೆಚ್ಚಿನ ಮಹತ್ವದ ನೀಡದೇ ತಮ್ಮ ಕಾರ್ಯಕ್ಷೇತ್ರದಲ್ಲಿ ಪರಿಶುದ್ಧತೆಯೊಂದಿಗೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು. ಸಾಮಾಜಿಕ ವ್ಯವಸ್ಥೆಯ ಬದಲಾವಣೆಗೆ ಪೂರಕವಾಗುವ ವಿಷಯಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆಯನ್ನು ಶಾಸಕರು ನೀಡಿದರು.<br /> <br /> ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ಗುರುಶಾಂತೇಶ್ವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಪತ್ರಕರ್ತರು ಆತ್ಮವಿಮರ್ಶೆ ಮಾಡಿಕೊಂಡು ಸಮಾಜದಲ್ಲಿ ಬದಲಾವಣೆಗೆ ಶ್ರಮಿಸಬೇಕು ಎಂದರು. <br /> <br /> ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ, ಭ್ರಷ್ಟ ವ್ಯವಸ್ಥೆಯನ್ನು ಹೋಗಲಾಡಿಸಲು ಮುಂದಾಗಬೇಕು. ಧನಾತ್ಮಕ ವಿಚಾರಗಳನ್ನು ಅಳವಡಿಸಿಕೊಂಡು ನೇರ ಹಾಗೂ ನಿಷ್ಠುರ ವರದಿಗಳಿಗೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿದರು.<br /> <br /> ಜಿ.ಪಂ. ಮಾಜಿ ಉಪಾಧ್ಯಕ್ಷ ಟಿ.ಆರ್.ಕಾಗಲ್, ಮಾಜಿ ಸದಸ್ಯ ಡಾ,ರಾಜೇಂದ್ರ ಸಣ್ಣಕ್ಕಿ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಟಿಪ್ಪುವರ್ಧನ ಮಾತನಾಡಿ. ಪತ್ರಕರ್ತರ ಸೇವೆಯನ್ನು ಸ್ಮರಿಸಿಕೊಂಡರು.<br /> ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಭಜಂತ್ರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. <br /> <br /> ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಎಸ್.ಬಿ. ಧಾರವಾಡಕರ, ಚಂದ್ರಶೇಖರ ಕೊಣ್ಣೂರ, ಸದಾನಂದ ಭಾಮನೆ, ಲಕ್ಷ್ಮಣ ಖಡಕಭಾಂವಿ, ಚೆನ್ನಪ್ಪ ಮಾದರ, ಎಂ.ಎಚ್.ಕಾಳೆ ಮೊದಲಾದವರನ್ನು ಸನ್ಮಾನಿಸಲಾಯಿತು.<br /> <br /> ವೇದಿಕೆಯಲ್ಲಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಹತ್ತಿ, ಕರವೇ ಸ್ಥಳೀಯ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ, ಮೇಡಳ್ಳಿ ನಾಗರಾಜ, ನಾಮದೇವ ಜುಟ್ಟದವರ, ಶ್ರೀಕಾಂತ ತಳವಾರ, ದುರ್ಗಾ ಯರಝರ್ವಿ, ಬಿ.ಎಲ್.ದೇವಮ್ಮ. ಜಲಾಲುದ್ದೀನ್, ಕಿರಣ ಡಮಾಮಗರ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.<br /> <br /> ಕಲಾವಿದ ಬಸವರಾಜ ಹಿರೇಮಠ ಪ್ರಾರ್ಥಿಸಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವ ಮಠಪತಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶಗೌಡ ಪಾಟೀಲ ನಿರೂಪಿಸಿದರು. ಸುಭಾಷ ಗಡ್ಕರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ಸಂವಿಧಾನದ ನಾಲ್ಕನೇ ಅಂಗದಂತೆ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾರಂಗ ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.<br /> <br /> ಭಾನುವಾರ ಇಲ್ಲಿಯ ತಾ.ಪಂ. ಸಭಾ ಭವನದಲ್ಲಿ ಜರುಗಿದ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾ ಶಾಖೆಯ ಕಾರ್ಯಾಲಯ ಉದ್ಘಾಟನೆಯನ್ನು ನೆರವೇರಿಸಿ, ಪತ್ರಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> `ಉಪವಾಸ, ಧರಣಿ, ಸತ್ಯಾಗ್ರಹ ಹಾಗೂ ಪ್ರತಿಭಟನೆಗಳ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಸಮಾಜದ ಅಭ್ಯುದಯಕ್ಕೆ ಶ್ರಮಿಸುತ್ತಿರುವ ಇಂದಿನ ಮಾಧ್ಯಮಗಳಿಂದ ಭ್ರಷ್ಟ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯ~ ಎಂದು ಅವರು ಹೇಳಿದರು.<br /> <br /> ಹೊಗಳಿಕೆ ಹಾಗೂ ತೆಗಳಿಕೆಗೆ ಹೆಚ್ಚಿನ ಮಹತ್ವದ ನೀಡದೇ ತಮ್ಮ ಕಾರ್ಯಕ್ಷೇತ್ರದಲ್ಲಿ ಪರಿಶುದ್ಧತೆಯೊಂದಿಗೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು. ಸಾಮಾಜಿಕ ವ್ಯವಸ್ಥೆಯ ಬದಲಾವಣೆಗೆ ಪೂರಕವಾಗುವ ವಿಷಯಗಳಿಗೆ ಹೆಚ್ಚಿನ ಮಹತ್ವ ನೀಡಬೇಕು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆಯನ್ನು ಶಾಸಕರು ನೀಡಿದರು.<br /> <br /> ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ಗುರುಶಾಂತೇಶ್ವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಪತ್ರಕರ್ತರು ಆತ್ಮವಿಮರ್ಶೆ ಮಾಡಿಕೊಂಡು ಸಮಾಜದಲ್ಲಿ ಬದಲಾವಣೆಗೆ ಶ್ರಮಿಸಬೇಕು ಎಂದರು. <br /> <br /> ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ, ಭ್ರಷ್ಟ ವ್ಯವಸ್ಥೆಯನ್ನು ಹೋಗಲಾಡಿಸಲು ಮುಂದಾಗಬೇಕು. ಧನಾತ್ಮಕ ವಿಚಾರಗಳನ್ನು ಅಳವಡಿಸಿಕೊಂಡು ನೇರ ಹಾಗೂ ನಿಷ್ಠುರ ವರದಿಗಳಿಗೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿದರು.<br /> <br /> ಜಿ.ಪಂ. ಮಾಜಿ ಉಪಾಧ್ಯಕ್ಷ ಟಿ.ಆರ್.ಕಾಗಲ್, ಮಾಜಿ ಸದಸ್ಯ ಡಾ,ರಾಜೇಂದ್ರ ಸಣ್ಣಕ್ಕಿ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಟಿಪ್ಪುವರ್ಧನ ಮಾತನಾಡಿ. ಪತ್ರಕರ್ತರ ಸೇವೆಯನ್ನು ಸ್ಮರಿಸಿಕೊಂಡರು.<br /> ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಭಜಂತ್ರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. <br /> <br /> ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಎಸ್.ಬಿ. ಧಾರವಾಡಕರ, ಚಂದ್ರಶೇಖರ ಕೊಣ್ಣೂರ, ಸದಾನಂದ ಭಾಮನೆ, ಲಕ್ಷ್ಮಣ ಖಡಕಭಾಂವಿ, ಚೆನ್ನಪ್ಪ ಮಾದರ, ಎಂ.ಎಚ್.ಕಾಳೆ ಮೊದಲಾದವರನ್ನು ಸನ್ಮಾನಿಸಲಾಯಿತು.<br /> <br /> ವೇದಿಕೆಯಲ್ಲಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಹತ್ತಿ, ಕರವೇ ಸ್ಥಳೀಯ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ, ಮೇಡಳ್ಳಿ ನಾಗರಾಜ, ನಾಮದೇವ ಜುಟ್ಟದವರ, ಶ್ರೀಕಾಂತ ತಳವಾರ, ದುರ್ಗಾ ಯರಝರ್ವಿ, ಬಿ.ಎಲ್.ದೇವಮ್ಮ. ಜಲಾಲುದ್ದೀನ್, ಕಿರಣ ಡಮಾಮಗರ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.<br /> <br /> ಕಲಾವಿದ ಬಸವರಾಜ ಹಿರೇಮಠ ಪ್ರಾರ್ಥಿಸಿದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವ ಮಠಪತಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶಗೌಡ ಪಾಟೀಲ ನಿರೂಪಿಸಿದರು. ಸುಭಾಷ ಗಡ್ಕರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>