<p><strong>ಲಂಡನ್ (ಪಿಟಿಐ):</strong> ಟೆಸ್ಟ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನ ಪಡೆದಿರುವ ನಮ್ಮ ತಂಡ ಈಗ ಏಕದಿನ ಸರಣಿಯನ್ನು 5-0ರಲ್ಲಿ ಕೈವಶ ಮಾಡಿಕೊಳ್ಳುವ ಗುರಿ ಹೊಂದಿದೆ ಎಂದು ಇಂಗ್ಲೆಂಡ್ನ ಆರಂಭಿಕ ಆಟಗಾರ ಟಿಮ್ ಬ್ರೆಸ್ನನ್ ಹೇಳಿದ್ದಾರೆ.<br /> <br /> ಟೆಸ್ಟ್ ಸರಣಿಯನ್ನು `ಕ್ಲೀನ್ ಸ್ವೀಪ್~ ಮಾಡಿರುವ ಇಂಗ್ಲೆಂಡ್ ಏಕದಿನ ಸರಣಿಯಲ್ಲಿ ಇದೇ ಫಲಿತಾಂಶವನ್ನು ಪುನರಾವರ್ತಿಸುತ್ತಿದೆ. ಪ್ರವಾಸಿ ತಂಡವನ್ನು ಇಲ್ಲಿಯು ಮಣಿಸುವ ಗುರಿ ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.<br /> <br /> ಹತ್ತನೇ ವಿಶ್ವಕಪ್ನಲ್ಲಿ ಚಾಂಪಿಯನ್ ಆಗಿರುವ ಭಾರತ ತಂಡ ಪ್ರಬಲವಾಗಿ ಗಾಯಾಳುಗಳ ಸಮಸ್ಯೆ ಎದುರಿಸುತ್ತಿದೆ. ಆದ್ದರಿಂದ ಆ ತಂಡವನ್ನು ಏಕದಿನ ಸರಣಿಯಲ್ಲಿಯೂ ಮಣಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು. <br /> <br /> ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಹರಭಜನ್ ಸಿಂಗ್ ಹಾಗೂ ಜಹೀರ್ ಖಾನ್, ಗೌತಮ್ ಗಂಭೀರ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದಾರೆ. ಆದ್ದರಿಂದ ಪ್ರವಾಸಿ ತಂಡಕ್ಕೆ ಅನುಭವಿಗಳ ಕೊರತೆಯಿದೆ ಎಂದು ಬ್ರೆಸ್ನನ್ ಅಭಿಪ್ರಾಯ ಪಟ್ಟಿದ್ದಾರೆ. `ಭಾರತ ಉತ್ತಮ ತಂಡ. ಅದರಲ್ಲಿ ಅನುಮಾನವೇ ಬೇಡ. ಆದರೆ ಇಂಗ್ಲೆಂಡ್ ನೆಲದಲ್ಲಿ ಉತ್ತಮ ಪ್ರದರ್ಶನ ನೀಡಲು ಭಾರತಕ್ಕೆ ಕಷ್ಟವಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್ (ಪಿಟಿಐ):</strong> ಟೆಸ್ಟ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನ ಪಡೆದಿರುವ ನಮ್ಮ ತಂಡ ಈಗ ಏಕದಿನ ಸರಣಿಯನ್ನು 5-0ರಲ್ಲಿ ಕೈವಶ ಮಾಡಿಕೊಳ್ಳುವ ಗುರಿ ಹೊಂದಿದೆ ಎಂದು ಇಂಗ್ಲೆಂಡ್ನ ಆರಂಭಿಕ ಆಟಗಾರ ಟಿಮ್ ಬ್ರೆಸ್ನನ್ ಹೇಳಿದ್ದಾರೆ.<br /> <br /> ಟೆಸ್ಟ್ ಸರಣಿಯನ್ನು `ಕ್ಲೀನ್ ಸ್ವೀಪ್~ ಮಾಡಿರುವ ಇಂಗ್ಲೆಂಡ್ ಏಕದಿನ ಸರಣಿಯಲ್ಲಿ ಇದೇ ಫಲಿತಾಂಶವನ್ನು ಪುನರಾವರ್ತಿಸುತ್ತಿದೆ. ಪ್ರವಾಸಿ ತಂಡವನ್ನು ಇಲ್ಲಿಯು ಮಣಿಸುವ ಗುರಿ ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.<br /> <br /> ಹತ್ತನೇ ವಿಶ್ವಕಪ್ನಲ್ಲಿ ಚಾಂಪಿಯನ್ ಆಗಿರುವ ಭಾರತ ತಂಡ ಪ್ರಬಲವಾಗಿ ಗಾಯಾಳುಗಳ ಸಮಸ್ಯೆ ಎದುರಿಸುತ್ತಿದೆ. ಆದ್ದರಿಂದ ಆ ತಂಡವನ್ನು ಏಕದಿನ ಸರಣಿಯಲ್ಲಿಯೂ ಮಣಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು. <br /> <br /> ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಹರಭಜನ್ ಸಿಂಗ್ ಹಾಗೂ ಜಹೀರ್ ಖಾನ್, ಗೌತಮ್ ಗಂಭೀರ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದಾರೆ. ಆದ್ದರಿಂದ ಪ್ರವಾಸಿ ತಂಡಕ್ಕೆ ಅನುಭವಿಗಳ ಕೊರತೆಯಿದೆ ಎಂದು ಬ್ರೆಸ್ನನ್ ಅಭಿಪ್ರಾಯ ಪಟ್ಟಿದ್ದಾರೆ. `ಭಾರತ ಉತ್ತಮ ತಂಡ. ಅದರಲ್ಲಿ ಅನುಮಾನವೇ ಬೇಡ. ಆದರೆ ಇಂಗ್ಲೆಂಡ್ ನೆಲದಲ್ಲಿ ಉತ್ತಮ ಪ್ರದರ್ಶನ ನೀಡಲು ಭಾರತಕ್ಕೆ ಕಷ್ಟವಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>