<p>ತುಮಕೂರು: ವಿದ್ಯೆಗಿಂತ ವಿದ್ವತ್ ದೊಡ್ಡದು ಎಂದು ಶಿಶುನಾಳ ಶರೀಫರ ತತ್ವ ಪ್ರಚಾರಕ ಎಂ.ಸಿ.ನರಸಿಂಹಮೂರ್ತಿ ಇಲ್ಲಿ ಶುಕ್ರವಾರ ಹೇಳಿದರು.<br /> <br /> ನಗರದ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನಡೆದ `ಸಾಂಸ್ಕೃತಿಕ ಹಬ್ಬ~ ಸಮಾರಂಭ ಉದ್ಘಾಟಿಸಿ ಮಾತನಾಡಿದರು.<br /> <br /> ಶಿಶುನಾಳ ಶರೀಫರ ಪ್ರತಿಯೊಂದು ಹಾಡಿನಲ್ಲಿ ವಿದ್ವತ್ ಅಡಗಿದೆ. ಜಾತಿ, ಧರ್ಮ ತೊಡೆದು ಹಾಕಿ ಏಕತೆಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಜತೆಗೆ ಸದಾಚಾರ, ಸಂಸ್ಕಾರ, ಸರಳತೆ ರೂಢಿಸಿಕೊಳ್ಳುವುದರ ಜೊತೆಗೆ ಉತ್ತಮ ನಾಗರಿಕರಾಗಬೇಕು ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಎಚ್.ಎಸ್.ನಿರಂಜನಾರಾಧ್ಯ ಮಾತನಾಡಿ, 2030ರ ವೇಳೆಗೆ ಭಾರತ ಪ್ರಪಂಚದಲ್ಲಿಯೇ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.<br /> <br /> ಅಮೆರಿಕದಲ್ಲಿ ನೆಮ್ಮದಿ ಮತ್ತು ಸಂತೋಷ ಕಡಿಮೆಯಾಗುತ್ತಿದೆ. ಆದರೆ ಹಿಂದುಳಿದ ರಾಷ್ಟ್ರವಾದ ನೇಪಾಳದ ಜನರು ಹೆಚ್ಚು ನೆಮ್ಮದಿ ಹೊಂದಿದ್ದಾರೆ ಎಂದು ತಿಳಿಸಿದರು.<br /> <br /> ಸಿದ್ದಗಂಗಾ ಮಹಿಳಾ ಪದವಿ ಕಾಲೇಜು ಪ್ರಾಂಶುಪಾಲ ಡಾ.ನಾಗಭೂಷಣ್, ಉಪನ್ಯಾಸಕ ವೈದ್ಯೇಶ್ವರ ಮಾತನಾಡಿದರು. ಪ್ರೊ.ದಾಕ್ಷಾಯಣಿ ಪ್ರಕಾಶ್ ಸ್ವಾಗತಿಸಿದರು. ಪ್ರೊ.ಪಿ.ರಾಘವೇಂದ್ರ ನಿರೂಪಿಸಿದರು. ಪ್ರೊ.ಕೆ.ಸಿ.ಜಯಸ್ವಾಮಿ ವಂದಿಸಿದರು. <br /> <br /> ವಿದ್ಯಾರ್ಥಿಗಳಿಂದ ರಂಗೋಲಿ, ಮೆಹಂದಿ, ಪ್ರಬಂಧ ಮತ್ತು ರಸ ಪ್ರಶ್ನೆ ಸ್ಪರ್ಧೆ, ಫ್ಯಾಷನ್ ಶೋ ಮತ್ತಿತರ ಕಾರ್ಯಕ್ರಮಗಳು ನಡೆದವು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ವಿದ್ಯೆಗಿಂತ ವಿದ್ವತ್ ದೊಡ್ಡದು ಎಂದು ಶಿಶುನಾಳ ಶರೀಫರ ತತ್ವ ಪ್ರಚಾರಕ ಎಂ.ಸಿ.ನರಸಿಂಹಮೂರ್ತಿ ಇಲ್ಲಿ ಶುಕ್ರವಾರ ಹೇಳಿದರು.<br /> <br /> ನಗರದ ಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನಡೆದ `ಸಾಂಸ್ಕೃತಿಕ ಹಬ್ಬ~ ಸಮಾರಂಭ ಉದ್ಘಾಟಿಸಿ ಮಾತನಾಡಿದರು.<br /> <br /> ಶಿಶುನಾಳ ಶರೀಫರ ಪ್ರತಿಯೊಂದು ಹಾಡಿನಲ್ಲಿ ವಿದ್ವತ್ ಅಡಗಿದೆ. ಜಾತಿ, ಧರ್ಮ ತೊಡೆದು ಹಾಕಿ ಏಕತೆಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಜತೆಗೆ ಸದಾಚಾರ, ಸಂಸ್ಕಾರ, ಸರಳತೆ ರೂಢಿಸಿಕೊಳ್ಳುವುದರ ಜೊತೆಗೆ ಉತ್ತಮ ನಾಗರಿಕರಾಗಬೇಕು ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಎಚ್.ಎಸ್.ನಿರಂಜನಾರಾಧ್ಯ ಮಾತನಾಡಿ, 2030ರ ವೇಳೆಗೆ ಭಾರತ ಪ್ರಪಂಚದಲ್ಲಿಯೇ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.<br /> <br /> ಅಮೆರಿಕದಲ್ಲಿ ನೆಮ್ಮದಿ ಮತ್ತು ಸಂತೋಷ ಕಡಿಮೆಯಾಗುತ್ತಿದೆ. ಆದರೆ ಹಿಂದುಳಿದ ರಾಷ್ಟ್ರವಾದ ನೇಪಾಳದ ಜನರು ಹೆಚ್ಚು ನೆಮ್ಮದಿ ಹೊಂದಿದ್ದಾರೆ ಎಂದು ತಿಳಿಸಿದರು.<br /> <br /> ಸಿದ್ದಗಂಗಾ ಮಹಿಳಾ ಪದವಿ ಕಾಲೇಜು ಪ್ರಾಂಶುಪಾಲ ಡಾ.ನಾಗಭೂಷಣ್, ಉಪನ್ಯಾಸಕ ವೈದ್ಯೇಶ್ವರ ಮಾತನಾಡಿದರು. ಪ್ರೊ.ದಾಕ್ಷಾಯಣಿ ಪ್ರಕಾಶ್ ಸ್ವಾಗತಿಸಿದರು. ಪ್ರೊ.ಪಿ.ರಾಘವೇಂದ್ರ ನಿರೂಪಿಸಿದರು. ಪ್ರೊ.ಕೆ.ಸಿ.ಜಯಸ್ವಾಮಿ ವಂದಿಸಿದರು. <br /> <br /> ವಿದ್ಯಾರ್ಥಿಗಳಿಂದ ರಂಗೋಲಿ, ಮೆಹಂದಿ, ಪ್ರಬಂಧ ಮತ್ತು ರಸ ಪ್ರಶ್ನೆ ಸ್ಪರ್ಧೆ, ಫ್ಯಾಷನ್ ಶೋ ಮತ್ತಿತರ ಕಾರ್ಯಕ್ರಮಗಳು ನಡೆದವು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>