<p><strong>ನವದೆಹಲಿ/ಪಟ್ನಾ (ಪಿಟಿಐ):</strong> ಬುದ್ಧಗಯಾದ ಮಹಾಬೋಧಿ ದೇವಾಲಯದ ಮೇಲೆ ದಾಳಿ ನಡೆಯುವ ಸಾಧ್ಯತೆ ಇರುವ ಬಗ್ಗೆ ಬೇಹುಗಾರಿಕಾ ಸಂಸ್ಥೆಗಳಿಂದ ನಿರ್ದಿಷ್ಟ ಮಾಹಿತಿ ಇದ್ದರೂ ಬಿಹಾರ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಮುಂಜಾಗ್ರತೆ ವಹಿಸಲು ವಿಫಲವಾಗಿವೆ ಎಂದು ಬಿಹಾರದ ಬಿಜೆಪಿ ಇನ್ನಿತರ ವಿರೋಧ ಪಕ್ಷಗಳು ಟೀಕಿಸಿವೆ.<br /> <br /> `ದಿನದಿಂದ ದಿನಕ್ಕೆ ದೇಶದ ಆಂತರಿಕ ಭದ್ರತೆಯು ಸವಾಲಿಗೆ ಪರಿಣಮಿಸಿದೆ. ಆಂತರಿಕ ಮತ್ತು ಬಾಹ್ಯ ಭದ್ರತೆಗೆ ಅಗತ್ಯವಾದ ಸಮಗ್ರ ಭದ್ರತಾ ಯೋಜನೆ ರೂಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಟೀಕಿಸಿದ್ದಾರೆ.<br /> <br /> `ಬುದ್ಧಗಯಾದಲ್ಲಿ ಉಗ್ರರ ಚಟುವಟಿಕೆ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಇದ್ದಾಗ್ಯೂ ರಾಜ್ಯ ಸರ್ಕಾರ ಹೆಚ್ಚಿನ ಭದ್ರತೆ ಕಲ್ಪಿಸಲಿಲ್ಲ. ಈ ವಿಷಯದಲ್ಲಿ ಕೇಂದ್ರ ಹೊಣೆಗೇಡಿತನದಿಂದ ವರ್ತಿಸಿತು' ಎಂದು ಬಿಜೆಪಿ ವಕ್ತಾರ ಪ್ರಕಾಶ್ ಜಾವಡೇಕರ್ ಆಪಾದಿಸಿದ್ದಾರೆ.<br /> <br /> `ಬಿಹಾರದ ಮುಖ್ಯಮಂತ್ರಿ ಅವರ ನಿವಾಸವು ಶ್ರೀಸಾಮಾನ್ಯರಿಗಿಂತ ಪಕ್ಷದ ಕಾರ್ಯಕರ್ತರಿಗೆ ಹೆಚ್ಚು ಮುಕ್ತವಾಗಿದೆ. ನಿತೀಶ್ ಕುಮಾರ್ ಅವರು ಜನರ ರಕ್ಷಣೆಗಿಂತ ದೆಹಲಿಯಿಂದ ಬರುವ ಸಚಿವರೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ' ಎಂದು ಬಿಜೆಪಿ ವಕ್ತಾರ ಷಾನವಾಜ್ ಹುಸೇನ್ ಆಕ್ಷೇಪಿಸಿದ್ದಾರೆ.<br /> <br /> `ಸರಣಿ ಬಾಂಬ್ ಸ್ಫೋಟ ಘಟನೆ ಖಂಡನೀಯ. ಆದರೆ, ಬೇಹುಗಾರಿಕೆ ವರದಿ ಇದ್ದರೂ ಅದನ್ನು ನಿರ್ಲಕ್ಷಿಸಿದ ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ' ಎಂದು ಬಿಹಾರದ ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಹೇಳಿದ್ದಾರೆ.<br /> <br /> `ಬಿಜೆಪಿಯ ಸಖ್ಯ ತೊರೆದ ಜೆಡಿಯು, ಕಾಂಗ್ರೆಸ್ನವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಕಸರತ್ತು ನಡೆಸಿದೆಯೇ ಹೊರತು ರಾಜ್ಯದ ಜನರ ರಕ್ಷಣೆಯನ್ನು ನಿರ್ಲಕ್ಷಿಸಿತು' ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಯಾದವ್ ಕಿಡಿಕಾರಿದ್ದಾರೆ. `ರಾಜ್ಯ ಸರ್ಕಾರ ಮುಂಜಾಗ್ರತೆ ವಹಿಸಿದ್ದರೆ ಈ ಘಟನೆ ತಪ್ಪಿಸಬಹುದಿತ್ತು. ನಿತೀಶ್ ಕುಮಾರ್ ಅವರ ಸರ್ಕಾರದ ವೈಫಲ್ಯದಿಂದ ಬಿಹಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ' ಎಂದು ಎಲ್ಜೆಪಿ ಅಧ್ಯಕ್ಷ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.<br /> <br /> ಟೀಕೆಗಳನ್ನು ಅಲ್ಲಗಳೆದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, `ಬೇಹುಗಾರಿಕೆಯ ಮಾಹಿತಿಯನ್ನು ಉಪೇಕ್ಷಿಸಿಲ್ಲ. ಹೆಚ್ಚುವರಿ ಭದ್ರತೆಯನ್ನು ಬುದ್ಧಗಯಾದಲ್ಲಿ ಕಲ್ಪಿಸಲಾಗಿತ್ತು' ಎಂದಿದ್ದಾರೆ.</p>.<p><strong>ಕಾಂಗ್ರೆಸ್ ಖಂಡನೆ:</strong> `ಇದು ಹೇಯ ಮತ್ತು ಖಂಡನೀಯ ಕೃತ್ಯ. ರಾಜ್ಯ ಸರ್ಕಾರವು ತಪ್ಪಿತಸ್ಥರನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸಬೇಕು' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಯ್ ಮಕಾನ್ ಒತ್ತಾಯಿಸಿದ್ದಾರೆ.</p>.<p><strong>ಕಟ್ಟೆಚ್ಚರ: ರಾಜ್ಯಗಳಿಗೆ ಸೂಚನೆ</strong><br /> ಬುದ್ಧಗಯಾದಲ್ಲಿ ಸಂಭವಿಸಿರುವ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ದೇಶದಲ್ಲಿರುವ ಬೌದ್ಧ ವಿಹಾರಗಳು ಮತ್ತು ಟಿಬೆಟನ್ ನಿರಾಶ್ರಿತರ ಶಿಬಿರಗಳಿರುವ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸೂಚಿಸಿದೆ.</p>.<p>ಜೊತೆಗೆ ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಕೋಲ್ಕತ್ತ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ ಮತ್ತಿತರ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆಯೂ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಪಟ್ನಾ (ಪಿಟಿಐ):</strong> ಬುದ್ಧಗಯಾದ ಮಹಾಬೋಧಿ ದೇವಾಲಯದ ಮೇಲೆ ದಾಳಿ ನಡೆಯುವ ಸಾಧ್ಯತೆ ಇರುವ ಬಗ್ಗೆ ಬೇಹುಗಾರಿಕಾ ಸಂಸ್ಥೆಗಳಿಂದ ನಿರ್ದಿಷ್ಟ ಮಾಹಿತಿ ಇದ್ದರೂ ಬಿಹಾರ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಮುಂಜಾಗ್ರತೆ ವಹಿಸಲು ವಿಫಲವಾಗಿವೆ ಎಂದು ಬಿಹಾರದ ಬಿಜೆಪಿ ಇನ್ನಿತರ ವಿರೋಧ ಪಕ್ಷಗಳು ಟೀಕಿಸಿವೆ.<br /> <br /> `ದಿನದಿಂದ ದಿನಕ್ಕೆ ದೇಶದ ಆಂತರಿಕ ಭದ್ರತೆಯು ಸವಾಲಿಗೆ ಪರಿಣಮಿಸಿದೆ. ಆಂತರಿಕ ಮತ್ತು ಬಾಹ್ಯ ಭದ್ರತೆಗೆ ಅಗತ್ಯವಾದ ಸಮಗ್ರ ಭದ್ರತಾ ಯೋಜನೆ ರೂಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಟೀಕಿಸಿದ್ದಾರೆ.<br /> <br /> `ಬುದ್ಧಗಯಾದಲ್ಲಿ ಉಗ್ರರ ಚಟುವಟಿಕೆ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಇದ್ದಾಗ್ಯೂ ರಾಜ್ಯ ಸರ್ಕಾರ ಹೆಚ್ಚಿನ ಭದ್ರತೆ ಕಲ್ಪಿಸಲಿಲ್ಲ. ಈ ವಿಷಯದಲ್ಲಿ ಕೇಂದ್ರ ಹೊಣೆಗೇಡಿತನದಿಂದ ವರ್ತಿಸಿತು' ಎಂದು ಬಿಜೆಪಿ ವಕ್ತಾರ ಪ್ರಕಾಶ್ ಜಾವಡೇಕರ್ ಆಪಾದಿಸಿದ್ದಾರೆ.<br /> <br /> `ಬಿಹಾರದ ಮುಖ್ಯಮಂತ್ರಿ ಅವರ ನಿವಾಸವು ಶ್ರೀಸಾಮಾನ್ಯರಿಗಿಂತ ಪಕ್ಷದ ಕಾರ್ಯಕರ್ತರಿಗೆ ಹೆಚ್ಚು ಮುಕ್ತವಾಗಿದೆ. ನಿತೀಶ್ ಕುಮಾರ್ ಅವರು ಜನರ ರಕ್ಷಣೆಗಿಂತ ದೆಹಲಿಯಿಂದ ಬರುವ ಸಚಿವರೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ' ಎಂದು ಬಿಜೆಪಿ ವಕ್ತಾರ ಷಾನವಾಜ್ ಹುಸೇನ್ ಆಕ್ಷೇಪಿಸಿದ್ದಾರೆ.<br /> <br /> `ಸರಣಿ ಬಾಂಬ್ ಸ್ಫೋಟ ಘಟನೆ ಖಂಡನೀಯ. ಆದರೆ, ಬೇಹುಗಾರಿಕೆ ವರದಿ ಇದ್ದರೂ ಅದನ್ನು ನಿರ್ಲಕ್ಷಿಸಿದ ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ' ಎಂದು ಬಿಹಾರದ ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಹೇಳಿದ್ದಾರೆ.<br /> <br /> `ಬಿಜೆಪಿಯ ಸಖ್ಯ ತೊರೆದ ಜೆಡಿಯು, ಕಾಂಗ್ರೆಸ್ನವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಕಸರತ್ತು ನಡೆಸಿದೆಯೇ ಹೊರತು ರಾಜ್ಯದ ಜನರ ರಕ್ಷಣೆಯನ್ನು ನಿರ್ಲಕ್ಷಿಸಿತು' ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಯಾದವ್ ಕಿಡಿಕಾರಿದ್ದಾರೆ. `ರಾಜ್ಯ ಸರ್ಕಾರ ಮುಂಜಾಗ್ರತೆ ವಹಿಸಿದ್ದರೆ ಈ ಘಟನೆ ತಪ್ಪಿಸಬಹುದಿತ್ತು. ನಿತೀಶ್ ಕುಮಾರ್ ಅವರ ಸರ್ಕಾರದ ವೈಫಲ್ಯದಿಂದ ಬಿಹಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ' ಎಂದು ಎಲ್ಜೆಪಿ ಅಧ್ಯಕ್ಷ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.<br /> <br /> ಟೀಕೆಗಳನ್ನು ಅಲ್ಲಗಳೆದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, `ಬೇಹುಗಾರಿಕೆಯ ಮಾಹಿತಿಯನ್ನು ಉಪೇಕ್ಷಿಸಿಲ್ಲ. ಹೆಚ್ಚುವರಿ ಭದ್ರತೆಯನ್ನು ಬುದ್ಧಗಯಾದಲ್ಲಿ ಕಲ್ಪಿಸಲಾಗಿತ್ತು' ಎಂದಿದ್ದಾರೆ.</p>.<p><strong>ಕಾಂಗ್ರೆಸ್ ಖಂಡನೆ:</strong> `ಇದು ಹೇಯ ಮತ್ತು ಖಂಡನೀಯ ಕೃತ್ಯ. ರಾಜ್ಯ ಸರ್ಕಾರವು ತಪ್ಪಿತಸ್ಥರನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸಬೇಕು' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಯ್ ಮಕಾನ್ ಒತ್ತಾಯಿಸಿದ್ದಾರೆ.</p>.<p><strong>ಕಟ್ಟೆಚ್ಚರ: ರಾಜ್ಯಗಳಿಗೆ ಸೂಚನೆ</strong><br /> ಬುದ್ಧಗಯಾದಲ್ಲಿ ಸಂಭವಿಸಿರುವ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ದೇಶದಲ್ಲಿರುವ ಬೌದ್ಧ ವಿಹಾರಗಳು ಮತ್ತು ಟಿಬೆಟನ್ ನಿರಾಶ್ರಿತರ ಶಿಬಿರಗಳಿರುವ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸೂಚಿಸಿದೆ.</p>.<p>ಜೊತೆಗೆ ದೇಶದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಕೋಲ್ಕತ್ತ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ ಮತ್ತಿತರ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆಯೂ ನಿರ್ದೇಶನ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>