<p><strong>ಬೆಂಗಳೂರು: </strong>2002ರಿಂದ 2009ರ ಅವಧಿಯಲ್ಲಿ ಕಲ್ಲಿದ್ದಲು ಖರೀದಿ, ಸಾಗಣೆ ಮತ್ತು ಅದನ್ನು ತೊಳೆಯುವಲ್ಲಿ ನಡೆದ ಅವ್ಯವಹಾರಗಳಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಪಿ.ಮೋಹನ್ ಕುಮಾರ್ ವಿಚಾರಣಾ ಆಯೋಗ ಶುಕ್ರವಾರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.<br /> <br /> ಸ್ವತಃ ಮೋಹನ್ ಕುಮಾರ್ ಅವರೇ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಮೂರು ಸಂಪುಟಗಳ ವರದಿಯನ್ನು ಹಸ್ತಾಂತರಿಸಿದರು. ವರದಿಯಲ್ಲಿನ ಮಾಹಿತಿ ನೀಡಲು ನಿರಾಕರಿಸಿದ ನ್ಯಾಯಮೂರ್ತಿ, `ನಾನು ಏನು ಹೇಳಬೇಕೊ ಅದನ್ನು ವರದಿಯಲ್ಲಿ ಹೇಳಿದ್ದೇನೆ. ಸರ್ಕಾರದ ಕಡೆಯಿಂದ ಆ ಕುರಿತು ಮಾಹಿತಿ ಪಡೆಯರಿ~ ಎಂದು ಹೇಳಿದರು.<br /> <br /> ಮುಖ್ಯಮಂತ್ರಿ ಮಾತನಾಡಿ, ವರದಿಯನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಇಂಧನ ಸಚಿವೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ರವಿಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>2002ರಿಂದ 2009ರ ಅವಧಿಯಲ್ಲಿ ಕಲ್ಲಿದ್ದಲು ಖರೀದಿ, ಸಾಗಣೆ ಮತ್ತು ಅದನ್ನು ತೊಳೆಯುವಲ್ಲಿ ನಡೆದ ಅವ್ಯವಹಾರಗಳಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಪಿ.ಮೋಹನ್ ಕುಮಾರ್ ವಿಚಾರಣಾ ಆಯೋಗ ಶುಕ್ರವಾರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.<br /> <br /> ಸ್ವತಃ ಮೋಹನ್ ಕುಮಾರ್ ಅವರೇ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಮೂರು ಸಂಪುಟಗಳ ವರದಿಯನ್ನು ಹಸ್ತಾಂತರಿಸಿದರು. ವರದಿಯಲ್ಲಿನ ಮಾಹಿತಿ ನೀಡಲು ನಿರಾಕರಿಸಿದ ನ್ಯಾಯಮೂರ್ತಿ, `ನಾನು ಏನು ಹೇಳಬೇಕೊ ಅದನ್ನು ವರದಿಯಲ್ಲಿ ಹೇಳಿದ್ದೇನೆ. ಸರ್ಕಾರದ ಕಡೆಯಿಂದ ಆ ಕುರಿತು ಮಾಹಿತಿ ಪಡೆಯರಿ~ ಎಂದು ಹೇಳಿದರು.<br /> <br /> ಮುಖ್ಯಮಂತ್ರಿ ಮಾತನಾಡಿ, ವರದಿಯನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಇಂಧನ ಸಚಿವೆ ಶೋಭಾ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ರವಿಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>