<p><strong>ಮೈಸೂರು: </strong>`ನಮ್ಮ ಸರ್ಕಾರದ ಕಾರ್ಯಗಳಲ್ಲಿ ಪಕ್ಷದ ಹೈಕಮಾಂಡ್ ಹಸ್ತಕ್ಷೇಪ ಮಾಡುತ್ತಿಲ್ಲ. ಆ ರೀತಿ ಆಗಲೂ ನಾವು ಬಿಡುವುದಿಲ್ಲ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಗುರುವಾರ ಹೇಳಿದರು. <br /> <br /> ಬೆಂಗಳೂರಿನಲ್ಲಿ ಬುಧವಾರ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರದ ವಿಷಯದಲ್ಲಿ ಹೈಕಮಾಂಡ್ ಹಸ್ತಕ್ಷೇಪವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಗುರುವಾರ ಸದಾನಂದಗೌಡರು ಹೈಕಮಾಂಡ್ ಹಸ್ತಕ್ಷೇಪವನ್ನು ಅಲ್ಲಗಳೆದರು.<br /> <br /> ದಸರಾ ಮಹೋತ್ಸವದ ಉನ್ನತ ಸಮಿತಿಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡರು, `ರಾಜ್ಯ ಸರ್ಕಾರದಲ್ಲಿ ಎಲ್ಲ ಸಚಿವರು ಮತ್ತು ಇಲಾಖೆ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. 29 ಇಲಾಖೆಗಳ ಪೈಕಿ 21 ಇಲಾಖೆಗಳ ಪರಿಶೀಲನೆ ನಡೆಸಲಾಗಿದೆ. <br /> <br /> ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅಭಿವೃದ್ಧಿಯ ವೇಗಕ್ಕೆ ಚಾಲನೆ ನೀಡಿದ್ದೇನೆ ಎನ್ನುವ ಆತ್ಮ ವಿಶ್ವಾಸ ನನಗಿದೆ. ನನ್ನ ಮಿತಿಯಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ~ ಎಂದರು.<br /> <br /> ಶಾಸಕ ಬಿ.ಶ್ರೀರಾಮುಲು ಅವರ ರಾಜೀನಾಮೆ ಸ್ವೀಕಾರಕ್ಕೆ ಸ್ಪೀಕರ್ ವಿಳಂಬ ಮಾಡುತ್ತಿರುವ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, `ರಾಜೀನಾಮೆ ಕೊಟ್ಟವರು ಮತ್ತು ಸ್ವೀಕರಿಸಿದವರ ವಿಷಯ ಇದು. ನಾನು ಇದರಲ್ಲಿ ಹಸ್ತಕ್ಷೇಪ ಮಾಡಲು ಇಚ್ಛಿಸುವುದಿಲ್ಲ~ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>`ನಮ್ಮ ಸರ್ಕಾರದ ಕಾರ್ಯಗಳಲ್ಲಿ ಪಕ್ಷದ ಹೈಕಮಾಂಡ್ ಹಸ್ತಕ್ಷೇಪ ಮಾಡುತ್ತಿಲ್ಲ. ಆ ರೀತಿ ಆಗಲೂ ನಾವು ಬಿಡುವುದಿಲ್ಲ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಗುರುವಾರ ಹೇಳಿದರು. <br /> <br /> ಬೆಂಗಳೂರಿನಲ್ಲಿ ಬುಧವಾರ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರದ ವಿಷಯದಲ್ಲಿ ಹೈಕಮಾಂಡ್ ಹಸ್ತಕ್ಷೇಪವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಗುರುವಾರ ಸದಾನಂದಗೌಡರು ಹೈಕಮಾಂಡ್ ಹಸ್ತಕ್ಷೇಪವನ್ನು ಅಲ್ಲಗಳೆದರು.<br /> <br /> ದಸರಾ ಮಹೋತ್ಸವದ ಉನ್ನತ ಸಮಿತಿಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡರು, `ರಾಜ್ಯ ಸರ್ಕಾರದಲ್ಲಿ ಎಲ್ಲ ಸಚಿವರು ಮತ್ತು ಇಲಾಖೆ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. 29 ಇಲಾಖೆಗಳ ಪೈಕಿ 21 ಇಲಾಖೆಗಳ ಪರಿಶೀಲನೆ ನಡೆಸಲಾಗಿದೆ. <br /> <br /> ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅಭಿವೃದ್ಧಿಯ ವೇಗಕ್ಕೆ ಚಾಲನೆ ನೀಡಿದ್ದೇನೆ ಎನ್ನುವ ಆತ್ಮ ವಿಶ್ವಾಸ ನನಗಿದೆ. ನನ್ನ ಮಿತಿಯಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ~ ಎಂದರು.<br /> <br /> ಶಾಸಕ ಬಿ.ಶ್ರೀರಾಮುಲು ಅವರ ರಾಜೀನಾಮೆ ಸ್ವೀಕಾರಕ್ಕೆ ಸ್ಪೀಕರ್ ವಿಳಂಬ ಮಾಡುತ್ತಿರುವ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, `ರಾಜೀನಾಮೆ ಕೊಟ್ಟವರು ಮತ್ತು ಸ್ವೀಕರಿಸಿದವರ ವಿಷಯ ಇದು. ನಾನು ಇದರಲ್ಲಿ ಹಸ್ತಕ್ಷೇಪ ಮಾಡಲು ಇಚ್ಛಿಸುವುದಿಲ್ಲ~ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>