<p><strong>ಚನ್ನಗಿರಿ: </strong>ತಾಲ್ಲೂಕಿನ ಗಾಣದಕಟ್ಟೆ ಗ್ರಾಮದ ಬಳಿ ರೂ 6 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಚೆಕ್ ಡ್ಯಾಂ ಹಿನ್ನೀರಿನಲ್ಲಿ ಮುಳಗಡೆಯಾಗಲಿರುವ ಬಗರ್ಹುಕುಂ ಸಾಗುವಾಳಿದಾರರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.<br /> <br /> ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಮುಟಾ-ಕಡಮಡಗಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಗೆ ರೂ 33 ಕೋಟಿ, ಮಲ್ಪೆ-ಮೊಳಕಾಲ್ಮೂರು ರಸ್ತೆ ಅಭಿವೃದ್ಧಿಗೆ ರೂ 13 ಕೋಟಿ ಅನುದಾನ ಬಿಡುಗಡೆಯಾಗಿದೆ.<br /> <br /> ಆದಷ್ಟು ಬೇಗ ಕಾಮಗಾರಿ ಆರಂಭಿಸಿ ಗುಣಮಟ್ಟದ ಕಾಮಗಾರಿಯಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಹಾಗೆಯೇ ಸಂತೇಬೆನ್ನೂರು ಗ್ರಾಮದ ಕುಡಿಯುವ ನೀರಿನ ಕಾಮಗಾರಿ ಈ ತಿಂಗಳೊಳಗೆ ಮುಕ್ತಾಯಗೊಳಿಸಿ ಜನರಿಗೆ ನೀರನ್ನು ನೀಡಬೇಕೆಂದು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಬಸವರಾಜ್ನಾಯ್ಕ ಮಾತನಾಡಿ, ತಾಂಡಾಗಳ ಅಭಿವೃದ್ಧಿಗೆ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ, ಸಮಯಕ್ಕೆ ಸರಿಯಾಗಿ ಕಾಮಗಾರಿ ಆರಂಭಿಸದಿದ್ದರೆ, ಬಂದ ಅನುದಾನ ವಾಪಸು ಹೋಗುತ್ತದೆ. <br /> <br /> ಆದ್ದರಿಂದ ಶೀಘ್ರ ಕಾಮಗಾರಿ ಆರಂಭಿಸಬೇಕು. ಈ ತಾಲ್ಲೂಕಿನ ತಾಂಡಾಗಳ ಅಭಿವೃದ್ಧಿಗೆ ಒಟ್ಟು ರೂ 70 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಪ್ರಗತಿ ಪರಿಶೀಲನಾ ಸಭೆಗೆ ಮುಖ್ಯವಾಗಿ ಅಧಿಕಾರಿಗಳು ಭಾಗವಹಿಸದೇ ಕಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡುವ ಪರಿಪಾಠ ನಡೆಯುತ್ತಿದೆ. <br /> <br /> ಈ ಅಧಿಕಾರಿಗಳು ಮಾಹಿತಿ ಕೇಳಿದರೆ ನಮಗೆ ಗೊತ್ತಿಲ್ಲ ಎಂದು ಉತ್ತರ ಕೊಡುತ್ತಾರೆ. ಆದ್ದರಿಂದ ಗೈರುಹಾಜರಾದ ಅಧಿಕಾರಿಗಳಿಗೆ ನೋಟಿಸ್ ಕಳುಹಿಸಿ ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ತಾ.ಪಂ. ಇಒ ಅವರಿಗೆ ಆದೇಶ ಮಾಡಿದರು.<br /> <br /> ತಾ.ಪಂ. ಅಧ್ಯಕ್ಷೆ ಸಿ.ಎಂ. ಅನುಸೂಯಮ್ಮ, ಉಪಾಧ್ಯಕ್ಷ ಎನ್. ಗಣೇಶ್ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದಲಿಂಗಪ್ಪ, ತಹಶೀಲ್ದಾರ್ ಎಚ್.ಎಂ. ರೇವಣಸಿದ್ದಪ್ಪ, ಇಒ ಎಲ್.ಎ. ಕೃಷ್ಣನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ: </strong>ತಾಲ್ಲೂಕಿನ ಗಾಣದಕಟ್ಟೆ ಗ್ರಾಮದ ಬಳಿ ರೂ 6 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಚೆಕ್ ಡ್ಯಾಂ ಹಿನ್ನೀರಿನಲ್ಲಿ ಮುಳಗಡೆಯಾಗಲಿರುವ ಬಗರ್ಹುಕುಂ ಸಾಗುವಾಳಿದಾರರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.<br /> <br /> ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಮುಟಾ-ಕಡಮಡಗಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಗೆ ರೂ 33 ಕೋಟಿ, ಮಲ್ಪೆ-ಮೊಳಕಾಲ್ಮೂರು ರಸ್ತೆ ಅಭಿವೃದ್ಧಿಗೆ ರೂ 13 ಕೋಟಿ ಅನುದಾನ ಬಿಡುಗಡೆಯಾಗಿದೆ.<br /> <br /> ಆದಷ್ಟು ಬೇಗ ಕಾಮಗಾರಿ ಆರಂಭಿಸಿ ಗುಣಮಟ್ಟದ ಕಾಮಗಾರಿಯಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಹಾಗೆಯೇ ಸಂತೇಬೆನ್ನೂರು ಗ್ರಾಮದ ಕುಡಿಯುವ ನೀರಿನ ಕಾಮಗಾರಿ ಈ ತಿಂಗಳೊಳಗೆ ಮುಕ್ತಾಯಗೊಳಿಸಿ ಜನರಿಗೆ ನೀರನ್ನು ನೀಡಬೇಕೆಂದು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಬಸವರಾಜ್ನಾಯ್ಕ ಮಾತನಾಡಿ, ತಾಂಡಾಗಳ ಅಭಿವೃದ್ಧಿಗೆ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ, ಸಮಯಕ್ಕೆ ಸರಿಯಾಗಿ ಕಾಮಗಾರಿ ಆರಂಭಿಸದಿದ್ದರೆ, ಬಂದ ಅನುದಾನ ವಾಪಸು ಹೋಗುತ್ತದೆ. <br /> <br /> ಆದ್ದರಿಂದ ಶೀಘ್ರ ಕಾಮಗಾರಿ ಆರಂಭಿಸಬೇಕು. ಈ ತಾಲ್ಲೂಕಿನ ತಾಂಡಾಗಳ ಅಭಿವೃದ್ಧಿಗೆ ಒಟ್ಟು ರೂ 70 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಪ್ರಗತಿ ಪರಿಶೀಲನಾ ಸಭೆಗೆ ಮುಖ್ಯವಾಗಿ ಅಧಿಕಾರಿಗಳು ಭಾಗವಹಿಸದೇ ಕಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡುವ ಪರಿಪಾಠ ನಡೆಯುತ್ತಿದೆ. <br /> <br /> ಈ ಅಧಿಕಾರಿಗಳು ಮಾಹಿತಿ ಕೇಳಿದರೆ ನಮಗೆ ಗೊತ್ತಿಲ್ಲ ಎಂದು ಉತ್ತರ ಕೊಡುತ್ತಾರೆ. ಆದ್ದರಿಂದ ಗೈರುಹಾಜರಾದ ಅಧಿಕಾರಿಗಳಿಗೆ ನೋಟಿಸ್ ಕಳುಹಿಸಿ ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ತಾ.ಪಂ. ಇಒ ಅವರಿಗೆ ಆದೇಶ ಮಾಡಿದರು.<br /> <br /> ತಾ.ಪಂ. ಅಧ್ಯಕ್ಷೆ ಸಿ.ಎಂ. ಅನುಸೂಯಮ್ಮ, ಉಪಾಧ್ಯಕ್ಷ ಎನ್. ಗಣೇಶ್ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದಲಿಂಗಪ್ಪ, ತಹಶೀಲ್ದಾರ್ ಎಚ್.ಎಂ. ರೇವಣಸಿದ್ದಪ್ಪ, ಇಒ ಎಲ್.ಎ. ಕೃಷ್ಣನಾಯ್ಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>