<p><strong>ಜಮ್ಮು (ಪಿಟಿಐ):</strong> ಕಾಶ್ಮೀರ ಕಣಿವೆಯಿಂದ ವಲಸೆಹೋದ ಕಾಶ್ಮೀರಿ ಪಂಡಿತರನ್ನು ಮರಳಿ ಕರೆತರುವಲ್ಲಿ ಸರ್ಕಾರ ಮತ್ತು ಜನರು ನಡೆಸುತ್ತಿರುವ ಪ್ರಯತ್ನಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕಾಶ್ಮೀರಿ ಹಿಂದೂಗಳ ಸಂಘಟನೆ ಭರವಸೆ ನೀಡಿದೆ.<br /> <br /> ‘ಕಾಶ್ಮೀರಿ ಪಂಡಿತರನ್ನು ಮರಳಿ ಕರೆತರುವಲ್ಲಿ ಸರ್ಕಾರ ನಡೆಸುತ್ತಿರುವ ಎಲ್ಲಾ ಪ್ರಯತ್ನಗಳಿಗೆ ನಾವು ಬೆಂಬಲ ನೀಡುತ್ತೇವೆ’ ಎಂದು ಜಮ್ಮು ಮತ್ತು ಕಾಶ್ಮೀರ ಅಲ್ಪಸಂಖ್ಯಾತರ ವೇದಿಕೆ (ಜೆಕೆಎಂಎಫ್) ಅಧ್ಯಕ್ಷ ಪಿ. ಎನ್. ಟಾಕ್ಕೂ ವರದಿಗಾರರಿಗೆ ತಿಳಿಸಿದರು.<br /> <br /> ಕಾಶ್ಮೀರಿ ಪಂಡಿತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಕಲ್ಯಾಣ ಕಾರ್ಯಗಳನ್ನು ಸರ್ಕಾರ ಕೈಗೊಂಡಿರುವುದು ಸಂತೋಷದ ವಿಷಯವಾಗಿದೆ, ಕಾಶ್ಮೀರ ಕಣಿವೆಯ ವಿವಿಧೆಡೆ 1,700ಕ್ಕೂ ಹೆಚ್ಚು ಮಂದಿ ಯುವಕರಿಗೆ ಉದ್ಯೋಗವನ್ನು ನೀಡುವ ಸರ್ಕಾರದ ಭರವಸೆ ಸ್ವಾಗತಾರ್ಹವಾಗಿದೆ ಎಂದರು. ಶ್ರೀನಗರದಲ್ಲಿ ಸಹಜ ಸ್ಥಿತಿ: ಮೊಹರಂ ಮೆರವಣಿಗೆ ಹಿನ್ನೆಲೆಯಲ್ಲಿ ಶ್ರೀನಗರದ ಕೆಲವು ಭಾಗಗಳಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ತೆಗೆದು ಹಾಕಿರುವ ಕಾರಣ ಶನಿವಾರ ಪರಿಸ್ಥಿತಿ ಸಹಜ ಸ್ಥಿತಿ ಮರಳಿದೆ.</p>.<p>ಶಾಲಾ ಕಾಲೇಜು, ಖಾಸಗಿ ಕಚೇರಿಗಳು ಮತ್ತು ವಾಣಿಜ್ಯ ವಹಿವಾಟು ಹಾಗೂ ಸಂಚಾರ ವ್ಯವಸ್ಥೆ ಎಂದಿನಂತೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಸುಮಾರು ಏಳು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶುಕ್ರವಾರ ಕರ್ಫ್ಯೂ ವಿಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು (ಪಿಟಿಐ):</strong> ಕಾಶ್ಮೀರ ಕಣಿವೆಯಿಂದ ವಲಸೆಹೋದ ಕಾಶ್ಮೀರಿ ಪಂಡಿತರನ್ನು ಮರಳಿ ಕರೆತರುವಲ್ಲಿ ಸರ್ಕಾರ ಮತ್ತು ಜನರು ನಡೆಸುತ್ತಿರುವ ಪ್ರಯತ್ನಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕಾಶ್ಮೀರಿ ಹಿಂದೂಗಳ ಸಂಘಟನೆ ಭರವಸೆ ನೀಡಿದೆ.<br /> <br /> ‘ಕಾಶ್ಮೀರಿ ಪಂಡಿತರನ್ನು ಮರಳಿ ಕರೆತರುವಲ್ಲಿ ಸರ್ಕಾರ ನಡೆಸುತ್ತಿರುವ ಎಲ್ಲಾ ಪ್ರಯತ್ನಗಳಿಗೆ ನಾವು ಬೆಂಬಲ ನೀಡುತ್ತೇವೆ’ ಎಂದು ಜಮ್ಮು ಮತ್ತು ಕಾಶ್ಮೀರ ಅಲ್ಪಸಂಖ್ಯಾತರ ವೇದಿಕೆ (ಜೆಕೆಎಂಎಫ್) ಅಧ್ಯಕ್ಷ ಪಿ. ಎನ್. ಟಾಕ್ಕೂ ವರದಿಗಾರರಿಗೆ ತಿಳಿಸಿದರು.<br /> <br /> ಕಾಶ್ಮೀರಿ ಪಂಡಿತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಕಲ್ಯಾಣ ಕಾರ್ಯಗಳನ್ನು ಸರ್ಕಾರ ಕೈಗೊಂಡಿರುವುದು ಸಂತೋಷದ ವಿಷಯವಾಗಿದೆ, ಕಾಶ್ಮೀರ ಕಣಿವೆಯ ವಿವಿಧೆಡೆ 1,700ಕ್ಕೂ ಹೆಚ್ಚು ಮಂದಿ ಯುವಕರಿಗೆ ಉದ್ಯೋಗವನ್ನು ನೀಡುವ ಸರ್ಕಾರದ ಭರವಸೆ ಸ್ವಾಗತಾರ್ಹವಾಗಿದೆ ಎಂದರು. ಶ್ರೀನಗರದಲ್ಲಿ ಸಹಜ ಸ್ಥಿತಿ: ಮೊಹರಂ ಮೆರವಣಿಗೆ ಹಿನ್ನೆಲೆಯಲ್ಲಿ ಶ್ರೀನಗರದ ಕೆಲವು ಭಾಗಗಳಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ತೆಗೆದು ಹಾಕಿರುವ ಕಾರಣ ಶನಿವಾರ ಪರಿಸ್ಥಿತಿ ಸಹಜ ಸ್ಥಿತಿ ಮರಳಿದೆ.</p>.<p>ಶಾಲಾ ಕಾಲೇಜು, ಖಾಸಗಿ ಕಚೇರಿಗಳು ಮತ್ತು ವಾಣಿಜ್ಯ ವಹಿವಾಟು ಹಾಗೂ ಸಂಚಾರ ವ್ಯವಸ್ಥೆ ಎಂದಿನಂತೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಸುಮಾರು ಏಳು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶುಕ್ರವಾರ ಕರ್ಫ್ಯೂ ವಿಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>