<p> ಬೆಂಗಳೂರು: `ಮಠ ಮಂದಿರಗಳು ಸರ್ಕಾರದ ಮೇಲೆ ನಿಯಂತ್ರಣ ಹೇರುವ ಮೂಲಕ ಪ್ರಜಾಪ್ರಭುತ್ವನ್ನು ಕಗ್ಗೊಲೆ ಮಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಸಮಾನತೆಯನ್ನು ಪ್ರತಿಪಾದಿಸಿದ ಅಂಬೇಡ್ಕರ್ ಅಂತಹವರ ವ್ಯಕ್ತಿತ್ವದವರು ರಾಜಕೀಯ ನಾಯಕರಾಗಬೇಕು~ ಎಂದು ಚಿಂತಕ ಜಿ.ಕೆ.ಗೋವಿಂದರಾವ್ ಅಭಿಪ್ರಾಯಪಟ್ಟರು.<br /> <br /> ಕೆಎಸ್ಟಿಡಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ನೌಕರರ ವೆಲ್ಫೇರ್ ಅಸೋಸಿಯೇಷನ್ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್ . ಅಂಬೇಡ್ಕರ್ ಅವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.<br /> <br /> `ಸ್ವಾತಂತ್ಯ ಮತ್ತು ಸಮಾನತೆಗಳ ಚಳವಳಿಗಳು ಹುಟ್ಟಿಕೊಂಡಾಗಲೇ ಅದಕ್ಕೆ ವಿರುದ್ದವಾಗಿ ಧರ್ಮ ಮತ್ತು ಶಿಸ್ತಿನ ಹೆಸರಿನಲ್ಲಿ ಆರ್ಎಸ್ಎಸ್ ರೂಪ ಪಡೆಯಿತು. ಇಂತಹ ಸಂಘಟನೆಗಳು ಸರ್ಕಾರವನ್ನು ಆಳುತ್ತಿರುವುರುವುದು ಪ್ರಜಾಪ್ರಭುತ್ವದ ಅಣಕ~ ಎಂದು ವ್ಯಂಗ್ಯವಾಡಿದರು. `ಅಂಬೇಡ್ಕರ್ ಚಿಂತನೆಗಳಿಗೆ ಕೇವಲ ತತ್ವ ಸಿದ್ದಾಂತಗಳ ಚೌಕಟ್ಟು ಒದಗಿಸದೇ ಜನ ಜೀವನದ ಭಾಗವಾಗಬೇಕು. ಹಿಂದುಳಿದ ಜನಾಂಗದವರು ಯಾವುದೇ ಕೀಳರಿಮೆಯಿಲ್ಲದೇ ಮೀಸಲಾತಿಯನ್ನು ಪಡೆಯುವಂತಾಗಬೇಕು~ ಎಂದು ಆಶಿಸಿದರು.<br /> <br /> ಸಚಿವ ಎ.ನಾರಾಯಣಸ್ವಾಮಿ ಅವರು ಮಾತನಾಡಿ, `ದಲಿತರಿಗೆ ಮೀಸಲಾತಿ ಸಮರ್ಪಕವಾಗಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ವಿಧಾನಸೌಧದಲ್ಲಿರುವ ಪ್ರಧಾನ ಕಾರ್ಯದರ್ಶಿಗಳಲ್ಲಿ ಎಷ್ಟು ಜನ ದಲಿತರಿದ್ದಾರೆ. ಕೈಗಾರಿಕೆ ಸ್ಥಾಪನೆ ಸೇರಿದಂತೆ ಎಲ್ಲ ಪ್ರಮುಖ ಸ್ಥಾನಗಳಿಗೆ ದಲಿತರು ಅವಕಾಶ ಪಡೆಯುತ್ತಿದ್ದಾರೆಯೇ?~ ಎಂದು ಪ್ರಶ್ನಿಸಿದರು.<br /> <br /> ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಕೆ.ಎಸ್.ಟಿ.ಡಿ.ಸಿ ವ್ಯವಸ್ಥಾಪಕ ನಿರ್ದೇಶಕ ಸಿ.ಡಿ.ದೇವಯ್ಯ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಜಿ.ಸತ್ಯವತಿ, ಪ್ರವಾಸೋದ್ಯಮ ಇಲಾಖೆ ಹೆಚ್ಚುವರಿ ಆಯುಕ್ತ ಕೆ.ಸಿ. ಶ್ರೀರಾಮಯ್ಯ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> ಬೆಂಗಳೂರು: `ಮಠ ಮಂದಿರಗಳು ಸರ್ಕಾರದ ಮೇಲೆ ನಿಯಂತ್ರಣ ಹೇರುವ ಮೂಲಕ ಪ್ರಜಾಪ್ರಭುತ್ವನ್ನು ಕಗ್ಗೊಲೆ ಮಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಸಮಾನತೆಯನ್ನು ಪ್ರತಿಪಾದಿಸಿದ ಅಂಬೇಡ್ಕರ್ ಅಂತಹವರ ವ್ಯಕ್ತಿತ್ವದವರು ರಾಜಕೀಯ ನಾಯಕರಾಗಬೇಕು~ ಎಂದು ಚಿಂತಕ ಜಿ.ಕೆ.ಗೋವಿಂದರಾವ್ ಅಭಿಪ್ರಾಯಪಟ್ಟರು.<br /> <br /> ಕೆಎಸ್ಟಿಡಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ನೌಕರರ ವೆಲ್ಫೇರ್ ಅಸೋಸಿಯೇಷನ್ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್ . ಅಂಬೇಡ್ಕರ್ ಅವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.<br /> <br /> `ಸ್ವಾತಂತ್ಯ ಮತ್ತು ಸಮಾನತೆಗಳ ಚಳವಳಿಗಳು ಹುಟ್ಟಿಕೊಂಡಾಗಲೇ ಅದಕ್ಕೆ ವಿರುದ್ದವಾಗಿ ಧರ್ಮ ಮತ್ತು ಶಿಸ್ತಿನ ಹೆಸರಿನಲ್ಲಿ ಆರ್ಎಸ್ಎಸ್ ರೂಪ ಪಡೆಯಿತು. ಇಂತಹ ಸಂಘಟನೆಗಳು ಸರ್ಕಾರವನ್ನು ಆಳುತ್ತಿರುವುರುವುದು ಪ್ರಜಾಪ್ರಭುತ್ವದ ಅಣಕ~ ಎಂದು ವ್ಯಂಗ್ಯವಾಡಿದರು. `ಅಂಬೇಡ್ಕರ್ ಚಿಂತನೆಗಳಿಗೆ ಕೇವಲ ತತ್ವ ಸಿದ್ದಾಂತಗಳ ಚೌಕಟ್ಟು ಒದಗಿಸದೇ ಜನ ಜೀವನದ ಭಾಗವಾಗಬೇಕು. ಹಿಂದುಳಿದ ಜನಾಂಗದವರು ಯಾವುದೇ ಕೀಳರಿಮೆಯಿಲ್ಲದೇ ಮೀಸಲಾತಿಯನ್ನು ಪಡೆಯುವಂತಾಗಬೇಕು~ ಎಂದು ಆಶಿಸಿದರು.<br /> <br /> ಸಚಿವ ಎ.ನಾರಾಯಣಸ್ವಾಮಿ ಅವರು ಮಾತನಾಡಿ, `ದಲಿತರಿಗೆ ಮೀಸಲಾತಿ ಸಮರ್ಪಕವಾಗಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ವಿಧಾನಸೌಧದಲ್ಲಿರುವ ಪ್ರಧಾನ ಕಾರ್ಯದರ್ಶಿಗಳಲ್ಲಿ ಎಷ್ಟು ಜನ ದಲಿತರಿದ್ದಾರೆ. ಕೈಗಾರಿಕೆ ಸ್ಥಾಪನೆ ಸೇರಿದಂತೆ ಎಲ್ಲ ಪ್ರಮುಖ ಸ್ಥಾನಗಳಿಗೆ ದಲಿತರು ಅವಕಾಶ ಪಡೆಯುತ್ತಿದ್ದಾರೆಯೇ?~ ಎಂದು ಪ್ರಶ್ನಿಸಿದರು.<br /> <br /> ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಕೆ.ಎಸ್.ಟಿ.ಡಿ.ಸಿ ವ್ಯವಸ್ಥಾಪಕ ನಿರ್ದೇಶಕ ಸಿ.ಡಿ.ದೇವಯ್ಯ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಜಿ.ಸತ್ಯವತಿ, ಪ್ರವಾಸೋದ್ಯಮ ಇಲಾಖೆ ಹೆಚ್ಚುವರಿ ಆಯುಕ್ತ ಕೆ.ಸಿ. ಶ್ರೀರಾಮಯ್ಯ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>