<p>ಕೃಷ್ಣರಾಜಪುರ: ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕೃಷ್ಣರಾಜಪುರ ಮತ್ತು ಉದಯನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ತಾಲ್ಲೂಕು ಕಚೇರಿ ಎದುರು ಇತ್ತೀಚೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.<br /> <br /> ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎ.ಕೃಷ್ಣಪ್ಪ, `ರೈತರಿಗೆ ಉಚಿತ ವಿದ್ಯುತ್, ರಸಗೊಬ್ಬರ ಪೂರೈಸಲು ಸಾಧ್ಯವಾಗದ ಸರ್ಕಾರ, ಕಡು ಬಡವರಿಗೆ ಸಮರ್ಪಕ ಪಡಿತರ ಚೀಟಿ ವಿತರಿಸುವಲ್ಲಿಯೂ ವಿಫಲ ವಾಗಿದೆ~ ಎಂದು ಆರೋಪಿಸಿದರು.<br /> <br /> ವಿಧಾನ ಪರಿಷತ್ತಿನ ಮಾಜಿ ವಿರೋಧ ಪಕ್ಷದ ನಾಯಕ ವಿ.ಎಸ್. ಉಗ್ರಪ್ಪ, `ಸಾರ್ವಜನಿಕರ ಸಂಪತ್ತನ್ನು ಲೂಟಿ ಮಾಡಿರುವ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠಕಲಿಸಬೇಕು~ ಎಂದು ಕರೆ ನೀಡಿದರು.<br /> ಮಾಜಿ ಶಾಸಕ ಎಂ.ಟಿ.ಬಿ. ನಾಗರಾಜ್, ಬಿಬಿಎಂಪಿ ಸದಸ್ಯೆ ಕೆ. ಪೂರ್ಣಿಮಾ, ಮುಖಂಡರಾದ ಎಂ.ನಾರಾಯಣ್, ಡಿ.ಎ.ಗೋಪಾಲ್ ಮಾತನಾಡಿದರು.<br /> <br /> ಕೃಷ್ಣರಾಜಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಕೆರೆ ಎಸ್.ನಾರಾಯಣಸ್ವಾಮಿ, ಉದಯನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಪ್ರಸಾದರೆಡ್ಡಿ, ಯುವ ಕಾಂಗ್ರೆಸ್ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಪಕ್ಷದ ಒಂಬತ್ತು ವಾರ್ಡ್ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೃಷ್ಣರಾಜಪುರ: ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕೃಷ್ಣರಾಜಪುರ ಮತ್ತು ಉದಯನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ತಾಲ್ಲೂಕು ಕಚೇರಿ ಎದುರು ಇತ್ತೀಚೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.<br /> <br /> ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎ.ಕೃಷ್ಣಪ್ಪ, `ರೈತರಿಗೆ ಉಚಿತ ವಿದ್ಯುತ್, ರಸಗೊಬ್ಬರ ಪೂರೈಸಲು ಸಾಧ್ಯವಾಗದ ಸರ್ಕಾರ, ಕಡು ಬಡವರಿಗೆ ಸಮರ್ಪಕ ಪಡಿತರ ಚೀಟಿ ವಿತರಿಸುವಲ್ಲಿಯೂ ವಿಫಲ ವಾಗಿದೆ~ ಎಂದು ಆರೋಪಿಸಿದರು.<br /> <br /> ವಿಧಾನ ಪರಿಷತ್ತಿನ ಮಾಜಿ ವಿರೋಧ ಪಕ್ಷದ ನಾಯಕ ವಿ.ಎಸ್. ಉಗ್ರಪ್ಪ, `ಸಾರ್ವಜನಿಕರ ಸಂಪತ್ತನ್ನು ಲೂಟಿ ಮಾಡಿರುವ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠಕಲಿಸಬೇಕು~ ಎಂದು ಕರೆ ನೀಡಿದರು.<br /> ಮಾಜಿ ಶಾಸಕ ಎಂ.ಟಿ.ಬಿ. ನಾಗರಾಜ್, ಬಿಬಿಎಂಪಿ ಸದಸ್ಯೆ ಕೆ. ಪೂರ್ಣಿಮಾ, ಮುಖಂಡರಾದ ಎಂ.ನಾರಾಯಣ್, ಡಿ.ಎ.ಗೋಪಾಲ್ ಮಾತನಾಡಿದರು.<br /> <br /> ಕೃಷ್ಣರಾಜಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಕೆರೆ ಎಸ್.ನಾರಾಯಣಸ್ವಾಮಿ, ಉದಯನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಪ್ರಸಾದರೆಡ್ಡಿ, ಯುವ ಕಾಂಗ್ರೆಸ್ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಪಕ್ಷದ ಒಂಬತ್ತು ವಾರ್ಡ್ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>