<p><strong>ನವದೆಹಲಿ: </strong>ರಾಜ್ಯದ ನೂತನ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರ ಸರ್ಕಾರವನ್ನು ಅಸ್ಥಿರಗೊಳಿಸಲು ಪಕ್ಷದೊಳಗೆ ಕೆಲ ಶಕ್ತಿಗಳು ಪ್ರಯತ್ನ ನಡೆಸುತ್ತಿವೆ ಎಂದು ವಿಜಾಪುರ ಲೋಕಸಭಾ ಸದಸ್ಯ ರಮೇಶ್ ಜಿಗಜಿಣಗಿ ಆರೋಪಿಸಿದ್ದಾರೆ.<br /> <br /> ಸದಾನಂದಗೌಡರ ಕಾರ್ಯಶೈಲಿ, ದೃಢ ಹೆಜ್ಜೆ ಹಾಗೂ ದಕ್ಷತೆ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವುದರಲ್ಲಿ ಅನುಮಾನವಿಲ್ಲ. ಆದರೆ, ರಾಜ್ಯದಲ್ಲಿ ಪಕ್ಷ ಮತ್ತು ಹೆಚ್ಚು ದಿನ ಉಳಿಯಲಾರದು ಎಂಬ ಕುಯುಕ್ತಿಯಿಂದ ಕೆಲವು ಶಕ್ತಿಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು, ಈ ಶಕ್ತಿಗಳು ಬೆಳೆಯಲು ಬಿಡಬಾರದು ಎಂದು ಜಿಗಜಿಣಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಬಿಜೆಪಿ ಕಷ್ಟದ ದಿನಗಳು ನಿವಾರಣೆ ಆಗಿವೆ. ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರ ನಡುವೆ ಉತ್ತಮ ಹೊಂದಾಣಿಕೆ ಇದೆ. ಇದರಿಂದ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಡು ವೈರಿಯಾಗಿರುವ ಜಿಗಜಿಣಗಿ ಪಕ್ಷ, ಸರ್ಕಾರ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ, ರಾಜ್ಯ ಬಿಜೆಪಿ ನಾಯಕರು ತಮ್ಮ ಪ್ರತಿಷ್ಠೆಯನ್ನು ಬದಿಗೊತ್ತಬೇಕು ಎಂದು ಕಿವಿಮಾತು ಹೇಳಿದ್ದಾರೆ. ಜನ ಬಿಜೆಪಿ ಬಗೆಗೆ ಒಲವು ಹೊಂದಿದ್ದಾರೆ. <br /> <br /> ಈ ಕಾರಣಕ್ಕೆ ಪಕ್ಷದ ನಾಯಕರು ತಮ್ಮ ಪ್ರತಿಷ್ಠೆ ಬದಿಗೊತ್ತಬೇಕು. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ಸತ್ಯ ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಜ್ಯದ ನೂತನ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರ ಸರ್ಕಾರವನ್ನು ಅಸ್ಥಿರಗೊಳಿಸಲು ಪಕ್ಷದೊಳಗೆ ಕೆಲ ಶಕ್ತಿಗಳು ಪ್ರಯತ್ನ ನಡೆಸುತ್ತಿವೆ ಎಂದು ವಿಜಾಪುರ ಲೋಕಸಭಾ ಸದಸ್ಯ ರಮೇಶ್ ಜಿಗಜಿಣಗಿ ಆರೋಪಿಸಿದ್ದಾರೆ.<br /> <br /> ಸದಾನಂದಗೌಡರ ಕಾರ್ಯಶೈಲಿ, ದೃಢ ಹೆಜ್ಜೆ ಹಾಗೂ ದಕ್ಷತೆ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವುದರಲ್ಲಿ ಅನುಮಾನವಿಲ್ಲ. ಆದರೆ, ರಾಜ್ಯದಲ್ಲಿ ಪಕ್ಷ ಮತ್ತು ಹೆಚ್ಚು ದಿನ ಉಳಿಯಲಾರದು ಎಂಬ ಕುಯುಕ್ತಿಯಿಂದ ಕೆಲವು ಶಕ್ತಿಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು, ಈ ಶಕ್ತಿಗಳು ಬೆಳೆಯಲು ಬಿಡಬಾರದು ಎಂದು ಜಿಗಜಿಣಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಬಿಜೆಪಿ ಕಷ್ಟದ ದಿನಗಳು ನಿವಾರಣೆ ಆಗಿವೆ. ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರ ನಡುವೆ ಉತ್ತಮ ಹೊಂದಾಣಿಕೆ ಇದೆ. ಇದರಿಂದ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಡು ವೈರಿಯಾಗಿರುವ ಜಿಗಜಿಣಗಿ ಪಕ್ಷ, ಸರ್ಕಾರ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ, ರಾಜ್ಯ ಬಿಜೆಪಿ ನಾಯಕರು ತಮ್ಮ ಪ್ರತಿಷ್ಠೆಯನ್ನು ಬದಿಗೊತ್ತಬೇಕು ಎಂದು ಕಿವಿಮಾತು ಹೇಳಿದ್ದಾರೆ. ಜನ ಬಿಜೆಪಿ ಬಗೆಗೆ ಒಲವು ಹೊಂದಿದ್ದಾರೆ. <br /> <br /> ಈ ಕಾರಣಕ್ಕೆ ಪಕ್ಷದ ನಾಯಕರು ತಮ್ಮ ಪ್ರತಿಷ್ಠೆ ಬದಿಗೊತ್ತಬೇಕು. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ಸತ್ಯ ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>