<p><strong>ಹಾವೇರಿ: </strong>ರಾಜ್ಯ ಸರ್ಕಾರದ ನೂತನ ವೃತ್ತಿಶಿಕ್ಷಣ ಕಾಯ್ದೆಯ ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ನಗರದ ಜಿ.ಎಚ್.ಕಾಲೇಜು ಎದುರಿಗೆ ಕೆಲಕಾಲ ರಾಷ್ಟೀಯ ಹೆದ್ದಾರಿ ತಡೆನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಪ್ರತಿಭಟನೆ ನೇತೃತ್ವ ವಹಿಸಿದ್ದ ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪೂಜಾರ ಮಾತನಾಡಿ, ಸರ್ಕಾರ ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ ಕಾಯ್ದೆ ಹೆಸರಿನಲ್ಲಿ ವೃತ್ತಿ ಶಿಕ್ಷಣವನ್ನು ಮಾರಾಟ ಮಾಡಲು ಹೊರಟಿದೆ.<br /> <br /> ಎಂಜಿನಿಯರಿಂಗ್, ಮೆಡಿಕಲ್ ಕೋರ್ಸ್ಗಳ ಶುಲ್ಕ ಹೆಚ್ಚಿಸಿ, ಖಾಸಗಿ ಕಾಲೇಜುಗಳಿಗೆ ಸಿಇಟಿ ಪ್ರವೇಶ ಪ್ರಕ್ರಿಯೆ ಕೈ ಬಿಡಲು ಮುಂದಾಗಿದೆ. ಇದರಿಂದ ಲಕ್ಷಾಂತರ ದಲಿತ-, ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು.<br /> <br /> ಪ್ರತಿಭಟನೆಯಲ್ಲಿ ಎಸ್ಎಫ್ಐ ಮುಖಂಡರಾದ ಇಮಾಮ್ನದಾಫ್, ಪ್ರಸನ್ನ ಹಿರೇಮಠ, ಮಲ್ಲಿಕಾರ್ಜುನ ಹಿರೇಮಠ, ಮಹ್ಮದ್ರಫೀಕ್ ನದಾಫ್, ಮಂಜುನಾಥ ಉಪ್ಪಾರ, ಚಂದ್ರು ಶಂಕ್ರಪ್ಪನವರ, ದೀಪಕ್ ಕಬ್ಬೂರ, ವಿಶಾಲ ಹೇರೂರ, ಅಮಿತ ಶಿವಳ್ಳಿ, ಅರವಿಂದ ಪತ್ತಾರ, ಶೈಲಾ.ಕೆ., ಯಲ್ಲಮ್ಮ, ಸಬಿಹಾ, ರೂಪಾ , ಹರ್ಷಾ, ಅಕ್ಷಯ, ಸುಮಂತ ಹಂಚಿ ನಾಳ, ದರ್ಶನ ಉಪಾಸಿ, ಆನಂದ ಕೂಲಿ, ಅಭಿಲಾಷ ಹೊಸ ಮಠ, ಮಂಜುನಾಥ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ರಾಜ್ಯ ಸರ್ಕಾರದ ನೂತನ ವೃತ್ತಿಶಿಕ್ಷಣ ಕಾಯ್ದೆಯ ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ನಗರದ ಜಿ.ಎಚ್.ಕಾಲೇಜು ಎದುರಿಗೆ ಕೆಲಕಾಲ ರಾಷ್ಟೀಯ ಹೆದ್ದಾರಿ ತಡೆನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಪ್ರತಿಭಟನೆ ನೇತೃತ್ವ ವಹಿಸಿದ್ದ ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪೂಜಾರ ಮಾತನಾಡಿ, ಸರ್ಕಾರ ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ ಕಾಯ್ದೆ ಹೆಸರಿನಲ್ಲಿ ವೃತ್ತಿ ಶಿಕ್ಷಣವನ್ನು ಮಾರಾಟ ಮಾಡಲು ಹೊರಟಿದೆ.<br /> <br /> ಎಂಜಿನಿಯರಿಂಗ್, ಮೆಡಿಕಲ್ ಕೋರ್ಸ್ಗಳ ಶುಲ್ಕ ಹೆಚ್ಚಿಸಿ, ಖಾಸಗಿ ಕಾಲೇಜುಗಳಿಗೆ ಸಿಇಟಿ ಪ್ರವೇಶ ಪ್ರಕ್ರಿಯೆ ಕೈ ಬಿಡಲು ಮುಂದಾಗಿದೆ. ಇದರಿಂದ ಲಕ್ಷಾಂತರ ದಲಿತ-, ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಿದರು.<br /> <br /> ಪ್ರತಿಭಟನೆಯಲ್ಲಿ ಎಸ್ಎಫ್ಐ ಮುಖಂಡರಾದ ಇಮಾಮ್ನದಾಫ್, ಪ್ರಸನ್ನ ಹಿರೇಮಠ, ಮಲ್ಲಿಕಾರ್ಜುನ ಹಿರೇಮಠ, ಮಹ್ಮದ್ರಫೀಕ್ ನದಾಫ್, ಮಂಜುನಾಥ ಉಪ್ಪಾರ, ಚಂದ್ರು ಶಂಕ್ರಪ್ಪನವರ, ದೀಪಕ್ ಕಬ್ಬೂರ, ವಿಶಾಲ ಹೇರೂರ, ಅಮಿತ ಶಿವಳ್ಳಿ, ಅರವಿಂದ ಪತ್ತಾರ, ಶೈಲಾ.ಕೆ., ಯಲ್ಲಮ್ಮ, ಸಬಿಹಾ, ರೂಪಾ , ಹರ್ಷಾ, ಅಕ್ಷಯ, ಸುಮಂತ ಹಂಚಿ ನಾಳ, ದರ್ಶನ ಉಪಾಸಿ, ಆನಂದ ಕೂಲಿ, ಅಭಿಲಾಷ ಹೊಸ ಮಠ, ಮಂಜುನಾಥ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>