<p><strong>ಹೊಸಕೋಟೆ:</strong> ಮಕ್ಕಳ ಕಲಿಕೆಗೆ ಸರ್ಕಾರ ಹತ್ತು ಹಲವಾರು ಸೌಲಭ್ಯಗಳನ್ನು ಕಲ್ಪಿಸಿದ್ದು ಅದನ್ನು ಪೋಷಕರಿಗೆ ಮನವರಿಕೆ ಮಾಡುವುದರ ಮೂಲಕ ಶಿಕ್ಷಕರು ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟೇಶಪ್ಪ ಸಲಹೆ ಮಾಡಿದರು. <br /> <br /> ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಪಟ್ಟಣದ ಕೆಜಿಕೆಎಂಎಸ್ ಶಾಲೆ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಮಕ್ಕಳ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಪ್ರತಿ ವರ್ಷ ಕಡಿಮೆ ಆಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಅವರು, ದಾಖಲಾತಿ ಹೆಚ್ಚಿಸುವಲ್ಲಿ ಸರ್ಕಾರದಿಂದ ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ಪಟ್ಟಿಮಾಡಿ ಅದರ ಕರಪತ್ರವನ್ನು ಪೋಷಕರಿಗೆ ಹಂಚುವ ಮೂಲಕ ಮನವೊಲಿಸಲು ಮುಂದಾಗಬೇಕು. ಈ ವಿನೂತನ ಕಾರ್ಯಕ್ರಮ ರಾಜ್ಯದಲ್ಲೇ ಪ್ರಥಮವಾಗಿದೆ ಎಂದು ಹೇಳಿದರು.<br /> <br /> ದಾಖಲಾತಿ ಹೆಚ್ಚಿಸುವಲ್ಲಿ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಗುಣಮಟ್ಟದ ಕಲಿಕೆಗೆ ಬೇಕಾದ ಪೂರಕ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ಮಕ್ಕಳ ಪ್ರಗತಿಯನ್ನು ಪೋಷಕರಿಗೆ ಸಾದರಪಡಿಸುವ ಕಾರ್ಯಕ್ರಮವನ್ನು ಹೆಚ್ಚು ಹಮ್ಮಿಕೊಳ್ಳಬೇಕಿದೆ ಎಂದರು.<br /> <br /> ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ರಾಜು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಶ್ರೀನಿವಾಸ್ ಮುಖ್ಯ ಶಿಕ್ಷಕ ಕೆ.ರಮೇಶ್, ಅಕ್ಷರ ದಾಸೋಹ ಅಧಿಕಾರಿ ವೆಂಕಟೇಶಪ್ಪ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಜಣ್ಣ, ಮುನಿರಾಜು ಉಪಸ್ಥಿತರಿದ್ದರು. ಕೆ.ವಿ.ಶ್ರೀಕಾಂತ್ ಸ್ವಾಗತಿಸಿದರು.<br /> <br /> <strong>ಅಪರಿಚಿತ ವ್ಯಕ್ತಿಯ ಶವ ಪತ್ತೆ:</strong> ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಿಗನೂರು ಗ್ರಾಮದ ಬಳಿ ಅಪರಿಚಿತ ವ್ಯಕ್ತಿಯ ಶವವೊಂದು ಭಾನುವಾರ ಪತ್ತೆಯಾಗಿದೆ. ಕೊಳೆತು ನಾರುತ್ತಿದ್ದ ಸುಮಾರು 40 ವರ್ಷ ವಯಸ್ಸಿನ ಈ ವ್ಯಕ್ತಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಕಪ್ಪು ನೀಲಿ ಮಿಶ್ರಿತ ತುಂಬು ತೋಳಿನ ಅಂಗಿ ಧರಿಸಿದ್ದ. ಪೊಲೀಸರು ಅಸ್ವಾಭಾವಿಕ ಮರಣ ಮೊಕದ್ಧಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ಮಕ್ಕಳ ಕಲಿಕೆಗೆ ಸರ್ಕಾರ ಹತ್ತು ಹಲವಾರು ಸೌಲಭ್ಯಗಳನ್ನು ಕಲ್ಪಿಸಿದ್ದು ಅದನ್ನು ಪೋಷಕರಿಗೆ ಮನವರಿಕೆ ಮಾಡುವುದರ ಮೂಲಕ ಶಿಕ್ಷಕರು ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟೇಶಪ್ಪ ಸಲಹೆ ಮಾಡಿದರು. <br /> <br /> ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಪಟ್ಟಣದ ಕೆಜಿಕೆಎಂಎಸ್ ಶಾಲೆ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಮಕ್ಕಳ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಪ್ರತಿ ವರ್ಷ ಕಡಿಮೆ ಆಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಅವರು, ದಾಖಲಾತಿ ಹೆಚ್ಚಿಸುವಲ್ಲಿ ಸರ್ಕಾರದಿಂದ ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ಪಟ್ಟಿಮಾಡಿ ಅದರ ಕರಪತ್ರವನ್ನು ಪೋಷಕರಿಗೆ ಹಂಚುವ ಮೂಲಕ ಮನವೊಲಿಸಲು ಮುಂದಾಗಬೇಕು. ಈ ವಿನೂತನ ಕಾರ್ಯಕ್ರಮ ರಾಜ್ಯದಲ್ಲೇ ಪ್ರಥಮವಾಗಿದೆ ಎಂದು ಹೇಳಿದರು.<br /> <br /> ದಾಖಲಾತಿ ಹೆಚ್ಚಿಸುವಲ್ಲಿ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಗುಣಮಟ್ಟದ ಕಲಿಕೆಗೆ ಬೇಕಾದ ಪೂರಕ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ಮಕ್ಕಳ ಪ್ರಗತಿಯನ್ನು ಪೋಷಕರಿಗೆ ಸಾದರಪಡಿಸುವ ಕಾರ್ಯಕ್ರಮವನ್ನು ಹೆಚ್ಚು ಹಮ್ಮಿಕೊಳ್ಳಬೇಕಿದೆ ಎಂದರು.<br /> <br /> ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ರಾಜು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಶ್ರೀನಿವಾಸ್ ಮುಖ್ಯ ಶಿಕ್ಷಕ ಕೆ.ರಮೇಶ್, ಅಕ್ಷರ ದಾಸೋಹ ಅಧಿಕಾರಿ ವೆಂಕಟೇಶಪ್ಪ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಜಣ್ಣ, ಮುನಿರಾಜು ಉಪಸ್ಥಿತರಿದ್ದರು. ಕೆ.ವಿ.ಶ್ರೀಕಾಂತ್ ಸ್ವಾಗತಿಸಿದರು.<br /> <br /> <strong>ಅಪರಿಚಿತ ವ್ಯಕ್ತಿಯ ಶವ ಪತ್ತೆ:</strong> ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಿಗನೂರು ಗ್ರಾಮದ ಬಳಿ ಅಪರಿಚಿತ ವ್ಯಕ್ತಿಯ ಶವವೊಂದು ಭಾನುವಾರ ಪತ್ತೆಯಾಗಿದೆ. ಕೊಳೆತು ನಾರುತ್ತಿದ್ದ ಸುಮಾರು 40 ವರ್ಷ ವಯಸ್ಸಿನ ಈ ವ್ಯಕ್ತಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಕಪ್ಪು ನೀಲಿ ಮಿಶ್ರಿತ ತುಂಬು ತೋಳಿನ ಅಂಗಿ ಧರಿಸಿದ್ದ. ಪೊಲೀಸರು ಅಸ್ವಾಭಾವಿಕ ಮರಣ ಮೊಕದ್ಧಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>