<p><strong>ಹೊಸಪೇಟೆ:</strong> ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇದೇ, ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಕೆ ಮಾಡಿಕೊಂಡು ದೇಶದ ಪ್ರಗತಿಗೆ ಶ್ರಮಿಸುವಂತೆ ಹೊಸಪೇಟೆ ನಗರಸಭೆ ಅಧ್ಯಕ್ಷ ಎಂ. ಅಮ್ಜದ್ ವಿದ್ಯಾರ್ಥಿಗಳಿಗೆ ತಿಳಿಸಿದರು. <br /> <br /> ಹೊಸಪೇಟೆಯ ಸರ್ದಾರ ಪಟೇಲ್ ಸ್ಮಾರಕ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ `ಶಾಲೆಗಾಗಿ ನಾವು ನೀವು~ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> ಪ್ರಸಕ್ತ ವರ್ಷ ಅನುಷ್ಠಾನಕ್ಕೆ ಬಂದ ಮಕ್ಕಳ ಶಿಕ್ಷಣದ ಹಕ್ಕು ಕಾಯಿದೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಯೋಜನೆಯ ಸದುಪಯೋಗ ಪಡೆದು ಕೊಳ್ಳಲು ಸಲಹೆ ನೀಡಿದರು. <br /> <br /> ನಗರಸಭಾ ಸದಸ್ಯ ಟಿ.ಸೋಮಪ್ಪ, ನಾಮ ನಿರ್ದೇಶಿತ ಸದಸ್ಯೆ ಪದ್ಮಾವತಿ, ಕ್ಷೇತ್ರ ಸಮನ್ವಯಾಧಿಕಾರಿ ಚನ್ನಬಸಪ್ಪ ಅಶೋಕ ಜೀರೆ, ಮುಖ್ಯ ಶಿಕ್ಷಕಿ ಶಾಹೀದಾ ಬೇಗಂ, ರಮೇಶಬಾಬು ಹಾಜರಿದ್ದರು.<br /> ಎಸ್ಡಿಎಂಸಿ ಅಧ್ಯಕ್ಷ ಕುಮಾರ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. <br /> <br /> ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಅನಂತಶಯನಗುಡಿ, 82 ಡಣಾಪುರ, ಕೆ.ಆರ್.ನಾಯ್ಡು ಸರ್ಕಾರಿ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಬಸವನದುರ್ಗ ಸೇರಿದಂತೆ ನಗರದ ಅನೇಕ ಸರ್ಕಾರಿ ಶಾಲೆಗಳು ಸೇರಿದಂತೆ `ಶಾಲೆಗಾಗಿ ನಾವು-ನೀವು~ ಕಾರ್ಯಕ್ರಮ ಆಚರಿಸಿದರು.ಇದಕ್ಕೂ ಮುಂಚೆ ವಿದ್ಯಾರ್ಥಿ ಗಳಿಂದ ನಗರದಲ್ಲಿ ಜಾಥಾ ಕಾರ್ಯ ಕ್ರಮ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇದೇ, ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಕೆ ಮಾಡಿಕೊಂಡು ದೇಶದ ಪ್ರಗತಿಗೆ ಶ್ರಮಿಸುವಂತೆ ಹೊಸಪೇಟೆ ನಗರಸಭೆ ಅಧ್ಯಕ್ಷ ಎಂ. ಅಮ್ಜದ್ ವಿದ್ಯಾರ್ಥಿಗಳಿಗೆ ತಿಳಿಸಿದರು. <br /> <br /> ಹೊಸಪೇಟೆಯ ಸರ್ದಾರ ಪಟೇಲ್ ಸ್ಮಾರಕ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ `ಶಾಲೆಗಾಗಿ ನಾವು ನೀವು~ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> ಪ್ರಸಕ್ತ ವರ್ಷ ಅನುಷ್ಠಾನಕ್ಕೆ ಬಂದ ಮಕ್ಕಳ ಶಿಕ್ಷಣದ ಹಕ್ಕು ಕಾಯಿದೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಯೋಜನೆಯ ಸದುಪಯೋಗ ಪಡೆದು ಕೊಳ್ಳಲು ಸಲಹೆ ನೀಡಿದರು. <br /> <br /> ನಗರಸಭಾ ಸದಸ್ಯ ಟಿ.ಸೋಮಪ್ಪ, ನಾಮ ನಿರ್ದೇಶಿತ ಸದಸ್ಯೆ ಪದ್ಮಾವತಿ, ಕ್ಷೇತ್ರ ಸಮನ್ವಯಾಧಿಕಾರಿ ಚನ್ನಬಸಪ್ಪ ಅಶೋಕ ಜೀರೆ, ಮುಖ್ಯ ಶಿಕ್ಷಕಿ ಶಾಹೀದಾ ಬೇಗಂ, ರಮೇಶಬಾಬು ಹಾಜರಿದ್ದರು.<br /> ಎಸ್ಡಿಎಂಸಿ ಅಧ್ಯಕ್ಷ ಕುಮಾರ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. <br /> <br /> ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಅನಂತಶಯನಗುಡಿ, 82 ಡಣಾಪುರ, ಕೆ.ಆರ್.ನಾಯ್ಡು ಸರ್ಕಾರಿ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಬಸವನದುರ್ಗ ಸೇರಿದಂತೆ ನಗರದ ಅನೇಕ ಸರ್ಕಾರಿ ಶಾಲೆಗಳು ಸೇರಿದಂತೆ `ಶಾಲೆಗಾಗಿ ನಾವು-ನೀವು~ ಕಾರ್ಯಕ್ರಮ ಆಚರಿಸಿದರು.ಇದಕ್ಕೂ ಮುಂಚೆ ವಿದ್ಯಾರ್ಥಿ ಗಳಿಂದ ನಗರದಲ್ಲಿ ಜಾಥಾ ಕಾರ್ಯ ಕ್ರಮ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>