<p><strong>ಶ್ರೀರಂಗಪಟ್ಟಣ:</strong> ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆಯಿಂದ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಗುರುವಾರ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದರು.<br /> <br /> ಸುಮಾರು ಅರ್ಧ ತಾಸು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್ಗುಪ್ತ ಅವರ ವಿರುದ್ಧ ಘೋಷಣೆ ಕೂಗಿದರು. ಸ್ವಚ್ಛತೆಗಾಗಿ ತಿಂಗಳಿಗೆ ರೂ.23 ಸಾವಿರ ಹಣ ಖರ್ಚು ಮಾಡಲಾಗುತ್ತಿದೆ. ಗುತ್ತಿಗೆದಾರರು ಸ್ವಚ್ಛತೆ ಕಾರ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. <br /> <br /> ಶೌಚಾಲಯಗಳು ಕಟ್ಟಿಕೊಂಡಿದ್ದು, ಗಬ್ಬು ನಾರುತ್ತಿವೆ. ಸೊಳ್ಳೆಗಳ ಹಾವಳಿ ಮಿತಿ ಮೀರಿದ್ದು, ಆಸ್ಪತ್ರೆಗೆ ದಾಖಲಾದ ರೋಗಿಗಳು ರಾತ್ರಿ ವೇಳೆ ನಿದ್ರೆ ಮಾಡಲಾಗದೆ ವನವಾಸ ಅನುಭವಿಸುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಗಂಜಾಂ ರವಿಚಂದ್ರ ದೂರಿದರು.<br /> <br /> ಆಸ್ಪತ್ರೆಯ ಆವರಣದಲ್ಲಿ ಗಿಡಗಂಟಿಗಳು ಬೆಳೆದಿದ್ದು ಹಾವು, ಕ್ರಿಮಿಕೀಟಗಳು ಬರುತ್ತಿವೆ. ಅಲ್ಲಲ್ಲಿ ಕಸದ ರಾಶಿ ಬಿದ್ದಿದೆ. ಆಸ್ಪತ್ರೆ ಆವರಣದಲ್ಲಿ ಮೂಗು ಮುಚ್ಚಿ ತಿರುಗಾಡಬೇಕಾದ ಪರಿಸ್ಥಿತಿ ಬಂದಿದೆ. ಸ್ವಚ್ಛತೆಯ ಗುತ್ತಿಗೆ ಪಡೆದಿರುವ ವ್ಯಕ್ತಿ ಅಗತ್ಯ ಕೆಲಸಗಾರರನ್ನು ನೇಮಿಸಿಕೊಳ್ಳದಿರುವುದು ಸಮಸ್ಯೆಗೆ ಕಾರಣವಾಗಿದೆ.<br /> <br /> ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರತೆ ಇರುವ ವೈದ್ಯಕೀಯ ಸಿಬ್ಬಂದಿಯನ್ನು ಶೀಘ್ರ ನೇಮಕ ಮಾಡಬೇಕು ಎಂದು ಮುಖಂಡ ಕುಬೇರಪ್ಪ ಒತ್ತಾಯಿಸಿದರು. <br /> ಅಹವಾಲು ಆಲಿಸಿದ ಡಾ.ಶಶಿ, ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇರುವುದು ನಿಜ. <br /> <br /> ಆದರೆ ನಮ್ಮಿಂದ ಏನೂ ಮಾಡಲಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಈ ಕುರಿತು ಮೇಲಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದ ನಂತರ ಪ್ರತಿಭಟನೆ ಹಿಂಪಡೆದರು. ಹೊನ್ನಯ್ಯ, ಮರಳಾಗಾಲ ಸಿದ್ದರಾಜು, ವೈರಮುಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆಯಿಂದ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಗುರುವಾರ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದರು.<br /> <br /> ಸುಮಾರು ಅರ್ಧ ತಾಸು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್ಗುಪ್ತ ಅವರ ವಿರುದ್ಧ ಘೋಷಣೆ ಕೂಗಿದರು. ಸ್ವಚ್ಛತೆಗಾಗಿ ತಿಂಗಳಿಗೆ ರೂ.23 ಸಾವಿರ ಹಣ ಖರ್ಚು ಮಾಡಲಾಗುತ್ತಿದೆ. ಗುತ್ತಿಗೆದಾರರು ಸ್ವಚ್ಛತೆ ಕಾರ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. <br /> <br /> ಶೌಚಾಲಯಗಳು ಕಟ್ಟಿಕೊಂಡಿದ್ದು, ಗಬ್ಬು ನಾರುತ್ತಿವೆ. ಸೊಳ್ಳೆಗಳ ಹಾವಳಿ ಮಿತಿ ಮೀರಿದ್ದು, ಆಸ್ಪತ್ರೆಗೆ ದಾಖಲಾದ ರೋಗಿಗಳು ರಾತ್ರಿ ವೇಳೆ ನಿದ್ರೆ ಮಾಡಲಾಗದೆ ವನವಾಸ ಅನುಭವಿಸುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಗಂಜಾಂ ರವಿಚಂದ್ರ ದೂರಿದರು.<br /> <br /> ಆಸ್ಪತ್ರೆಯ ಆವರಣದಲ್ಲಿ ಗಿಡಗಂಟಿಗಳು ಬೆಳೆದಿದ್ದು ಹಾವು, ಕ್ರಿಮಿಕೀಟಗಳು ಬರುತ್ತಿವೆ. ಅಲ್ಲಲ್ಲಿ ಕಸದ ರಾಶಿ ಬಿದ್ದಿದೆ. ಆಸ್ಪತ್ರೆ ಆವರಣದಲ್ಲಿ ಮೂಗು ಮುಚ್ಚಿ ತಿರುಗಾಡಬೇಕಾದ ಪರಿಸ್ಥಿತಿ ಬಂದಿದೆ. ಸ್ವಚ್ಛತೆಯ ಗುತ್ತಿಗೆ ಪಡೆದಿರುವ ವ್ಯಕ್ತಿ ಅಗತ್ಯ ಕೆಲಸಗಾರರನ್ನು ನೇಮಿಸಿಕೊಳ್ಳದಿರುವುದು ಸಮಸ್ಯೆಗೆ ಕಾರಣವಾಗಿದೆ.<br /> <br /> ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರತೆ ಇರುವ ವೈದ್ಯಕೀಯ ಸಿಬ್ಬಂದಿಯನ್ನು ಶೀಘ್ರ ನೇಮಕ ಮಾಡಬೇಕು ಎಂದು ಮುಖಂಡ ಕುಬೇರಪ್ಪ ಒತ್ತಾಯಿಸಿದರು. <br /> ಅಹವಾಲು ಆಲಿಸಿದ ಡಾ.ಶಶಿ, ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇರುವುದು ನಿಜ. <br /> <br /> ಆದರೆ ನಮ್ಮಿಂದ ಏನೂ ಮಾಡಲಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಈ ಕುರಿತು ಮೇಲಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದ ನಂತರ ಪ್ರತಿಭಟನೆ ಹಿಂಪಡೆದರು. ಹೊನ್ನಯ್ಯ, ಮರಳಾಗಾಲ ಸಿದ್ದರಾಜು, ವೈರಮುಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>