<p>ಮುನ್ನಡೆಸುವ ಗುರು ಸಿಕ್ಕರೆ ಹಳ್ಳಿ ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಕ್ರೀಡಾ ಪ್ರತಿಭೆ ಹೇಗೆ ಪ್ರಕಟಗೊಳ್ಳುತ್ತದೆ; ಎಂಬುದಕ್ಕೆ ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಯೇ ಜೀವಂತ ಸಾಕ್ಷಿಯಾಗಿದೆ.<br /> <br /> ಈಚೆಗೆ ತುಮಕೂರು ವಿಶ್ವ ವಿದ್ಯಾಲಯವು ತುಮಕೂರಿನಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ಕುಸ್ತಿ ಮತ್ತು ಭಾರ ಎತ್ತುವ ಸ್ಪರ್ಧೆಗಳಲ್ಲಿ ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು 2 ಚಿನ್ನ, 4 ಬೆಳ್ಳಿ, 2 ಕಂಚು ಪಡೆದಿದ್ದಾರೆ. ಜೊತೆಗೆ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.<br /> <br /> ಭಾರ ಎತ್ತುವ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಸುಹಾಸ್ ಸಿದ್ದು, ಮಹಿಳಾ ವಿಭಾಗದಲ್ಲಿ ಎಂ.ಎಸ್.ಪವಿತ್ರಾ ಚಿನ್ನದ ಸಾಧನೆ ಮಾಡಿದರು. ಸಿ.ಎಸ್.ವಿನಯ್ಕುಮಾರ್, ಟಿ.ಎಲ್.ವಿವೇಕ್, ಎಂ.ಆರ್.ಕೋಮಲತಾ ಬೆಳ್ಳಿ ಪದಕ, ವಿದ್ಯಾ ಮತ್ತು ಶ್ವೇತ ಕಂಚು, ಕುಸ್ತಿಯಲ್ಲಿ ನದೀಮ್ ಬೆಳ್ಳಿ ಪದಕದ ಸಾಧನೆ ಮಾಡಿದರು.<br /> <br /> ಪುರುಷರ ಭಾರ ಎತ್ತುವ ಸ್ಪರ್ಧೆಯಲ್ಲಿ ತಂಡ ಸಮಗ್ರ ಪ್ರಶಸ್ತಿ ಗಳಿಸಿತು. ಈ ಸಾಧನೆಗೆ ಪ್ರಾಚಾರ್ಯ ಪ್ರೊ.ವಿ.ವರದರಾಜು ಪ್ರೋತ್ಸಾಹ ಹಾಗೂ 6 ತಿಂಗಳ ಹಿಂದೆ ಕಾಲೇಜಿಗೆ ಬಂದ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಜೆ.ಶೈಲೇಂದ್ರಕುಮಾರ್ ಕಾರಣ ಎನ್ನುತ್ತಾರೆ ವಿದ್ಯಾರ್ಥಿಗಳು.<br /> <br /> ಕಾಲೇಜಿನಲ್ಲಿ ಪ್ರಸ್ತುತ 800 ವಿದ್ಯಾರ್ಥಿಗಳಿದ್ದಾರೆ. ನಾಗರಾಜ್ ಮತ್ತು ಶ್ರೀನಿವಾಸ್ ಎಂಬ ಇಬ್ಬರು ದೈಹಿಕ ಶಿಕ್ಷಣ ಶಿಕ್ಷಕರು ಕೆಲ ಕಾಲ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸಿದ್ದು ಬಿಟ್ಟರೆ, ಸುಮಾರು 12 ವರ್ಷಗಳಿಂದ ಕಾಯಂ ದೈಹಿಕ ಶಿಕ್ಷಣ ನಿರ್ದೇಶಕರ ನೇಮಕವೇ ಆಗಿರಲಿಲ್ಲ. 6 ತಿಂಗಳ ಹಿಂದೆ ನೇಮಕಗೊಂಡ ಎಸ್.ಜೆ.ಶೈಲೇಂದ್ರಕುಮಾರ್ ಭರವಸೆ ಮೂಡಿಸಿದ್ದಾರೆ.<br /> <br /> ಸ್ವತಃ ಜಿಮ್ನ್ಯಾಸ್ಟಿಕ್ ಪಟುವಾಗಿರುವ ಎಸ್.ಜೆ.ಶೈಲೇಂದ್ರಕುಮಾರ್ ರಾಷ್ಟ್ರೀಯ ವಿಶ್ವವಿದ್ಯಾಲಯಗಳ ಸ್ಪರ್ಧೆಯ ಭಾರ ಎತ್ತುವ ಸ್ಪರ್ಧೆ, ದೇಹದಾರ್ಢ್ಯ ವಿಭಾಗದಲ್ಲಿ 2 ಬಾರಿ ಬೆಂಗಳೂರು ವಿಶ್ವವಿದ್ಯಾಲಯ ಪ್ರತಿನಿಧಿಸಿದ್ದಾರೆ. ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ 2 ಬೆಳ್ಳಿ, 1 ಚಿನ್ನದ ಪದಕ ಗೆದ್ದಿದ್ದಾರೆ. 1996ರಿಂದ 2001ರ ವರೆಗೆ ಒಟ್ಟು 10 ಚಿನ್ನದ ಪದಕ ಗೆದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುನ್ನಡೆಸುವ ಗುರು ಸಿಕ್ಕರೆ ಹಳ್ಳಿ ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಕ್ರೀಡಾ ಪ್ರತಿಭೆ ಹೇಗೆ ಪ್ರಕಟಗೊಳ್ಳುತ್ತದೆ; ಎಂಬುದಕ್ಕೆ ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಯೇ ಜೀವಂತ ಸಾಕ್ಷಿಯಾಗಿದೆ.<br /> <br /> ಈಚೆಗೆ ತುಮಕೂರು ವಿಶ್ವ ವಿದ್ಯಾಲಯವು ತುಮಕೂರಿನಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ಕುಸ್ತಿ ಮತ್ತು ಭಾರ ಎತ್ತುವ ಸ್ಪರ್ಧೆಗಳಲ್ಲಿ ಚಿಕ್ಕನಾಯಕನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು 2 ಚಿನ್ನ, 4 ಬೆಳ್ಳಿ, 2 ಕಂಚು ಪಡೆದಿದ್ದಾರೆ. ಜೊತೆಗೆ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.<br /> <br /> ಭಾರ ಎತ್ತುವ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಸುಹಾಸ್ ಸಿದ್ದು, ಮಹಿಳಾ ವಿಭಾಗದಲ್ಲಿ ಎಂ.ಎಸ್.ಪವಿತ್ರಾ ಚಿನ್ನದ ಸಾಧನೆ ಮಾಡಿದರು. ಸಿ.ಎಸ್.ವಿನಯ್ಕುಮಾರ್, ಟಿ.ಎಲ್.ವಿವೇಕ್, ಎಂ.ಆರ್.ಕೋಮಲತಾ ಬೆಳ್ಳಿ ಪದಕ, ವಿದ್ಯಾ ಮತ್ತು ಶ್ವೇತ ಕಂಚು, ಕುಸ್ತಿಯಲ್ಲಿ ನದೀಮ್ ಬೆಳ್ಳಿ ಪದಕದ ಸಾಧನೆ ಮಾಡಿದರು.<br /> <br /> ಪುರುಷರ ಭಾರ ಎತ್ತುವ ಸ್ಪರ್ಧೆಯಲ್ಲಿ ತಂಡ ಸಮಗ್ರ ಪ್ರಶಸ್ತಿ ಗಳಿಸಿತು. ಈ ಸಾಧನೆಗೆ ಪ್ರಾಚಾರ್ಯ ಪ್ರೊ.ವಿ.ವರದರಾಜು ಪ್ರೋತ್ಸಾಹ ಹಾಗೂ 6 ತಿಂಗಳ ಹಿಂದೆ ಕಾಲೇಜಿಗೆ ಬಂದ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಜೆ.ಶೈಲೇಂದ್ರಕುಮಾರ್ ಕಾರಣ ಎನ್ನುತ್ತಾರೆ ವಿದ್ಯಾರ್ಥಿಗಳು.<br /> <br /> ಕಾಲೇಜಿನಲ್ಲಿ ಪ್ರಸ್ತುತ 800 ವಿದ್ಯಾರ್ಥಿಗಳಿದ್ದಾರೆ. ನಾಗರಾಜ್ ಮತ್ತು ಶ್ರೀನಿವಾಸ್ ಎಂಬ ಇಬ್ಬರು ದೈಹಿಕ ಶಿಕ್ಷಣ ಶಿಕ್ಷಕರು ಕೆಲ ಕಾಲ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸಿದ್ದು ಬಿಟ್ಟರೆ, ಸುಮಾರು 12 ವರ್ಷಗಳಿಂದ ಕಾಯಂ ದೈಹಿಕ ಶಿಕ್ಷಣ ನಿರ್ದೇಶಕರ ನೇಮಕವೇ ಆಗಿರಲಿಲ್ಲ. 6 ತಿಂಗಳ ಹಿಂದೆ ನೇಮಕಗೊಂಡ ಎಸ್.ಜೆ.ಶೈಲೇಂದ್ರಕುಮಾರ್ ಭರವಸೆ ಮೂಡಿಸಿದ್ದಾರೆ.<br /> <br /> ಸ್ವತಃ ಜಿಮ್ನ್ಯಾಸ್ಟಿಕ್ ಪಟುವಾಗಿರುವ ಎಸ್.ಜೆ.ಶೈಲೇಂದ್ರಕುಮಾರ್ ರಾಷ್ಟ್ರೀಯ ವಿಶ್ವವಿದ್ಯಾಲಯಗಳ ಸ್ಪರ್ಧೆಯ ಭಾರ ಎತ್ತುವ ಸ್ಪರ್ಧೆ, ದೇಹದಾರ್ಢ್ಯ ವಿಭಾಗದಲ್ಲಿ 2 ಬಾರಿ ಬೆಂಗಳೂರು ವಿಶ್ವವಿದ್ಯಾಲಯ ಪ್ರತಿನಿಧಿಸಿದ್ದಾರೆ. ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ 2 ಬೆಳ್ಳಿ, 1 ಚಿನ್ನದ ಪದಕ ಗೆದ್ದಿದ್ದಾರೆ. 1996ರಿಂದ 2001ರ ವರೆಗೆ ಒಟ್ಟು 10 ಚಿನ್ನದ ಪದಕ ಗೆದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>