<p><strong>ಕೊಪ್ಪಳ: </strong>ಸರ್ಕಾರಿ ನೌಕರರಿಗಾಗಿ ಬುಧವಾರ ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.<br /> <br /> ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಈ ಶಿಬಿರಕ್ಕೆ ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ಚಾಲನೆ ನೀಡಿದರು.<br /> <br /> “ಇಲಾಖೆ ಹೊಂದಿರುವ ಸಿಬ್ಬಂದಿಯನ್ನಲ್ಲದೇ ನೆರೆಯ ಹೊಸಪೇಟೆ ಸಾರ್ವಜನಿಕ ಆಸ್ಪತ್ರೆಯ ತಜ್ಞವೈದ್ಯರನ್ನು ಸಹ ಈ ಶಿಬಿರಕ್ಕೆ ಆಹ್ವಾನಿಸಲಾಗಿದೆ” ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಎಸ್.ಕೆ.ದೇಸಾಯಿ, ಹೇಳಿದರು.<br /> <br /> “ಶಿಬಿರದಲ್ಲಿ 16 ಜನ ತಜ್ಞರು, 15 ಜನ ವೈದ್ಯರು, 10 ಜನ ಶುಶ್ರೂಷಕಿಯರು ಹಾಗೂ 20 ಜನ ಪ್ರಯೋಗಾಲಯ ತಂತ್ರಜ್ಞರು ಸೇರಿದಂತೆ ಒಟ್ಟು 90 ಜನ ಪಾಲ್ಗೊಂಡಿದ್ದಾರೆ. ಆಯುಷ್ ವೈದ್ಯರು ಸಹ ತಪಾಸಣೆ ನಡೆಸಿ, ಸಲಹೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ” ಎಂದರು.<br /> <br /> ರಕ್ತ, ಮೂತ್ರ, ಇ.ಸಿ.ಜಿ ಪರೀಕ್ಷೆಗಳನ್ನು ಉಚಿತವಾಗಿ ನೆರವೇರಿಸಲಾಗುತ್ತಿದೆ ಎಂದರು. ಶಿಬಿರದಲ್ಲಿ 328 ಪುರುಷರು, 79 ಮಹಿಳೆಯರು ಒಟ್ಟು 407 ನೌಕರರ ಆರೋಗ್ಯ ತಪಾಸಣೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಸರ್ಕಾರಿ ನೌಕರರಿಗಾಗಿ ಬುಧವಾರ ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.<br /> <br /> ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಈ ಶಿಬಿರಕ್ಕೆ ಜಿಲ್ಲಾಧಿಕಾರಿ ಕೆ.ಎಸ್.ಸತ್ಯಮೂರ್ತಿ ಚಾಲನೆ ನೀಡಿದರು.<br /> <br /> “ಇಲಾಖೆ ಹೊಂದಿರುವ ಸಿಬ್ಬಂದಿಯನ್ನಲ್ಲದೇ ನೆರೆಯ ಹೊಸಪೇಟೆ ಸಾರ್ವಜನಿಕ ಆಸ್ಪತ್ರೆಯ ತಜ್ಞವೈದ್ಯರನ್ನು ಸಹ ಈ ಶಿಬಿರಕ್ಕೆ ಆಹ್ವಾನಿಸಲಾಗಿದೆ” ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಎಸ್.ಕೆ.ದೇಸಾಯಿ, ಹೇಳಿದರು.<br /> <br /> “ಶಿಬಿರದಲ್ಲಿ 16 ಜನ ತಜ್ಞರು, 15 ಜನ ವೈದ್ಯರು, 10 ಜನ ಶುಶ್ರೂಷಕಿಯರು ಹಾಗೂ 20 ಜನ ಪ್ರಯೋಗಾಲಯ ತಂತ್ರಜ್ಞರು ಸೇರಿದಂತೆ ಒಟ್ಟು 90 ಜನ ಪಾಲ್ಗೊಂಡಿದ್ದಾರೆ. ಆಯುಷ್ ವೈದ್ಯರು ಸಹ ತಪಾಸಣೆ ನಡೆಸಿ, ಸಲಹೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ” ಎಂದರು.<br /> <br /> ರಕ್ತ, ಮೂತ್ರ, ಇ.ಸಿ.ಜಿ ಪರೀಕ್ಷೆಗಳನ್ನು ಉಚಿತವಾಗಿ ನೆರವೇರಿಸಲಾಗುತ್ತಿದೆ ಎಂದರು. ಶಿಬಿರದಲ್ಲಿ 328 ಪುರುಷರು, 79 ಮಹಿಳೆಯರು ಒಟ್ಟು 407 ನೌಕರರ ಆರೋಗ್ಯ ತಪಾಸಣೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>