<p><strong>ಬೆಂಗಳೂರು:</strong> ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸೂಕ್ತ ಸಲಹೆ ನೀಡುವ ಉದ್ದೇಶದಿಂದ ನೇಮಿಸಿದ್ದ, ಅಭಿವೃದ್ಧಿ ಆಯುಕ್ತ ಸುಬೀರ್ ಹರಿಸಿಂಗ್ ಅಧ್ಯಕ್ಷತೆಯ ಅಧಿಕಾರಿಗಳ ವೇತನ ಸಮಿತಿ ಸೋಮವಾರ ರಾತ್ರಿ ತನ್ನ ವರದಿಯನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಸಲ್ಲಿಸಿದೆ.</p>.<p>ವರದಿಯಲ್ಲಿನ ಶಿಫಾರಸುಗಳ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಸುಬೀರ್ ಅವರು `ವರದಿ ನೀಡುವುದಷ್ಟೇ ನಮ್ಮ ಕೆಲಸ. ವಿವರ ಬೇಕಿದ್ದರೆ ಮುಖ್ಯಮಂತ್ರಿಯವರನ್ನೇ ಸಂಪರ್ಕಿಸಬೇಕು~ ಎಂದು ಹೇಳಿದ್ದಾರೆ.</p>.<p>`ವೇತನ ಸಮಿತಿಯ ಶಿಫಾರಸುಗಳ ಬಗ್ಗೆ ಊಹಾಪೋಹಗಳು ಹಬ್ಬಿದ್ದು, ನಿಖರವಾಗಿ ಎಷ್ಟು ಪ್ರಮಾಣದ ವೇತನ ಹೆಚ್ಚಳವಾಗುತ್ತದೆ ಎಂಬುದು ಗೊತ್ತಾಗುತ್ತಿಲ್ಲ~ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್.ಬೈರಪ್ಪ `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದರು.</p>.<p>ಅಧಿಕಾರಿಗಳ ವೇತನ ಸಮಿತಿ ಗೋಪ್ಯವಾಗಿಯೇ ವರದಿಯನ್ನು ಮುಖ್ಯಮಂತ್ರಿಗೆ ತಲುಪಿಸಿದ್ದು, ಮುಂದಿನ ಸಾಲಿನ ಬಜೆಟ್ನಲ್ಲಿ ಆ ಕುರಿತು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅದನ್ನು ಬಹಿರಂಗಪಡಿಸುವುದು ಸರಿಯಲ್ಲ ಎಂಬ ಕಾರಣಕ್ಕೂ ಅದನ್ನು ಗೋಪ್ಯವಾಗಿ ಇಡಲಾಗಿದೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸೂಕ್ತ ಸಲಹೆ ನೀಡುವ ಉದ್ದೇಶದಿಂದ ನೇಮಿಸಿದ್ದ, ಅಭಿವೃದ್ಧಿ ಆಯುಕ್ತ ಸುಬೀರ್ ಹರಿಸಿಂಗ್ ಅಧ್ಯಕ್ಷತೆಯ ಅಧಿಕಾರಿಗಳ ವೇತನ ಸಮಿತಿ ಸೋಮವಾರ ರಾತ್ರಿ ತನ್ನ ವರದಿಯನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಸಲ್ಲಿಸಿದೆ.</p>.<p>ವರದಿಯಲ್ಲಿನ ಶಿಫಾರಸುಗಳ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಸುಬೀರ್ ಅವರು `ವರದಿ ನೀಡುವುದಷ್ಟೇ ನಮ್ಮ ಕೆಲಸ. ವಿವರ ಬೇಕಿದ್ದರೆ ಮುಖ್ಯಮಂತ್ರಿಯವರನ್ನೇ ಸಂಪರ್ಕಿಸಬೇಕು~ ಎಂದು ಹೇಳಿದ್ದಾರೆ.</p>.<p>`ವೇತನ ಸಮಿತಿಯ ಶಿಫಾರಸುಗಳ ಬಗ್ಗೆ ಊಹಾಪೋಹಗಳು ಹಬ್ಬಿದ್ದು, ನಿಖರವಾಗಿ ಎಷ್ಟು ಪ್ರಮಾಣದ ವೇತನ ಹೆಚ್ಚಳವಾಗುತ್ತದೆ ಎಂಬುದು ಗೊತ್ತಾಗುತ್ತಿಲ್ಲ~ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್.ಬೈರಪ್ಪ `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದರು.</p>.<p>ಅಧಿಕಾರಿಗಳ ವೇತನ ಸಮಿತಿ ಗೋಪ್ಯವಾಗಿಯೇ ವರದಿಯನ್ನು ಮುಖ್ಯಮಂತ್ರಿಗೆ ತಲುಪಿಸಿದ್ದು, ಮುಂದಿನ ಸಾಲಿನ ಬಜೆಟ್ನಲ್ಲಿ ಆ ಕುರಿತು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅದನ್ನು ಬಹಿರಂಗಪಡಿಸುವುದು ಸರಿಯಲ್ಲ ಎಂಬ ಕಾರಣಕ್ಕೂ ಅದನ್ನು ಗೋಪ್ಯವಾಗಿ ಇಡಲಾಗಿದೆ ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>