<p>ಬೆಳಗಾವಿ: ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಏಕರೂಪ ಕೌರ್ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಪ್ರಧಾನಮಂತ್ರಿಗಳ 15 ಅಂಶಗಳ ಕಲ್ಯಾಣ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> `15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಉಸ್ತುವಾರಿಗಾಗಿ ಜಿಲ್ಲಾ ಮಟ್ಟದಲ್ಲಿ ಸ್ಥಾಯಿ ಸಮಿತಿ ರಚಿಸಲಾಗಿದೆ~ ಎಂದು ಅವರು ಹೇಳಿದರು.<br /> <br /> ಸಮಿತಿ ರಾಜ್ಯ ಸದಸ್ಯ ಗಫಾರಸಾಬ ಕಲೇಗಾರ ಮಾತನಾಡಿ, ಜಿಲ್ಲೆಯ ಅಲ್ಪಸಂಖ್ಯಾತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದ ಕಲ್ಯಾಣ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.<br /> ರಾಜ್ಯ ಸಮಿತಿ ಸದಸ್ಯರಾದ ಉತ್ತಮ್ಚಂದ ಜೈನ್, ಮುಬಶೀರ ಅಹ್ಮದ, ಎ.ಎ.. ಗಂಜನ್ನವರ ಮತ್ತಿತರರು ಉಪಸ್ಥಿತರಿದ್ದರು.<br /> <br /> <strong>ಜೂನ್ 1ರಿಂದ ಬಸ್ ಪಾಸ್ ವಿತರಣೆ</strong><br /> ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆಯಲು ಜೂನ್ 1 ರಿಂದ ಅರ್ಜಿ ನಮೂನೆ ನೀಡಲಾಗುವುದು.<br /> <br /> ಅರ್ಜಿ ನಮೂನೆಗಳನ್ನು ಬೆಳಗಾವಿ ನಗರ, ತಾಲ್ಲೂಕು ಹಾಗೂ ಹೋಬಳಿ ಬಸ್ ನಿಲ್ದಾಣದ ಕೌಂಟರ್ಗಳಲ್ಲಿ ಉಚಿತವಾಗಿ ಪಡೆಯಬಹುದಾಗಿದೆ.<br /> <br /> ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ರಹವಾಸಿ ಪ್ರಮಾಣಪತ್ರ, ಶುಲ್ಕ ಪಾವತಿ ರಸೀದಿ, ಮೂರು ಭಾವಚಿತ್ರ ಸಲ್ಲಿಸಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <strong><br /> ಬೆಳಗಾವಿ-ಹುಬ್ಬಳ್ಳಿ ನಡುವೆ ಹವಾ ನಿಯಂತ್ರಿತ ಬಸ್</strong><br /> ಬೆಳಗಾವಿ ಹಾಗೂ ಹುಬ್ಬಳ್ಳಿ ವಿಭಾಗಗಳಿಂದ ಜಂಟಿಯಾಗಿ ಬೆಳಗಾವಿ-ಹುಬ್ಬಳ್ಳಿ ನಡುವೆ ತಡೆ ರಹಿತ ಮೇಘದೂತ ಹವಾನಿಯಂತ್ರಿತ ಬಸ್ ಕಾರ್ಯಾಚರಣೆ ಆರಂಭಿಸಲಾಗಿದೆ.<br /> <br /> ವಿಶೇಷ ಪ್ರೋತ್ಸಾಹ ದರದಲ್ಲಿ ಆರಂಭಿಸಲಾಗಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಏಕರೂಪ ಕೌರ್ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಪ್ರಧಾನಮಂತ್ರಿಗಳ 15 ಅಂಶಗಳ ಕಲ್ಯಾಣ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.<br /> <br /> `15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಉಸ್ತುವಾರಿಗಾಗಿ ಜಿಲ್ಲಾ ಮಟ್ಟದಲ್ಲಿ ಸ್ಥಾಯಿ ಸಮಿತಿ ರಚಿಸಲಾಗಿದೆ~ ಎಂದು ಅವರು ಹೇಳಿದರು.<br /> <br /> ಸಮಿತಿ ರಾಜ್ಯ ಸದಸ್ಯ ಗಫಾರಸಾಬ ಕಲೇಗಾರ ಮಾತನಾಡಿ, ಜಿಲ್ಲೆಯ ಅಲ್ಪಸಂಖ್ಯಾತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದ ಕಲ್ಯಾಣ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.<br /> ರಾಜ್ಯ ಸಮಿತಿ ಸದಸ್ಯರಾದ ಉತ್ತಮ್ಚಂದ ಜೈನ್, ಮುಬಶೀರ ಅಹ್ಮದ, ಎ.ಎ.. ಗಂಜನ್ನವರ ಮತ್ತಿತರರು ಉಪಸ್ಥಿತರಿದ್ದರು.<br /> <br /> <strong>ಜೂನ್ 1ರಿಂದ ಬಸ್ ಪಾಸ್ ವಿತರಣೆ</strong><br /> ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆಯಲು ಜೂನ್ 1 ರಿಂದ ಅರ್ಜಿ ನಮೂನೆ ನೀಡಲಾಗುವುದು.<br /> <br /> ಅರ್ಜಿ ನಮೂನೆಗಳನ್ನು ಬೆಳಗಾವಿ ನಗರ, ತಾಲ್ಲೂಕು ಹಾಗೂ ಹೋಬಳಿ ಬಸ್ ನಿಲ್ದಾಣದ ಕೌಂಟರ್ಗಳಲ್ಲಿ ಉಚಿತವಾಗಿ ಪಡೆಯಬಹುದಾಗಿದೆ.<br /> <br /> ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ರಹವಾಸಿ ಪ್ರಮಾಣಪತ್ರ, ಶುಲ್ಕ ಪಾವತಿ ರಸೀದಿ, ಮೂರು ಭಾವಚಿತ್ರ ಸಲ್ಲಿಸಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <strong><br /> ಬೆಳಗಾವಿ-ಹುಬ್ಬಳ್ಳಿ ನಡುವೆ ಹವಾ ನಿಯಂತ್ರಿತ ಬಸ್</strong><br /> ಬೆಳಗಾವಿ ಹಾಗೂ ಹುಬ್ಬಳ್ಳಿ ವಿಭಾಗಗಳಿಂದ ಜಂಟಿಯಾಗಿ ಬೆಳಗಾವಿ-ಹುಬ್ಬಳ್ಳಿ ನಡುವೆ ತಡೆ ರಹಿತ ಮೇಘದೂತ ಹವಾನಿಯಂತ್ರಿತ ಬಸ್ ಕಾರ್ಯಾಚರಣೆ ಆರಂಭಿಸಲಾಗಿದೆ.<br /> <br /> ವಿಶೇಷ ಪ್ರೋತ್ಸಾಹ ದರದಲ್ಲಿ ಆರಂಭಿಸಲಾಗಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>