<p><strong>ನವದೆಹಲಿ (ಪಿಟಿಐ/ ಐಎಎನ್ಎಸ್): </strong>ದೆಹಲಿಯಲ್ಲಿ ಸರ್ಕಾರ ರಚಿಸಲು ಆಮ್ ಆದ್ಮಿ ಪಕ್ಷ (ಎಎಪಿ) ಸಿದ್ಧವಿದೆ ಎಂದು ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕಳೆದೆರಡು ವಾರಗಳ ರಾಜಕೀಯ ಬಿಕ್ಕಟ್ಟಿಗೆ ತೆರೆ ಬಿದ್ದಿದೆ.</p>.<p>ಅಲ್ಲದೇ ಈ ಸಂಬಂಧ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ ಅವರನ್ನು ಭೇಟಿ ಮಾಡುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಮತ್ತೊಂದೆಡೆ ಕೇಜ್ರಿವಾಲ್ ದೆಹಲಿಯ ನೂತನ ಮುಖ್ಯಮಂತ್ರಿ ಎಂದು ಎಎಪಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.</p>.<p>ಜೊತೆಗೆ ಜಂಗ ಅವರು ಪರವಾನಗಿ ನೀಡಿದರೇ ಜಂತರ್ ಮಂತರ್ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ.<br /> <br /> <strong>ಶೀಲಾ ಸ್ವಾಗತ: </strong>ಸರ್ಕಾರ ರಚಿಸುವ ಎಎಪಿ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸ್ವಾಗತಿಸಿದ್ದಾರೆ. ಅಲ್ಲದೇ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಎಎಪಿ ಈಡೇರಿಸಲಿದೆ ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p><strong>ಜನತಾ ತೀರ್ಪಿಗೆ ನಂಬಿಕೆ ದ್ರೋಹ</strong>: ಕಾಂಗ್ರೆಸ್ ಬೆಂಬಲದೊಂದಿಗೆ ಎಎಪಿ ಸರ್ಕಾರ ರಚನೆಗೆ ಮುಂದಾಗಿರುವುದು ತಮ್ಮ ತತ್ವಗಳನ್ನು ರಾಜಿ ಮಾಡಿಕೊಂಡಂತೆ ಹಾಗೂ ಜನತಾ ತೀರ್ಪಿಗೆ ದ್ರೋಹ ಬಗೆದಂತೆ ಎಂದು ಬಿಜೆಪಿ ಮುಖಂಡ ಹರ್ಷವರ್ಧನ್ ಕಟುವಾಗಿ ಟೀಕಿಸಿದ್ದಾರೆ.</p>.<p><strong>ಹಿನ್ನೆಲೆ: </strong>ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದೆಹಲಿ ಅತಂತ್ರ ಫಲಿತಾಂಶ ಕಂಡಿತ್ತು. 31 ಸ್ಥಾನ ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ, ಸರಳ ಬಹುಮತದ (36) ಕೊರತೆಯಿಂದಾಗಿ ಸರ್ಕಾರ ರಚನೆಗೆ ನಿರಾಕರಿಸಿತ್ತು. 8 ಸ್ಥಾನಕ್ಕೆ ಕುಸಿದಿದ್ದ ಕಾಂಗ್ರೆಸ್, ಎಎಪಿಗೆ ಬೇಷರತ್ತು ಬೆಂಬಲ ನೀಡುವುದಾಗಿ ಘೋಷಿಸಿತ್ತು. ಅದಾಗ್ಯೂ ಎಎಪಿ, ಸರ್ಕಾರ ರಚನೆಗೆ ಜನಾಭಿಪ್ರಾಯ ಸಂಗ್ರಹ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ/ ಐಎಎನ್ಎಸ್): </strong>ದೆಹಲಿಯಲ್ಲಿ ಸರ್ಕಾರ ರಚಿಸಲು ಆಮ್ ಆದ್ಮಿ ಪಕ್ಷ (ಎಎಪಿ) ಸಿದ್ಧವಿದೆ ಎಂದು ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕಳೆದೆರಡು ವಾರಗಳ ರಾಜಕೀಯ ಬಿಕ್ಕಟ್ಟಿಗೆ ತೆರೆ ಬಿದ್ದಿದೆ.</p>.<p>ಅಲ್ಲದೇ ಈ ಸಂಬಂಧ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ ಅವರನ್ನು ಭೇಟಿ ಮಾಡುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಮತ್ತೊಂದೆಡೆ ಕೇಜ್ರಿವಾಲ್ ದೆಹಲಿಯ ನೂತನ ಮುಖ್ಯಮಂತ್ರಿ ಎಂದು ಎಎಪಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.</p>.<p>ಜೊತೆಗೆ ಜಂಗ ಅವರು ಪರವಾನಗಿ ನೀಡಿದರೇ ಜಂತರ್ ಮಂತರ್ನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ.<br /> <br /> <strong>ಶೀಲಾ ಸ್ವಾಗತ: </strong>ಸರ್ಕಾರ ರಚಿಸುವ ಎಎಪಿ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಸ್ವಾಗತಿಸಿದ್ದಾರೆ. ಅಲ್ಲದೇ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಎಎಪಿ ಈಡೇರಿಸಲಿದೆ ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p><strong>ಜನತಾ ತೀರ್ಪಿಗೆ ನಂಬಿಕೆ ದ್ರೋಹ</strong>: ಕಾಂಗ್ರೆಸ್ ಬೆಂಬಲದೊಂದಿಗೆ ಎಎಪಿ ಸರ್ಕಾರ ರಚನೆಗೆ ಮುಂದಾಗಿರುವುದು ತಮ್ಮ ತತ್ವಗಳನ್ನು ರಾಜಿ ಮಾಡಿಕೊಂಡಂತೆ ಹಾಗೂ ಜನತಾ ತೀರ್ಪಿಗೆ ದ್ರೋಹ ಬಗೆದಂತೆ ಎಂದು ಬಿಜೆಪಿ ಮುಖಂಡ ಹರ್ಷವರ್ಧನ್ ಕಟುವಾಗಿ ಟೀಕಿಸಿದ್ದಾರೆ.</p>.<p><strong>ಹಿನ್ನೆಲೆ: </strong>ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದೆಹಲಿ ಅತಂತ್ರ ಫಲಿತಾಂಶ ಕಂಡಿತ್ತು. 31 ಸ್ಥಾನ ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ, ಸರಳ ಬಹುಮತದ (36) ಕೊರತೆಯಿಂದಾಗಿ ಸರ್ಕಾರ ರಚನೆಗೆ ನಿರಾಕರಿಸಿತ್ತು. 8 ಸ್ಥಾನಕ್ಕೆ ಕುಸಿದಿದ್ದ ಕಾಂಗ್ರೆಸ್, ಎಎಪಿಗೆ ಬೇಷರತ್ತು ಬೆಂಬಲ ನೀಡುವುದಾಗಿ ಘೋಷಿಸಿತ್ತು. ಅದಾಗ್ಯೂ ಎಎಪಿ, ಸರ್ಕಾರ ರಚನೆಗೆ ಜನಾಭಿಪ್ರಾಯ ಸಂಗ್ರಹ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>