<p><strong>ಬೆಂಗಳೂರು: </strong>ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತಹ ಸಂದರ್ಭ ಎದುರಾಗಿಲ್ಲ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು.<br /> ಯುವಜನ ಸೇವಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆ ಕೋಶ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2010-11ನೇ ಸಾಲಿನ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಅಕ್ರಮ ಗಣಿಗಾರಿಕೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಂದ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೀರಾ ಎಂಬ ಪ್ರಶ್ನೆಗೆ, `ಅಂತಹ ಪರಿಸ್ಥಿತಿ ಇನ್ನೂ ಉದ್ಭವಿಸಿಲ್ಲ~ ಎಂದರು.<br /> <br /> `ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಡಿ.ವಿ. ಸದಾನಂದಗೌಡ ಅವರು ಹೊಸ ಮುಖ್ಯಮಂತ್ರಿಗಳಾಗಿದ್ದಾರೆ. ಅವರಿಗೆ ಅವಕಾಶ ಕೊಡೋಣ. ಒಂದು ವೇಳೆ ಸದಾನಂದಗೌಡರು ಉತ್ತಮ ಆಡಳಿತ ನೀಡಿದಲ್ಲಿ ಈ ಹಿಂದೆ ರಾಜ್ಯದಲ್ಲಿ ಆಡಳಿತ ನೀಡಿ ಜನಮನ ಗೆದ್ದಂತಹ ನಾಯಕರ ಸಾಲಿಗೆ ಸೇರಬಹುದು~ ಎಂದರು.<br /> <br /> ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರ ರಾಜೀನಾಮೆ ನಂತರ ಹೊಸ ಲೋಕಾಯುಕ್ತರ ನೇಮಕ ಪ್ರಕ್ರಿಯೆ ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, `ತರಾತುರಿಯಲ್ಲಿ ಹೊಸ ಲೋಕಾಯುಕ್ತರ ನೇಮಕ ಮಾಡಲು ಸಾಧ್ಯವಾಗಲಾರದು. ಲೋಕಾಯುಕ್ತ ಸ್ಥಾನಕ್ಕೆ ಸೂಕ್ತ ಹಾಗೂ ಒಳ್ಳೆಯವರ ಹೆಸರನ್ನು ಸರ್ಕಾರ ಶಿಫಾರಸು ಮಾಡಿದಲ್ಲಿ ಐದು ನಿಮಿಷ ಕೂಡ ವಿಳಂಬ ಮಾಡದೆ ಸಹಿ ಹಾಕುತ್ತೇನೆ.<br /> <br /> ಆದರೆ, ಇಲ್ಲಿಯವರೆಗೆ ಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾರ ಹೆಸರು ಕೂಡ ನನಗೆ ಬಂದಿಲ್ಲ~ ಎಂದು ಹೇಳಿದರು.<br /> <br /> `ಈ ಹಿಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಉತ್ತಮ ಕೆಲಸ ಮಾಡಿದ್ದಾರೆ. ದೇಶದಲ್ಲಿ ಜನಲೋಕಪಾಲ್ ನೇಮಕಕ್ಕೆ ಒತ್ತಡ ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ದೇಶದಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದೆ.<br /> <br /> ಸಂತೋಷ್ ಹೆಗ್ಡೆ ಹಾಕಿಕೊಟ್ಟ ಮಾರ್ಗದಲ್ಲಿಯೇ ಮುಂದೆ ಲೋಕಾಯುಕ್ತರಾಗಿ ನೇಮಕಗೊಳ್ಳುವಂಥವರು ತಮ್ಮ ಸೇವೆಯನ್ನು ಮುಂದುವರಿಸಿಕೊಂಡು ಹೋಗುವಂತಾಗಲಿ~ ಎಂದರು.<br /> <br /> <strong>ಕಾನೂನು ಎಲ್ಲರಿಗೂ ಒಂದೇ:</strong> ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗುವ ಗಣ್ಯ ವ್ಯಕ್ತಿಗಳು ಜೈಲಿನಿಂದ ಬಚಾವಾಗಲು ಅನಾರೋಗ್ಯ ನೆಪದಲ್ಲಿ ಆಸ್ಪತ್ರೆ ಸೇರುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, `ಕಾನೂನು ದೃಷ್ಟಿಯಲ್ಲಿ ಎಲ್ಲರೂ ಒಂದೇ. ಕಾನೂನಿಗೆ ಯಾರೂ ಚಿಕ್ಕವರು-ದೊಡ್ಡವರಲ್ಲ.<br /> <br /> ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಕೂಡ ಸಾಧ್ಯವಿಲ್ಲ. ವ್ಯವಸ್ಥೆಯ ದೌರ್ಬಲ್ಯವನ್ನು ಸರಿಪಡಿಸುವ ಕೆಲಸ ನಡೆಯಬೇಕಿದೆ. ಈ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸುವ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ~ ಎಂದರು.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಂಧನ ಕುರಿತು ಕೇಳಿದಾಗ, `ಅವರ ಬಗ್ಗೆ ನನಗೇನೂ ವೈಯಕ್ತಿಕ ದ್ವೇಷವಿಲ್ಲ. ಲೋಕಾಯುಕ್ತ ವರದಿ ಮೇರೆಗೆ ನಾನು ಅವರ ವಿರುದ್ಧ ಆರೋಪ ಪಟ್ಟಿ ದಾಖಲಿಸಲು ಅನುಮತಿ ನೀಡಿದ್ದೇನಷ್ಟೇ. ಈ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿದಿಲ್ಲ. ಯಡಿಯೂರಪ್ಪ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ ಬಗ್ಗೆ ನಾನೇನೂ ಉತ್ತರಿಸಲಾರೆ~ ಎಂದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತಹ ಸಂದರ್ಭ ಎದುರಾಗಿಲ್ಲ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಸೋಮವಾರ ಇಲ್ಲಿ ಸ್ಪಷ್ಟಪಡಿಸಿದರು.<br /> ಯುವಜನ ಸೇವಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆ ಕೋಶ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2010-11ನೇ ಸಾಲಿನ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಅಕ್ರಮ ಗಣಿಗಾರಿಕೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಿಂದ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೀರಾ ಎಂಬ ಪ್ರಶ್ನೆಗೆ, `ಅಂತಹ ಪರಿಸ್ಥಿತಿ ಇನ್ನೂ ಉದ್ಭವಿಸಿಲ್ಲ~ ಎಂದರು.<br /> <br /> `ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಡಿ.ವಿ. ಸದಾನಂದಗೌಡ ಅವರು ಹೊಸ ಮುಖ್ಯಮಂತ್ರಿಗಳಾಗಿದ್ದಾರೆ. ಅವರಿಗೆ ಅವಕಾಶ ಕೊಡೋಣ. ಒಂದು ವೇಳೆ ಸದಾನಂದಗೌಡರು ಉತ್ತಮ ಆಡಳಿತ ನೀಡಿದಲ್ಲಿ ಈ ಹಿಂದೆ ರಾಜ್ಯದಲ್ಲಿ ಆಡಳಿತ ನೀಡಿ ಜನಮನ ಗೆದ್ದಂತಹ ನಾಯಕರ ಸಾಲಿಗೆ ಸೇರಬಹುದು~ ಎಂದರು.<br /> <br /> ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರ ರಾಜೀನಾಮೆ ನಂತರ ಹೊಸ ಲೋಕಾಯುಕ್ತರ ನೇಮಕ ಪ್ರಕ್ರಿಯೆ ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, `ತರಾತುರಿಯಲ್ಲಿ ಹೊಸ ಲೋಕಾಯುಕ್ತರ ನೇಮಕ ಮಾಡಲು ಸಾಧ್ಯವಾಗಲಾರದು. ಲೋಕಾಯುಕ್ತ ಸ್ಥಾನಕ್ಕೆ ಸೂಕ್ತ ಹಾಗೂ ಒಳ್ಳೆಯವರ ಹೆಸರನ್ನು ಸರ್ಕಾರ ಶಿಫಾರಸು ಮಾಡಿದಲ್ಲಿ ಐದು ನಿಮಿಷ ಕೂಡ ವಿಳಂಬ ಮಾಡದೆ ಸಹಿ ಹಾಕುತ್ತೇನೆ.<br /> <br /> ಆದರೆ, ಇಲ್ಲಿಯವರೆಗೆ ಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾರ ಹೆಸರು ಕೂಡ ನನಗೆ ಬಂದಿಲ್ಲ~ ಎಂದು ಹೇಳಿದರು.<br /> <br /> `ಈ ಹಿಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಉತ್ತಮ ಕೆಲಸ ಮಾಡಿದ್ದಾರೆ. ದೇಶದಲ್ಲಿ ಜನಲೋಕಪಾಲ್ ನೇಮಕಕ್ಕೆ ಒತ್ತಡ ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ದೇಶದಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದೆ.<br /> <br /> ಸಂತೋಷ್ ಹೆಗ್ಡೆ ಹಾಕಿಕೊಟ್ಟ ಮಾರ್ಗದಲ್ಲಿಯೇ ಮುಂದೆ ಲೋಕಾಯುಕ್ತರಾಗಿ ನೇಮಕಗೊಳ್ಳುವಂಥವರು ತಮ್ಮ ಸೇವೆಯನ್ನು ಮುಂದುವರಿಸಿಕೊಂಡು ಹೋಗುವಂತಾಗಲಿ~ ಎಂದರು.<br /> <br /> <strong>ಕಾನೂನು ಎಲ್ಲರಿಗೂ ಒಂದೇ:</strong> ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗುವ ಗಣ್ಯ ವ್ಯಕ್ತಿಗಳು ಜೈಲಿನಿಂದ ಬಚಾವಾಗಲು ಅನಾರೋಗ್ಯ ನೆಪದಲ್ಲಿ ಆಸ್ಪತ್ರೆ ಸೇರುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, `ಕಾನೂನು ದೃಷ್ಟಿಯಲ್ಲಿ ಎಲ್ಲರೂ ಒಂದೇ. ಕಾನೂನಿಗೆ ಯಾರೂ ಚಿಕ್ಕವರು-ದೊಡ್ಡವರಲ್ಲ.<br /> <br /> ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಕೂಡ ಸಾಧ್ಯವಿಲ್ಲ. ವ್ಯವಸ್ಥೆಯ ದೌರ್ಬಲ್ಯವನ್ನು ಸರಿಪಡಿಸುವ ಕೆಲಸ ನಡೆಯಬೇಕಿದೆ. ಈ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸುವ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ~ ಎಂದರು.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಂಧನ ಕುರಿತು ಕೇಳಿದಾಗ, `ಅವರ ಬಗ್ಗೆ ನನಗೇನೂ ವೈಯಕ್ತಿಕ ದ್ವೇಷವಿಲ್ಲ. ಲೋಕಾಯುಕ್ತ ವರದಿ ಮೇರೆಗೆ ನಾನು ಅವರ ವಿರುದ್ಧ ಆರೋಪ ಪಟ್ಟಿ ದಾಖಲಿಸಲು ಅನುಮತಿ ನೀಡಿದ್ದೇನಷ್ಟೇ. ಈ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿದಿಲ್ಲ. ಯಡಿಯೂರಪ್ಪ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ ಬಗ್ಗೆ ನಾನೇನೂ ಉತ್ತರಿಸಲಾರೆ~ ಎಂದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>