<p>ನವದೆಹಲಿ (ಐಎಎನ್ಎಸ್): ಸೇನಾ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಅವರ ಜನ್ಮ ದಿನಾಂಕ ವಿವಾದಕ್ಕೆ ಸಂಬಂಧಿಸಿದಂತೆ ಅವರ ಮತ್ತು ಸರ್ಕಾರದ ನಡುವೆ ಉಂಟಾಗಿರುವ ಕಾನೂನು ಸಮರವು ಒಂದು `ಅನಾರೋಗ್ಯಕರ ಸಂಪ್ರದಾಯ~ಕ್ಕೆ ಕಾರಣವಾಗಿದೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಎಂ.ಎಂ. ಪಲ್ಲಂರಾಜು ಬುಧವಾರ ಇಲ್ಲಿ ಅಭಿಪ್ರಾಯಪಟ್ಟರು.<br /> <br /> `ಇದು ಸಚಿವಾಲಯಕ್ಕಾಗಲೀ ಅಥವಾ ಸೇನಾಪಡೆಗಳಿಗಾಗಲೀ ಆರೋಗ್ಯಕಾರಿ ಸಂಪ್ರದಾಯವಲ್ಲ. ಅಲ್ಲದೆ, ಇದು ಸಾರ್ವಜನಿಕ ಚರ್ಚೆಯ ವಿಷಯವೂ ಅಲ್ಲ. ಇದೊಂದು ಅನಾರೋಗ್ಯಕರ ಬೆಳವಣಿಗೆಯಷ್ಟೇ~ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.<br /> <br /> <strong>ಸರ್ಕಾರಕ್ಕೆ ಜೇಟ್ಲಿ ತರಾಟೆ (ಮುಂಬೈ ವರದಿ): </strong>ಸೇನಾ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಅವರ ಜನ್ಮದಿನ ವಿವಾದವನ್ನು ಬಗೆಹರಿಸುವಲ್ಲಿ ಯುಪಿಎ ಸರ್ಕಾರ ವಿಫಲವಾಗಿದ್ದು, ಸರಿಯಾದ ರಾಜನೀತಿಜ್ಞತೆ ಅನುಸರಿಸಿಲ್ಲ ಎಂದು ಬಿಜೆಪಿ ನಾಯಕ ಅರುಣ್ ಜೇಟ್ಲಿ ಬುಧವಾರ ಇಲ್ಲಿ ಟೀಕಿಸಿದರು.<br /> <br /> ಸಂವಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿ, `ಸರ್ಕಾರವು ತೆರೆಯ ಮರೆಯಲ್ಲಿ ಈ ವಿವಾದವನ್ನು ಬಗೆಹರಿಸಲು ರಾಜನೀತಿಜ್ಞತೆಯನ್ನು ಅನುಸರಿಸಬೇಕಾಗಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ಸೇನಾ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಅವರ ಜನ್ಮ ದಿನಾಂಕ ವಿವಾದಕ್ಕೆ ಸಂಬಂಧಿಸಿದಂತೆ ಅವರ ಮತ್ತು ಸರ್ಕಾರದ ನಡುವೆ ಉಂಟಾಗಿರುವ ಕಾನೂನು ಸಮರವು ಒಂದು `ಅನಾರೋಗ್ಯಕರ ಸಂಪ್ರದಾಯ~ಕ್ಕೆ ಕಾರಣವಾಗಿದೆ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಎಂ.ಎಂ. ಪಲ್ಲಂರಾಜು ಬುಧವಾರ ಇಲ್ಲಿ ಅಭಿಪ್ರಾಯಪಟ್ಟರು.<br /> <br /> `ಇದು ಸಚಿವಾಲಯಕ್ಕಾಗಲೀ ಅಥವಾ ಸೇನಾಪಡೆಗಳಿಗಾಗಲೀ ಆರೋಗ್ಯಕಾರಿ ಸಂಪ್ರದಾಯವಲ್ಲ. ಅಲ್ಲದೆ, ಇದು ಸಾರ್ವಜನಿಕ ಚರ್ಚೆಯ ವಿಷಯವೂ ಅಲ್ಲ. ಇದೊಂದು ಅನಾರೋಗ್ಯಕರ ಬೆಳವಣಿಗೆಯಷ್ಟೇ~ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.<br /> <br /> <strong>ಸರ್ಕಾರಕ್ಕೆ ಜೇಟ್ಲಿ ತರಾಟೆ (ಮುಂಬೈ ವರದಿ): </strong>ಸೇನಾ ಮುಖ್ಯಸ್ಥ ಜನರಲ್ ವಿ.ಕೆ. ಸಿಂಗ್ ಅವರ ಜನ್ಮದಿನ ವಿವಾದವನ್ನು ಬಗೆಹರಿಸುವಲ್ಲಿ ಯುಪಿಎ ಸರ್ಕಾರ ವಿಫಲವಾಗಿದ್ದು, ಸರಿಯಾದ ರಾಜನೀತಿಜ್ಞತೆ ಅನುಸರಿಸಿಲ್ಲ ಎಂದು ಬಿಜೆಪಿ ನಾಯಕ ಅರುಣ್ ಜೇಟ್ಲಿ ಬುಧವಾರ ಇಲ್ಲಿ ಟೀಕಿಸಿದರು.<br /> <br /> ಸಂವಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿ, `ಸರ್ಕಾರವು ತೆರೆಯ ಮರೆಯಲ್ಲಿ ಈ ವಿವಾದವನ್ನು ಬಗೆಹರಿಸಲು ರಾಜನೀತಿಜ್ಞತೆಯನ್ನು ಅನುಸರಿಸಬೇಕಾಗಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>